Get Updates
Get notified of breaking news, exclusive insights, and must-see stories!

Jagan Mohan Reddy: ಪ್ರಚಾರದ ವೇಳೆ ಕಲ್ಲುತೂರಾಟದಲ್ಲಿ ಗಾಯಗೊಂಡ ಆಂಧ್ರ ಪ್ರದೇಶ ಸಿಎಂ ಜಗನ್‌ ರೆಡ್ಡಿ

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿಜಯವಾಡದಲ್ಲಿ ಚುನಾವಣಾ ಪ್ರಚಾರದ ವೇಳೆ ಅಪರಿಚಿತರು ಎಸೆದ ಕಲ್ಲು ತಾಗಿ ಗಾಯಗೊಂಡಿದ್ದಾರೆ.

ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ತಮ್ಮ ಮೇಮಂತ ಸಿದ್ದಮ್ (ನಾವು ಸಿದ್ಧ) ಬಸ್ ಯಾತ್ರೆಯ ಭಾಗವಾಗಿ ಬಸ್‌ನಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

Jagan Mohan Reddy

ಜಗನ್ ಮೋಹನ್ ರೆಡ್ಡಿ ಅವರ ಎಡ ಹುಬ್ಬಿನ ಮೇಲೆ ಕಲ್ಲು ತಗುಲಿದ್ದು ಸ್ವಲ್ಪದರಲ್ಲೇ ಅವರ ಕಣ್ಣಿಗೆ ಬೀಳುವುದರಿಂದ ತಪ್ಪಿಸಿಕೊಂಡಿದ್ದಾರೆ. ಅವರ ಗಾಯಕ್ಕೆ ಎರಡು ಹೊಲಿಗೆಗಳು ಬೇಕಾಗುತ್ತವೆ ಎಂದು ವೈದ್ಯರು ತಿಳಿಸಿದ್ದಾರೆ.

ಸಮೀಪದ ಶಾಲೆಯೊಂದರಿಂದ ಕಲ್ಲು ಎಸೆಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ದಾಳಿಯ ಬಗ್ಗೆ ವೈಎಸ್‌ಆರ್‌ಸಿಪಿ ಸದಸ್ಯರೊಬ್ಬರು ಪ್ರತಿಕ್ರಿಯೆ ನೀಡಿದ್ದು, ಇದು ಟಿಡಿಪಿ ಮೈತ್ರಿಕೂಟ ಮಾಡಿರುವ ಸಂಚು ಎಂದು ಆರೋಪಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು ಸೋಲುವ ಭಯದಿಂದ ಆತಂಕಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಜಗನ್ ಮೋಹನ್ ರೆಡ್ಡಿ ವಾಹನದ ಮೇಲೆ ನಿಂತು ರಸ್ತೆ ಬದಿಯಲ್ಲಿ ಸೇರಿದ್ದ ಜನರಿಗೆ ನಮಸ್ಕರಿಸುವುದನ್ನು ನೋಡಬಹುದು. ಬಳಿಕ ತಮ್ಮ ಎಡಗಣ್ಣಿನ ಹುಬ್ಬನ್ನು ಕೈಯಿಂದ ಮುಚ್ಚಿಕೊಂಡಿರುವುದನ್ನು ನೋಡಬಹುದು.

ಜಗನ್ ರೆಡ್ಡಿ ಜೊತೆಗಿದ್ದ ವ್ಯಕ್ತಿಯೊಬ್ಬರು ಬಟ್ಟೆಯಿಂದ ಎಡಗಣ್ಣನ್ನು ಮುಚ್ಚಿರುವುದನ್ನು ನೋಡಬಹುದು. ಬಸ್‌ನೊಳಗೆ ವೈದ್ಯರು ಜಗನ್‌ ಮೋಹನ್ ರೆಡ್ಡಿ ಅವರಿಗೆ ಚಿಕಿತ್ಸೆ ನೀಡಿದರು, ಬಳಿಕ ಅವರು ತಮ್ಮ ಪ್ರಚಾರವನ್ನು ಮುಂದುವರೆಸಿದರು.

ಆಂಧ್ರಪ್ರದೇಶದಲ್ಲಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆ ಒಟ್ಟಿಗೆ ನಡೆಯಲಿದೆ. 175 ಸದಸ್ಯ ಬಲದ ವಿಧಾನಸಭೆ ಮತ್ತು 25 ಲೋಕಸಭಾ ಸ್ಥಾನಗಳಿಗೆ ಮೇ 13ರಂದು ಚುನಾವಣೆ ನಡೆಯಲಿದೆ. ವೈಎಸ್‌ಆರ್‌ಸಿಪಿ 2019ರ ಚುನಾವಣೆಯಲ್ಲಿ 151 ವಿಧಾನಸಭಾ ಸ್ಥಾನಗಳು ಮತ್ತು 22 ಲೋಕಸಭಾ ಕ್ಷೇತ್ರಗಳನ್ನು ಗೆದ್ದಿತ್ತು. ಈ ಬಾರಿ ಟಿಡಿಪಿ, ಬಿಜೆಪಿ ಮತ್ತು ಜನಸೇನೆ ಮೈತ್ರಿಯಿಂದ ಸವಾಲು ಎದುರಿಸುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+