Jagan Mohan Reddy: ಪ್ರಚಾರದ ವೇಳೆ ಕಲ್ಲುತೂರಾಟದಲ್ಲಿ ಗಾಯಗೊಂಡ ಆಂಧ್ರ ಪ್ರದೇಶ ಸಿಎಂ ಜಗನ್ ರೆಡ್ಡಿ
ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿಜಯವಾಡದಲ್ಲಿ ಚುನಾವಣಾ ಪ್ರಚಾರದ ವೇಳೆ ಅಪರಿಚಿತರು ಎಸೆದ ಕಲ್ಲು ತಾಗಿ ಗಾಯಗೊಂಡಿದ್ದಾರೆ.
ವೈಎಸ್ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ತಮ್ಮ ಮೇಮಂತ ಸಿದ್ದಮ್ (ನಾವು ಸಿದ್ಧ) ಬಸ್ ಯಾತ್ರೆಯ ಭಾಗವಾಗಿ ಬಸ್ನಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಜಗನ್ ಮೋಹನ್ ರೆಡ್ಡಿ ಅವರ ಎಡ ಹುಬ್ಬಿನ ಮೇಲೆ ಕಲ್ಲು ತಗುಲಿದ್ದು ಸ್ವಲ್ಪದರಲ್ಲೇ ಅವರ ಕಣ್ಣಿಗೆ ಬೀಳುವುದರಿಂದ ತಪ್ಪಿಸಿಕೊಂಡಿದ್ದಾರೆ. ಅವರ ಗಾಯಕ್ಕೆ ಎರಡು ಹೊಲಿಗೆಗಳು ಬೇಕಾಗುತ್ತವೆ ಎಂದು ವೈದ್ಯರು ತಿಳಿಸಿದ್ದಾರೆ.
ಸಮೀಪದ ಶಾಲೆಯೊಂದರಿಂದ ಕಲ್ಲು ಎಸೆಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ದಾಳಿಯ ಬಗ್ಗೆ ವೈಎಸ್ಆರ್ಸಿಪಿ ಸದಸ್ಯರೊಬ್ಬರು ಪ್ರತಿಕ್ರಿಯೆ ನೀಡಿದ್ದು, ಇದು ಟಿಡಿಪಿ ಮೈತ್ರಿಕೂಟ ಮಾಡಿರುವ ಸಂಚು ಎಂದು ಆರೋಪಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು ಸೋಲುವ ಭಯದಿಂದ ಆತಂಕಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಜಗನ್ ಮೋಹನ್ ರೆಡ್ಡಿ ವಾಹನದ ಮೇಲೆ ನಿಂತು ರಸ್ತೆ ಬದಿಯಲ್ಲಿ ಸೇರಿದ್ದ ಜನರಿಗೆ ನಮಸ್ಕರಿಸುವುದನ್ನು ನೋಡಬಹುದು. ಬಳಿಕ ತಮ್ಮ ಎಡಗಣ್ಣಿನ ಹುಬ್ಬನ್ನು ಕೈಯಿಂದ ಮುಚ್ಚಿಕೊಂಡಿರುವುದನ್ನು ನೋಡಬಹುದು.
ಜಗನ್ ರೆಡ್ಡಿ ಜೊತೆಗಿದ್ದ ವ್ಯಕ್ತಿಯೊಬ್ಬರು ಬಟ್ಟೆಯಿಂದ ಎಡಗಣ್ಣನ್ನು ಮುಚ್ಚಿರುವುದನ್ನು ನೋಡಬಹುದು. ಬಸ್ನೊಳಗೆ ವೈದ್ಯರು ಜಗನ್ ಮೋಹನ್ ರೆಡ್ಡಿ ಅವರಿಗೆ ಚಿಕಿತ್ಸೆ ನೀಡಿದರು, ಬಳಿಕ ಅವರು ತಮ್ಮ ಪ್ರಚಾರವನ್ನು ಮುಂದುವರೆಸಿದರು.
ಆಂಧ್ರಪ್ರದೇಶದಲ್ಲಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆ ಒಟ್ಟಿಗೆ ನಡೆಯಲಿದೆ. 175 ಸದಸ್ಯ ಬಲದ ವಿಧಾನಸಭೆ ಮತ್ತು 25 ಲೋಕಸಭಾ ಸ್ಥಾನಗಳಿಗೆ ಮೇ 13ರಂದು ಚುನಾವಣೆ ನಡೆಯಲಿದೆ. ವೈಎಸ್ಆರ್ಸಿಪಿ 2019ರ ಚುನಾವಣೆಯಲ್ಲಿ 151 ವಿಧಾನಸಭಾ ಸ್ಥಾನಗಳು ಮತ್ತು 22 ಲೋಕಸಭಾ ಕ್ಷೇತ್ರಗಳನ್ನು ಗೆದ್ದಿತ್ತು. ಈ ಬಾರಿ ಟಿಡಿಪಿ, ಬಿಜೆಪಿ ಮತ್ತು ಜನಸೇನೆ ಮೈತ್ರಿಯಿಂದ ಸವಾಲು ಎದುರಿಸುತ್ತಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications