Jagathrakshakan: ಕೇಂದ್ರ ಮಾಜಿ ಸಚಿವರ ಮೇಲೆ ಐಟಿ ದಾಳಿ
ಬೆಂಗಳೂರು, ಅಕ್ಟೋಬರ್ 05: ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಮತ್ತು ಹಾಲಿ ಡಿಎಂಕೆ ಸಂಸದ ಎಸ್ ಜಗತ್ರಕ್ಷಕ್ ಅವರಿಗೆ ಸೇರಿರುವ ಚೆನ್ನೈನಲ್ಲಿರುವ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ಗುರುವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ (IT Raids)ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಂಸತ್ ಸದಸ್ಯ ಮತ್ತು ಪಲ್ಲವರಂ ಮತ್ತು ಕ್ರೋಮ್ಪೇಟ್ನಲ್ಲಿರುವ ಸಂಸದರ ಸಂಬಂಧಿಕರ ಮನೆಗಳು, ಅವರಿಗೆ ಸಂಬಂಧಿಸಿದ ಚೆನ್ನೈನ ಟಿ.ನಗರ ಪ್ರದೇಶದ ಹೋಟೆಲ್ನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ ಎಂದು ವರದಿ ಆಗಿದೆ.

ಐಟಿ ದಾಳಿ ವಿರುದ್ಧ ಆಕ್ರೋಶ
ಡಿಎಂಕೆ ಸಂಸದರ ಮೇಲಿನ ಈ ಐಟಿ ದಾಳಿಯನ್ನು ಪಕ್ಷದ ವಕ್ತಾರರು ಖಂಡಿಸಿದ್ದಾರೆ. ಇದೊಂದು ರಾಜಕೀಯ ಸೇಡಿನ ಕ್ರಮ ಎಂಬುದು ಸ್ಪಷ್ಟವಾಗಿದೆ. ತಮಿಳುನಾಡಿನಲ್ಲಿ ಬಿಜೆಪಿ ಬೆಂಬಲಿತ ಎಐಎಡಿಎಂಕೆ ಮಂದಿ ಎಷ್ಟು ಕಾಲೇಜುಗಳನ್ನು ಮತ್ತು ಸಂಸ್ಥೆಗಳನ್ನು ನಡೆಸುತ್ತಿದ್ದಾರೆ ಎಂಬುದು ಜನರಿಗೆ ತಿಳಿದಿದೆ. ಹೀಗಿದ್ದರೂ ವಿರೋಧ ಪಕ್ಷಗಳನ್ನು ಭಯಭೀತಗೊಳಿಸಲು ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ದೂರಿದ್ದಾರೆ.
ಕೇಂದ್ರ ಸರ್ಕಾರದವರು ಅಧಿಕಾರ ನಡೆಸಲು ದೇಶವನ್ನು ಆಳಲು ಯೋಗ್ಯರಲ್ಲ. ಬಿಜೆಪಿಯು ಸಂವಿಧಾನವನ್ನು ಗೌರವಿಸದ ಅನಾಗರಿಕರು, ಅವರು ಕಾನೂನನ್ನು ಗೌರವಿಸುವುದಿಲ್ಲ. ಬದಲಾಗಿ ತಮ್ಮ ಲಾಭಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ ಎಂದು ಡಿಎಂಕೆ ವಕ್ತಾರರು ಆರೋಪಿಸಿದ್ದಾರೆ.
ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಐಟಿ ಮತ್ತು ಇಡಿಯನ್ನು ಭಾರತೀಯ ಜನತಾ ಪಕ್ಷ ಹೇಳಿದಂತೆ ಕೇಳುವ ಸಂಸ್ಥೆಗಳು ಎಂದು ಕರೆಯುವ ಮೂಲಕ ಕಿಡಿ ಕಾರಿದ್ದಾರೆ.
ಬಿಜೆಪಿಯ ಮುಂಚೂಣಿ ಸಂಸ್ಥೆಗಳಾದ ಐಟಿ ಮತ್ತು ಇಡಿ ಅಧಿಕಾರಿಗಳು ಚೆನ್ನೈನಲ್ಲಿರುವ ಡಿಎಂಕೆ ಸಂಸದ (ಜಗತ್ರಕ್ಷಕನ್) ಆವರಣದಲ್ಲಿ ಐಟಿ ದಾಳಿ ನಡೆಸಿದ್ದಾರೆ. ಇದೊಂದು ಸೇಡಿನ ರಾಜಕೀಯ ಭಾಗವಾಗಿದೆ. ಮುಂದಿನ ದಿನಗಳಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಇಂತಹ ರಾಜಕೀಯವನ್ನು ಜನರು ತಿರಸ್ಕರಿಸುತ್ತಾರೆ ಎಂದು ತಿಳಿಸಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications