ಪಾಕ್ ನಿಂದ ಕದನವಿರಾಮ ಉಲ್ಲಂಘನೆ: 2 ಭಾರತೀಯ ನಾಗರಿಕರ ಹತ್ಯೆ
ಶ್ರೀನಗರ, ಜನವರಿ 19: ಜಮ್ಮು ಕಾಶ್ಮೀರದ ಆರ್ ಎಸ್ ಪುರದಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಇಂದು(ಜ.19) ಬೆಳಿಗ್ಗೆ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ನಾಗರಿಕರು ಹತರಾಗಿದ್ದಾರೆ.
ಇಲ್ಲಿನ ಸಂಬಾ ಮತ್ತು ಕಾತುವಾ ಜಿಲ್ಲೆಗಳಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ಥಾನ ಗುಂಡಿನ ದಾಳಿ ನಡೆಸಿದೆ. ಪ್ರತಿಯಾಗಿ ಭಾರತೀಯ ಸೇನೆ ದಾಳಿ ನಡೆಸುತ್ತಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಜ.17 ರಂದು ಇದೇ ಸ್ಥಳದಲ್ಲಿ ಕದನ ವಿರಾಮ ಉಲ್ಲಂಘಿಸಿದ್ದ ಪಾಕಿಸ್ಥಾನ ನಡೆಸಿದ್ದ ಗುಂಡಿನ ದಾಳಿಗೆ ಭಾರತೀಯ ಸೈನಿಕರೊಬ್ಬರು ಮೃತರಾಗಿದ್ದರು.












Click it and Unblock the Notifications