Jagathrakshakan: ಕೇಂದ್ರ ಮಾಜಿ ಸಚಿವರ ಮೇಲೆ ಐಟಿ ದಾಳಿ
ಬೆಂಗಳೂರು, ಅಕ್ಟೋಬರ್ 05: ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಮತ್ತು ಹಾಲಿ ಡಿಎಂಕೆ ಸಂಸದ ಎಸ್ ಜಗತ್ರಕ್ಷಕ್ ಅವರಿಗೆ ಸೇರಿರುವ ಚೆನ್ನೈನಲ್ಲಿರುವ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ಗುರುವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ (IT Raids)ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಂಸತ್ ಸದಸ್ಯ ಮತ್ತು ಪಲ್ಲವರಂ ಮತ್ತು ಕ್ರೋಮ್ಪೇಟ್ನಲ್ಲಿರುವ ಸಂಸದರ ಸಂಬಂಧಿಕರ ಮನೆಗಳು, ಅವರಿಗೆ ಸಂಬಂಧಿಸಿದ ಚೆನ್ನೈನ ಟಿ.ನಗರ ಪ್ರದೇಶದ ಹೋಟೆಲ್ನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ ಎಂದು ವರದಿ ಆಗಿದೆ.

ಐಟಿ ದಾಳಿ ವಿರುದ್ಧ ಆಕ್ರೋಶ
ಡಿಎಂಕೆ ಸಂಸದರ ಮೇಲಿನ ಈ ಐಟಿ ದಾಳಿಯನ್ನು ಪಕ್ಷದ ವಕ್ತಾರರು ಖಂಡಿಸಿದ್ದಾರೆ. ಇದೊಂದು ರಾಜಕೀಯ ಸೇಡಿನ ಕ್ರಮ ಎಂಬುದು ಸ್ಪಷ್ಟವಾಗಿದೆ. ತಮಿಳುನಾಡಿನಲ್ಲಿ ಬಿಜೆಪಿ ಬೆಂಬಲಿತ ಎಐಎಡಿಎಂಕೆ ಮಂದಿ ಎಷ್ಟು ಕಾಲೇಜುಗಳನ್ನು ಮತ್ತು ಸಂಸ್ಥೆಗಳನ್ನು ನಡೆಸುತ್ತಿದ್ದಾರೆ ಎಂಬುದು ಜನರಿಗೆ ತಿಳಿದಿದೆ. ಹೀಗಿದ್ದರೂ ವಿರೋಧ ಪಕ್ಷಗಳನ್ನು ಭಯಭೀತಗೊಳಿಸಲು ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ದೂರಿದ್ದಾರೆ.
ಕೇಂದ್ರ ಸರ್ಕಾರದವರು ಅಧಿಕಾರ ನಡೆಸಲು ದೇಶವನ್ನು ಆಳಲು ಯೋಗ್ಯರಲ್ಲ. ಬಿಜೆಪಿಯು ಸಂವಿಧಾನವನ್ನು ಗೌರವಿಸದ ಅನಾಗರಿಕರು, ಅವರು ಕಾನೂನನ್ನು ಗೌರವಿಸುವುದಿಲ್ಲ. ಬದಲಾಗಿ ತಮ್ಮ ಲಾಭಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ ಎಂದು ಡಿಎಂಕೆ ವಕ್ತಾರರು ಆರೋಪಿಸಿದ್ದಾರೆ.
ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಐಟಿ ಮತ್ತು ಇಡಿಯನ್ನು ಭಾರತೀಯ ಜನತಾ ಪಕ್ಷ ಹೇಳಿದಂತೆ ಕೇಳುವ ಸಂಸ್ಥೆಗಳು ಎಂದು ಕರೆಯುವ ಮೂಲಕ ಕಿಡಿ ಕಾರಿದ್ದಾರೆ.
ಬಿಜೆಪಿಯ ಮುಂಚೂಣಿ ಸಂಸ್ಥೆಗಳಾದ ಐಟಿ ಮತ್ತು ಇಡಿ ಅಧಿಕಾರಿಗಳು ಚೆನ್ನೈನಲ್ಲಿರುವ ಡಿಎಂಕೆ ಸಂಸದ (ಜಗತ್ರಕ್ಷಕನ್) ಆವರಣದಲ್ಲಿ ಐಟಿ ದಾಳಿ ನಡೆಸಿದ್ದಾರೆ. ಇದೊಂದು ಸೇಡಿನ ರಾಜಕೀಯ ಭಾಗವಾಗಿದೆ. ಮುಂದಿನ ದಿನಗಳಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಇಂತಹ ರಾಜಕೀಯವನ್ನು ಜನರು ತಿರಸ್ಕರಿಸುತ್ತಾರೆ ಎಂದು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications