Get Updates
Get notified of breaking news, exclusive insights, and must-see stories!

ಪ್ರಣಬ್ ದಾದಾ ನಿರ್ಧಾರ ಆಘಾತ ತಂದಿದೆ: ಜಾಫರ್ ಶರೀಫ್

Recommended Video

      ಪ್ರಣಬ್ ಮುಖರ್ಜಿ ನಿರ್ಧಾರ ಆಘಾತ ತಂದಿದೆ ಎಂದ ಜಾಫರ್ ಶರೀಫ್ | Oneindia Kannada

      ನವದೆಹಲಿ, ಮೇ 30: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದ ಮೂರನೇ ವರ್ಷದ ವರ್ಗ ಸಮಾರಂಭದ ಸಮಾರೋಪಕ್ಕೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮುಖ್ಯ ಅತಿಥಿಯಾಗಿ ತೆರಳುತ್ತಿರುವುದು ನನಗೆ ಆಘಾತ ತಂದಿದೆ ಎಂದು ಕಾಂಗ್ರೆಸ್ ಮುಖಂಡ ಜಾಫರ್ ಶರೀಫ್ ಹೇಳಿದ್ದಾರೆ.

      ಹುಟ್ಟಿನಿಂದಲೂ ಒಬ್ಬ ಕಾಂಗ್ರೆಸ್ಸಿಗನಾಗಿ, ತಮ್ಮ ಹಿನ್ನೆಲೆಯನ್ನು ಮರೆತು ಹೀಗೆ ಆರೆಸ್ಸಸ್ ಕಾರ್ಯಕ್ರಮಕ್ಕೆ ತೆರಳುತ್ತಿರುವುದು ನನಗೆ ತೀವ್ರ ಆಘಾತ ತಂದಿದೆ ಎಂದು ಪ್ರಣಬ್ ಮುಖರ್ಜಿಯವರಿಗೆ ಬರೆದ ಪತ್ರವೊಂದರಲ್ಲಿ ಅವರು ಬರೆದಿದ್ದಾರೆ.

      Jaffer Sharief shocks over Pranab Mukherjees decision

      ಈ ನಿರ್ಧಾರ ತೆಗೆದುಕೊಳ್ಳುವಾಗ ಅವರು ಯಾರ ವಿಶ್ವಾಸವನ್ನೂ ತೆಗೆದುಕೊಂಡಿಲ್ಲ. ಇದ್ದಕ್ಕಿದ್ದಂತೇ ಈ ನಿರ್ಧಾರ ತೆಗೆದುಕೊಂಡಿದ್ದು ನಮಗೆ ಇರಿಸುಮುರಿಸುಂಟುಮಾಡಿದೆ ಎಂದು ಅವರು ಹೇಳಿದ್ದಾರೆ.

      ಪ್ರಣಬ್ ಮುಖರ್ಜಿ ಅವರು ಆರೆಸ್ಸೆಸ್ ಕಾರ್ಯಕ್ರಮಕ್ಕೆ ಬರಲು ಒಪ್ಪಿಗೆ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಆರೆಸ್ಸೆಸ್ ಹಿರಿಯರೊಬ್ಬರು, 'ಇದರಲ್ಲಿ ಅಚ್ಚರಿಯೇನೂ ಇಲ್ಲ. ಆರೆಸ್ಸೆಸ್ಸಿನ ಬಗ್ಗೆ ತಿಳಿದವರಿಗೆ ಇದು ಆಶ್ಚರ್ಯವನ್ನುಂಟುಮಾಡುವುದಿಲ್ಲ. ಆರೆಸ್ಸೆಸ್ ಎಂದಿಗೂ ಸಮಾಜದಲ್ಲಿ ಮಹತ್ವದ ಸ್ಥಾನ ಪಡೆದ ವ್ಯಕ್ತಿಗಳನ್ನು ಅತಿಥಿಗಳನ್ನಾಗಿ ಆಹ್ವಾನಿಸುತ್ತದೆ. ಅಂತೆಯೇ ಪ್ರಣಬ್ ಮುಖರ್ಜಿ ಅವರನ್ನು ಆಹ್ವಾನಿಸಿದ್ದೇವೆ. ಬರಲು ಒಪ್ಪಿಕೊಂಡಿದ್ದು ಅವರ ಉದಾತ್ತ ಗುಣವನ್ನು ತೋರಿಸುತ್ತದೆ' ಎಂದಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+