ಪ್ರವಾಹ ಪರಿಹಾರಕ್ಕೆ ಸದಾ ನಿರತ ಭಾರತೀಯ ಸೇನೆ
ಶ್ರೀನಗರ, ಸೆ. 8: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಮೀರಿದ್ದು ಸೈನಿಕರು ಪರಿಹಾರ ಕಾರ್ಯ ಮತ್ತು ಸಂತ್ರಸ್ತರನ್ನು ರಕ್ಷಿಸುವಲ್ಲಿ ನಿರತರಾಗಿದ್ದಾರೆ.
ಎಲ್ಲರನ್ನು ರಕ್ಷಿಸಿದ ಹೊರತು ನಮ್ಮ ಸೇನೆ ಜಮ್ಮು ಕಾಶ್ಮೀರದಿಂದ ಹಿಂದೆ ಹೆಜ್ಜೆ ಇಡುವುದಿಲ್ಲ ಎಂದು ಸೇನಾ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಭೂ ಸೇನೆ, ವಾಯು ಸೇನೆ ಮತ್ತು ನೌಕಾ ಪಡೆ ಕಾರ್ಯನಿರತವಾಗಿದ್ದು ಶೀಘ್ರವೇ ಪರಿಹಾರ ಕ್ರಮಗಳನ್ನು ಪೂರೈಸಲಿದೆ. ಪ್ರವಾಹ ಪೀಡಿತ ಪ್ರದೇಶಗಳ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಲಾಗಿದೆ ಎಂದು ತಿಳಿಸಿದರು.
ಒನ್ ಇಂಡಿಯಾದೊಂದಿಗೆ ಮಾತನಾಡಿದ ಬೆಂಗಳೂರು ನಿವಾಸಿ, ನಿವೃತ್ತ ಏರ್ ಮಾರ್ಷಲ್ ಬಿ,ಕೆ.ಪಾಂಡೆ ಯಾವ ಕಾರಣಗಳಿಗೋಸ್ಕರ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆಗಳಿಗೆ ನೀಡಿದ್ದ ವಿಶೇಷಾಧಿಕಾರ ಹಿಂಪಡೆಯಲಾಗಿದೆ ಎಂಬುದು ಅರ್ಥವಾಗುತ್ತಿಲ್ಲ. ಸೇನೆಯ ಅನುಪಸ್ಥಿತಿಯಲ್ಲಿ ಇಂದಿನ ಪರಿಸ್ಥಿತಿ ನಿಯಂತ್ರಣ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
ಈ ರೀತಿಯಾದರೆ ಜನರು ದೇವರು ಮತ್ತು ವೈದ್ಯರ ಮೇಲಿನ ನಂಬಿಕೆಯನ್ನೇ ಕಳೆದುಕೊಂಡು ಬಿಡುತ್ತಾರೆ. ಒಂದು ಬಾರಿ ನಂಬಿಕೆ ಕಳೆದುಕೊಂಡರೆ ಮುಂದೆ ಪರಿಸ್ಥಿತಿ ಬದಲಾಯಿಸುವುದು ತುಂಬಾ ಕಷ್ಟ. ಸೇನೆ ಅನೇಕ ಶಿಬಿರಗಳನ್ನು ತೆರೆದಿದ್ದು ಆಹಾರ-ನೀರು ನೀಡುವ ಮೂಲಕ ಸಂತ್ರಸ್ತರನ್ನು ರಕ್ಷಿಸುವ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.
ಕರ್ನಲ್ ಆರ್ಡಿ ಬಾಲಿ ಹೇಳುವಂತೆ, ಯಾವ ಮಾರ್ಗಸೂಚಿ ಇಟ್ಟುಕೊಂಡು ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಣ ಮಾಡುತ್ತೇವೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಸೈನಿಕರಿಗೆ ನೈಸರ್ಗಿಕ ವಿಕೋಪ ಸಂದರ್ಭದಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂಬುದನ್ನು ತಿಳಿಸಲಾಗಿರುತ್ತದೆ ಎಂದು ಹೇಳಿದ್ದಾರೆ.
ಪರಿಹಾರ ಕಾರ್ಯದ ಸಲಕರಣೆಗಳು
* ಶ್ರೀನಗರ ವ್ಯಾಪ್ತಿಯಲ್ಲಿ ಸಾವಿರಾರು ಜನರು ಪ್ರವಾಹದಡಿ ಸಿಲುಕಿದ್ದು ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
* ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ 6 ತಂಡಗಳು ಕಾರ್ಯನಿರ್ವಹಿಸುತ್ತಿವೆ.
* 23 ಲಘು ವಿಮಾನಗಳು, 26 ಹೆಲಿಕ್ಯಾಪ್ಟರ್ಗಳೊಂದಿಗೆ ಸೈನಿಕರು ಜನರ ರಕ್ಷಣೆಗೆ ಧಾವಿಸುತ್ತಿದ್ದಾರೆ.
* 200 ರಕ್ಕೂ ಹೆಚ್ಚು ಜನ ಸೈನಿಕರು ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ARMY HELPLINE NUMBERS FOR EMERGENCY CALLS : #ArmyRescue #KashmirFloods011-23019831011- 23322045 pic.twitter.com/SEJWYltrHX
— ADG PI - INDIAN ARMY (@adgpi) September 8, 2014 Each Person Matters for Us : A Special Forces rescue mission for Mohammad Shafique in Vill- Hidayatpur #ArmyRescue pic.twitter.com/Gbu4aZUkg4
— ADG PI - INDIAN ARMY (@adgpi) September 7, 2014 Ongoing flood relief operations in J&K.#ArmyRescue pic.twitter.com/gtgBpcGJI3
— ADG PI - INDIAN ARMY (@adgpi) September 7, 2014 Flood relief update : 15000 + personnel rescued from Jammu & Srinagar regions.#ArmyRescue pic.twitter.com/xjGTaw8jO7
— ADG PI - INDIAN ARMY (@adgpi) September 7, 2014 Update : 2000 + provided with shelter,3500 with food & 3000+ with medical aid. 200 +Army columns employed #ArmyRescue pic.twitter.com/IZblatiAg8
— ADG PI - INDIAN ARMY (@adgpi) September 7, 2014 -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications