ಮೂರು ದಿನಗಳ ಬಳಿಕ ಬಿಬಿಸಿ ಕಚೇರಿಯಿಂದ ನಿರ್ಗಮಿಸಿದ ಐಟಿ ತಂಡ..!
ಬಿಬಿಸಿ ಇಂಡಿಯಾದ ದಾಖಲೆಗಳನ್ನು 59 ಗಂಟೆಗಳ ಕಾಲ ಶೋಧಿಸಿ ಆದಾಯ ತೆರಿಗೆ ಅಧಿಕಾರಿಗಳ ತಂಡ ಇಂದು ಕಚೇರಿಯಿಂದ ನಿರ್ಗಮಿಸಿದೆ.
ಆದಾಯ ತೆರಿಗೆ ಅಧಿಕಾರಿಗಳು ಬಿಬಿಸಿ ಕಚೇರಿಯಿಂದ ನಿರ್ಗಮಿಸಿದ್ದಾರೆ ಎಂದು ತಿಳಿದುಬಂದಿದೆ. ವರದಿಗಳ ಪ್ರಕಾರ, ಆದಾಯ ತೆರಿಗೆ ಇಲಾಖೆಯ ಸಮೀಕ್ಷೆಯು ದೆಹಲಿ-ಮುಂಬೈನ ಬಿಬಿಸಿ ಕಚೇರಿಗಳಲ್ಲಿ ಸುಮಾರು 59 ಗಂಟೆಗಳ ಕಾಲ ನಡೆಯಿತು. ಬಿಬಿಸಿ ಕಚೇರಿಯಲ್ಲಿ ಐಟಿ ಶೋಧ ಕಾರ್ಯ ಇಂದಿಗೆ ಮೂರನೇ ದಿನಕ್ಕೆ ಕಾಲಿಟ್ಟಿತ್ತು.
ಬಿಬಿಸಿ ಇಂಡಿಯಾ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ಸಮೀಕ್ಷೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಸಂಸ್ಥೆಯ 10 ಹಿರಿಯ ಸಿಬ್ಬಂದಿಗಳು 2 ದಿನಗಳಿಂದ ಮನೆಗೆ ತೆರಳಲು ಸಾಧ್ಯವಾಗದೇ ದೆಹಲಿಯ ಕಚೇರಿಯಲ್ಲೇ ಇದ್ದರು. ಐಟಿ ಅಧಿಕಾರಿಗಳ ಕಾರ್ಯಾಚರಣೆ ಇಂದೂ ಕೂಡ ಮುಂದುವರಿದಿದ್ದು, ಹಣಕಾಸಿನ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು, ಬಿಬಿಸಿ ಸುದ್ದಿ ಸಂಸ್ಥೆಯ ಎಲೆಕ್ಟ್ರಾನಿಕ್ ಮತ್ತು ಲೆಕ್ಕಪತ್ರಗಳ ದಾಖಲೆ ಪ್ರತಿಗಳನ್ನು ಪಡೆದುಕೊಳ್ಳಲಾಗಿದೆ.

ದೆಹಲಿಯಲ್ಲಿರುವ ಬಿಬಿಸಿ ಸಿಬ್ಬಂದಿ ಮಾಹಿತಿ ಪ್ರಕಾರ, ಐಟಿ ಅಧಿಕಾರಿಗಳ ಕಾರ್ಯಾಚರಣೆ ನಡೆಯುತ್ತಿರುವಾಗಿನಿಂದಲೂ ಬಿಬಿಸಿ ಎಂದಿನಂತೆ ತನ್ನ ಸುದ್ದಿ ಪ್ರಸಾರ ಮಾಡುತ್ತಿದೆ ಹಾಗೂ ಸಂಸ್ಥೆಯ ಹಲವು ಉದ್ಯೋಗಿಗಳು ಮನೆಯಿಂದ ಕೆಲಸ ಮಾಡುತ್ತಿರುವುದಾಗಿ ತಿಳಿಸಿದೆ. ದೆಹಲಿ ಹಾಗೂ ಮುಂಬೈ ಕಚೇರಿಗಳಲ್ಲಿ ಮಂಗಳವಾರದಂದು ಬೆಳಿಗ್ಗೆ 11:30 ಕ್ಕೆ ಐಟಿ ಸಮೀಕ್ಷೆ ಪ್ರಾರಂಭವಾಗಿತ್ತು. ಯಾವಾಗ ಸಮೀಕ್ಷೆ ಮುಕ್ತಾಯಗೊಳ್ಳುತ್ತದೆ ಎಂಬುದು ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡಗಳ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿತ್ತು. ಅಂತಾರಾಷ್ಟ್ರೀಯ ತೆರಿಗೆ ಮತ್ತು ಬಹುರಾಷ್ಟ್ರೀಯ ನಿಗಮದ ವಿವಿಧ ವಿಭಾಗಗಳ ನಡುವೆ ಹಣವನ್ನು ವರ್ಗಾವಣೆ ಮಾಡಿರ್ಪುವ ವಿಧಾನದ ಕುರಿತು ಸಮೀಕ್ಷೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೆಲ ದಿನಗಳ ಹಿಂದೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆಗಳ ಕುರಿತು ಎರಡು ಭಾಗಗಳ 'ಇಂಡಿಯಾ: ದಿ ಮೋದಿ ಕ್ವಶ್ಚನ್' ಎಂಬ ಸಾಕ್ಷ್ಯಚಿತ್ರವನ್ನು ಬಿಬಿಸಿ ಬ್ರಿಟನ್ನಲ್ಲಿ ಪ್ರಸಾರ ಮಾಡಿತ್ತು. ಇದಾಗಿ ಕೆಲವೇ ದಿನಗಳ ನಂತರ ಈ ಸಮೀಕ್ಷೆ ಹೆಸರಿನ ದಾಳಿ ನಡೆದಿದ್ದು, ಅಧಿಕಾರಿಗಳು ಸಿಬ್ಬಂದಿಗಳಿಂದ ಹಣಕಾಸಿನ ಡೇಟಾವನ್ನು ಸಂಗ್ರಹಿಸಿದ್ದಾರೆ. ಸುದ್ದಿ ಸಂಸ್ಥೆಯ ದಾಖಲೆಗಳ ಪ್ರತಿಗಳನ್ನೂ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications