Adani: ಅದಾನಿಯಿಂದ ಲಂಚ ಪಡೆದ ಆರೋಪ; ಜಗನ್ ರೆಡ್ಡಿ ಹೇಳಿದ್ದೇನು?
ಅದಾನಿ ಗ್ರೂಪ್ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಸದ್ಯ ಭಾರತ ರಾಜಕೀಯ ಮತ್ತು ಕೈಗಾರಿಕಾ ವಲಯದಲ್ಲಿ ಸಂಚಲನ ಮೂಡಿಸಿದೆ. ತಮಿಳುನಾಡು ಸರ್ಕಾರ ಮತ್ತು ಒಡಿಶಾದ ಬಿಜು ಜನತಾ ದಳ (ಬಿಜೆಡಿ) ಅದಾನಿ ಪವರ್ ವಿದ್ಯುತ್ ಖರೀದಿ ಪ್ರಕರಣದಲ್ಲಿ ಲಂಚ ಪಡೆದಿದೆ ಎನ್ನುವ ಆರೋಪ ಕೇಳಿ ಬಂದ ಬೆನ್ನಲ್ಲೇ, ಇದೀಗ ಆಂಧ್ರಪ್ರದೇಶ ಮಾಜಿ ಸಿಎಂ ಜಗನ್ ರೆಡ್ಡಿ ಸರ್ಕಾರದ ಅವಧಿಯಲ್ಲೂ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ.
ಅದಾನಿ ಗ್ರೂಪ್ನಿಂದ ವಿದ್ಯುತ್ ಖರೀದಿ ಒಪ್ಪಂದಕ್ಕಾಗಿ ತಮ್ಮ ಸರ್ಕಾರದ ಅವಧಿಯಲ್ಲಿ ಅಧಿಕಾರಿಗಳು ಲಂಚೆ ಪಡೆದಿದ್ದಾರೆ ಎಂದು ಯುಎಸ್ ಮಾಡಿರುವ ಆರೋಪವನ್ನು ಜಗನ್ ರೆಡ್ಡಿ ತಿರಸ್ಕರಿಸಿದ್ದಾರೆ. ಇದು ಸರ್ಕಾರದ ಸಂಸ್ಥೆಗಳ ನಡುವಿನ ಒಪ್ಪಂದವಾಗಿದ್ದು ಯಾವುದೇ ಖಾಸಗಿ ವ್ಯಕ್ತಿಗಳು ಹಸ್ತಕ್ಷೇಪ ಮಾಡಿಲ್ಲ ಎಂದು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಜಗನ್ ರೆಡ್ಡು ಸ್ಪಷ್ಟನೆ ನೀಡಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಗನ್ ರೆಡ್ಡಿ, ಕೇಂದ್ರ ಸರ್ಕಾರ ನಡೆಸುತ್ತಿರುವ ಸಾರ್ವಜನಿಕ ವಲಯದ ಘಟಕ (ಪಿಎಸ್ಯು) ಆಗಿರುವ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್ಇಸಿಐ) ತಮಿಳುನಾಡು, ಆಂಧ್ರಪ್ರದೇಶ ಮತ್ತು ಒಡಿಶಾ ಸೇರಿದಂತೆ ಹಲವು ರಾಜ್ಯಗಳಿಗೆ ಪ್ರತಿ ಯೂನಿಟ್ಗೆ ₹ 2.49 ದರದಲ್ಲಿ ವಿದ್ಯುತ್ ಪೂರೈಕೆ ಮಾಡಿದೆ. ಆಂಧ್ರಪ್ರದೇಶವು ಎಂದಿಗೂ ಕಡಿಮೆ ದರದಲ್ಲಿ ವಿದ್ಯುತ್ ಖರೀದಿಸಿಲ್ಲ ಎಂದು ಹೇಳಿದ ಅವರು, ರಾಜ್ಯಕ್ಕೆ ಕೆಲವು ಮನ್ನಾ ಸೇರಿದಂತೆ ಇತರ ಪ್ರೋತ್ಸಾಹಗಳನ್ನು ನೀಡಲಾಗಿದ್ದು, ಇದರಿಂದ ಸರ್ಕಾರದ ಮೇಲಿನ ಹೊರೆ ಕಡಿಮೆಯಾಗಿದೆ ಎಂದು ಹೇಳಿದರು.
ಮಾನನಷ್ಟ ಮೊಕದ್ದಮೆ ಹೂಡುವ ಎಚ್ಚರಿಕೆ
ಇದು ಎಸ್ಇಸಿಐ, ಆಂಧ್ರಪ್ರದೇಶ ಸರ್ಕಾರ ಮತ್ತು ರಾಜ್ಯ ವಿದ್ಯುತ್ ವಿತರಣಾ ಕಂಪನಿ ನಡುವೆ ನಡೆದಿರುವ ಒಪ್ಪಂದ. ಇದರಲ್ಲಿ ಯಾವುದೇ ಖಾಸಗಿ ಸಂಸ್ಥೆಯಾಗಲಿ, ವ್ಯಕ್ತಿಯಾಗಲಿ ಹಸ್ತಕ್ಷೇಪ ಮಾಡುವ ಪ್ರಶ್ನೆಯೇ ಇಲ್ಲ, ರಾಜಕೀಯ ದುರುದ್ದೇಶದಿಂದ ಕೆಲವು ಮಾಧ್ಯಮ ಸಂಸ್ಥೆಗಳು ಲಂಚದ ಆರೋಪ ಮಾಡುತ್ತಿದ್ದು, ಅಂತಹ ಮಾಧ್ಯಮಗಳ ವಿರುದ್ಧ ₹ 100 ಕೋಟಿಗೆ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದರು.
ತಾವು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದಿರುವ ಜಗನ್ ರೆಡ್ಡಿ, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ಒಪ್ಪಂದವನ್ನು ರದ್ದು ಮಾಡುವ ಸಾಧ್ಯತೆ ಇದೆಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹಾಗೆ ಮಾಡುವುದು ಬುದ್ದಿವಂತಿಕೆಯಲ್ಲ ಎಂದರು.
ಅದಾನಿ ಸಂಸ್ಥೆಯ ಮುಖ್ಯಸ್ಥ ಗೌತಮ್ ಅದಾನಿ ಜೊತೆ ನಡೆಸಿದ ಸಭೆಗಳ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಅದಾನಿ ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಹಲವು ಯೋಜನೆಗಳ ಒಪ್ಪಂದ ಮಾಡಿಕೊಂಡಿದ್ದು, ರಾಜ್ಯದ ಮುಖ್ಯಸ್ಥರು ಪ್ರಮುಖ ಉದ್ಯಮಿಗಳನ್ನು ಭೇಟಿ ಮಾಡುವುದು ಸಾಮಾನ್ಯ ವಿಚಾರ ಎಂದು ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications