Annamalai: ಜಯಲಲಿತಾ ಹಿಂದುತ್ವವಾದಿ ಎನ್ನುವ ಮೂಲಕ ತಮಿಳುನಾಡಿನಲ್ಲಿ ಬೆಂಕಿ ಹಚ್ಚಿದ ಅನ್ನಾಮಲೈ
ಚೆನ್ನೈ, ಮೇ, 26: ಮಾಜಿ ಐಪಿಎಸ್, ಭಾರತೀಯ ಜನತಾ ಪಕ್ಷದ ತಮಿಳುನಾಡು ರಾಜ್ಯ ಘಟಕದ ರಾಜ್ಯಾಧ್ಯಕ್ಷರಾಗಿರುವ ಅಣ್ಣಾಮಲೈ ಅವರು ಇದೀಗ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಬಗ್ಗೆ ಧರ್ಮದ ವಿಚಾರವನ್ನಿಟ್ಟುಕೊಂಡು ಒಂದು ಹೇಳಿಕೆಯನ್ನು ನೀಡಿದ್ದು, ಇದೀಗ ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾದರೆ ಅವರು ಹೇಳಿದ್ದಾದ್ರು ಏನು ಹಾಗೂ ಮುಂದೇನಾಯ್ತು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ತಮಿಳುನಾಡು 2021 ವಿಧಾನಸಭಾ ಚುನಾವಣೆಯಲ್ಲಿ ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಭವಗೊಂಡಿದ್ದರು. ತಮಿಳು ನಾಡು ಭಾರತೀಯ ಜನತಾ ಪಕ್ಷದ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಎಲ್.ಮುರುಗನ್ ಕೇಂದ್ರ ಸಚಿವರಾದ ನಂತರ, ತೆರವಾದ ಸ್ಥಾನಕ್ಕೆ ಇವರನ್ನು ಅಧ್ಯಕ್ಷರಾಗಿ ನೇಮಿಸಲಾಯ್ತು.

ಇದೀಗ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಹಿಂದುತ್ವದ ನಾಯಕಿ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಮಲೈ ಹೇಳಿದ್ದು, ಇದರ ವಿರುದ್ಧ ಎಐಎಡಿಎಂಕೆ ನಾಯಕರು ಅಸಮಾಧನ ಹೊರಹಾಕಿದ್ದಾರೆ.
ಈ ಕುರಿತು ಮಾಜಿ ಸಚಿವರಾದ ಡಿ.ಜಯಕುಮಾರ್ ಮತ್ತು ಆರ್.ಬಿ.ಉದಯ್ಕುಮಾರ್ ಪ್ರತಿಕ್ರಿಯಿಸಿ, "ಒಂದೇ ಧರ್ಮದಲ್ಲಿ ನಂಬಿಕೆ ಹೊಂದಿರುವ ಅಣ್ಣಾಮಲೈ, ಮೃತಪಟ್ಟ ನಾಯಕರ ಬಗ್ಗೆ ತಪ್ಪು ಗ್ರಹಿಕೆ ಬರುವಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ," ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು "ಜಯಲಲಿತಾ ದೇವರಲ್ಲಿ ನಂಬಿಕೆಯುಳ್ಳವರಾಗಿದ್ದರು. ಆದರೆ, ಧರ್ಮದಲ್ಲಿ ನಂಬಿಕೆ ಹೊಂದಿರಲಿಲ್ಲ. ಪ್ರತಿಯೊಬ್ಬರನ್ನೂ ಸಮಾನವಾಗಿ ಕಾಣುತ್ತಿದ್ದರು. ಅಂತಹ ನಾಯಕರನ್ನು ಯೋರೊಬ್ಬರೂ ಸಂಕುಚಿತರಾಗಿಸಲು ಸಾಧ್ಯವಿಲ್ಲ," ಎಂದು ವಿ.ಕೆ.ಶಶಿಕಲಾ ಅವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.
2019ರಲ್ಲಿ ಅಣ್ಣಮಲೈ ಅವರು ತಮ್ಮ ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿದ್ದು, ನಂತರ ಅವರು ತಮ್ಮ ತವರು ರಾಜ್ಯ ತಮಿಳುನಾಡಿಗೆ ಮರಳಿದರು. ಅವರು ನೈಸರ್ಗಿಕ ಕೃಷಿಯಲ್ಲಿ ಆಸಕ್ತಿ ಹೊಂದಿದ್ದರು ಮತ್ತು ಸಂಬಂಧಿತ ಕೆಲಸದಲ್ಲಿ ತೊಡಗಿದ್ದರು. ಬಳಿಕ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಸಿದ್ಧಾಂತದಿಂದ ಸ್ಫೂರ್ತಿ ಪಡೆದು ರಾಜಕೀಯ ಪಕ್ಷವಾದ ಭಾರತೀಯ ಜನತಾ ಪಕ್ಷದ ಸದಸ್ಯರಾದರು.
ಆಗಿನಿಂದ ಅವರು ಒಂದೇ ಸಿದ್ಧಂತವನ್ನು ಅನುಸರಿಸುತ್ತಿದ್ದಾರೆ. ಆದ್ದರಿಂದ ಅವರು ಮೃತಪಟ್ಟ ನಾಯಕರ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳ್ನು ಕೊಡುವುದು ಸರಿಯಲ್ಲ ಎನ್ನುವ ಆಕ್ರೋಶಗಳು ಭುಗಿಲೆದ್ದಿವೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications