500, 1000 ರು. ನೋಟು ನಿಷೇಧ ಸರ್ಕಾರದ್ದು, ಆರ್ ಬಿಐನದ್ದಲ್ಲ!
ನವದೆಹಲಿ, ಜ. 10: ಕೇಂದ್ರ ಸರ್ಕಾರವು ಈವರೆಗೆ ಹೇಳುತ್ತಿದ್ದಂತೆ, ಐದು ನೂರು ಹಾಗೂ ಸಾವಿರ ಮುಖಬೆಲೆಯ ನೋಟುಗಳು ಅಮಾನ್ಯ ಮಾಡುವ ನಿರ್ಧಾರ ಆರ್ ಬಿಐನದ್ದೇ ಎಂಬ ವಿಚಾರಕ್ಕೆ ತದ್ವಿರುದ್ಧವಾದ ವಿವರಣೆಯನ್ನು ಖುದ್ದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿ ಐ) ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ, ಇದೇ ತಿಂಗಳ 20ರಂದು ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್, ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಆ ವೇಳೆ, ಅವರಿಂದ ಮತ್ತಷ್ಟು ಕುತೂಹಲಕಾರಿ ವಿಚಾರಗಳು ಹೊರಬೀಳಬಹುದೆಂದು ನಿರೀಕ್ಷಿಸಲಾಗಿದೆ.

ಅಪನಗದೀಕರಣ ಪ್ರಕ್ರಿಯೆಯ ವಿಚಾರಣೆ ನಡೆಸುತ್ತಿರುವ ಸಂಸದೀಯ ಸಮಿತಿಯಾದ ಸಾರ್ವಜನಿಕ ಲೆಕ್ಕ ಸಮಿತಿಗೆ (ಪಿಎಸಿ) ಆರ್ ಬಿಐ ಕಳೆದ ತಿಂಗಳ 22ರಂದು ನೋಟು ನಿಷೇಧದ ಬಗ್ಗೆ ಏಳು ಪುಟಗಳ ವಿವರಣೆಯನ್ನು ನೀಡಿದೆ.
ಅದರಂತೆ, 2016ರ ನವೆಂಬರ್ 7ರಂದು ಕೇಂದ್ರ ಸರ್ಕಾರವು ನೋಟು ನಿಷೇಧದ ಪ್ರಸ್ತಾವನೆಯನ್ನು ಮುಂದಿಟ್ಟಿತ್ತು. ದೇಶಕ್ಕೆ ಪಿಡುಗಾಗಿ ಪರಿಣಮಿಸಿರುವ ಖೋಟಾ ನೋಟು, ಉಗ್ರರಿಗೆ ಸಿಗುತ್ತಿರುವ ಆರ್ಥಿಕ ಬೆಂಬಲ ಹಾಗೂ ಕಪ್ಪು ಹಣದ ನಿರ್ಮೂಲನೆ ದೊಡ್ಡ ಮುಖಬೆಲೆಯ ನೋಟುಗಳ ನಿಷೇಧವೇ ಬ್ರಹ್ಮಾಸ್ತ್ರ ಎಂದಿತ್ತು. ಹಾಗಾಗಿ, 500 ಹಾಗೂ 1000 ಮುಖಬೆಲೆಯ ನೋಟುಗಳನ್ನು ನಿಷೇಧಿಸಬೇಕೆಂದು ಆರ್ ಬಿಐಗೆ ಕೇಂದ್ರ ಸರ್ಕಾರವೇ ಸಲಹೆ ನೀಡಿತ್ತು ಎಂದು ಆರ್ ಬಿಐ ತಿಳಿಸಿದೆ.
ತನ್ನ ಈ ಆಲೋಚನೆಗೆ ಸಮರ್ಥನೆಯನ್ನೂ ನೀಡಿದ್ದ ಕೇಂದ್ರ ಸರ್ಕಾರ, ನೋಟು ನಿಷೇಧದಿಂದ ಕಪ್ಪು ಹಣವು ನಿಯಂತ್ರಣಗೊಂಡು ದೇಶದ ಅಭಿವೃದ್ಧಿಗೆ ಪೂರಕವಾದ ಆರ್ಥಿಕ ವಾತಾವರಣ ಸೃಷ್ಟಿಯಾಗುತ್ತದೆ ಎಂದು ತಿಳಿಸಿತ್ತು ಎಂದು ಆರ್ ಬಿಐ ಹೇಳಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications