Breaking: ಉಪ ರಾಷ್ಟ್ರಪತಿ ಚುನಾವಣೆ, ನಾಮಪತ್ರ ಸಲ್ಲಿಸಿದ ಜಗದೀಪ್
ನವದೆಹಲಿ,ಜುಲೈ.18: ಉಪ ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಇತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದ ಜಗದೀಪ್ ಧನಕರ್ ಎನ್ಡಿಎ ಮೈತ್ರಿಕೂಟ ಅಭ್ಯರ್ಥಿಯಾಗಿ ಜುಲೈ 16ರಂದು ಘೋಷಿತರಾಗಿದ್ದರು. ಆಗಸ್ಟ್ 6ರಂದು ನಡೆಯುವ ಉಪರಾಷ್ಟ್ರಪತಿ ಚುನಾವಣೆಗೆ ಈಗ ಜಗದೀಪ್ ಧನಕರ್ ನಾಮಪತ್ರ ಸಲ್ಲಿಸಿದ್ದಾರೆ.
ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಜಗದೀಪ್ (71) ವಿರುದ್ಧ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಮಾರ್ಗರೆಟ್ ಆಳ್ವಾ (77). ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಂಗಳವಾರ ಕೊನೆಯ ದಿನಾಂಕವಾಗಿದೆ. ಪ್ರಸ್ತುತ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳುತ್ತದೆ.
ಜಗದೀಪ್ ಧನ್ಕರ್ ಹೆಸರನ್ನು ಘೋಷಿಸುವಾಗ ಅವರ ಕೃಷಿ ಹಿನ್ನೆಲೆಯನ್ನು ಪ್ರಧಾನಿ ಮೋದಿ ಉಲ್ಲೇಖಿಸಿದ್ದರು. 1951ರಲ್ಲಿ ರಾಜಸ್ಥಾನದ ಕಿತಾನಾ ಗ್ರಾಮದಲ್ಲಿ ಜಾಟ್ ಕುಟುಂಬದಲ್ಲಿ ಜನಿಸಿದ ಜಗದೀಪ್ ಧನಕರ್ ಅವರು 1990 ರಲ್ಲಿ ರಾಜಕೀಯ ಪ್ರವೇಶಿಸುವ ಮೊದಲು ಸುಪ್ರೀಂ ಕೋರ್ಟ್ನಲ್ಲಿ ವಕೀಲರಾಗಿದ್ದರು.
ಕಾಂಗ್ರೆಸ್ ಬೆಂಬಲಿತ ಸರ್ಕಾರದಲ್ಲಿ ಧನಕರ್ ಅವರು ಮಂತ್ರಿಯಾಗಿದ್ದರು. ಪಿ. ವಿ. ನರಸಿಂಹರಾವ್ ಪ್ರಧಾನಿಯಾದಾಗ ಅವರು ಕಾಂಗ್ರೆಸ್ ಸೇರಿದರು. ಬಳಿಕ ಅಶೋಕ್ ಗೆಹ್ಲೋಟ್ ರಾಜಸ್ಥಾನದಲ್ಲಿ ಪಕ್ಷದ ಉನ್ನತ ಸ್ಥಾನಕ್ಕೆ ಏರುತ್ತಿದ್ದಂತೆ ಧನಕರ್ ಜೆಪಿಗೆ ಬದಲಾದರು.
ಮೂರು ವರ್ಷಗಳ ಹಿಂದೆ ಅವರು ಪಶ್ಚಿಮ ಬಂಗಾಳದ ಗವರ್ನರ್ ಆಗಿ ನೇಮಕಗೊಂಡರು. ಅಲ್ಲಿ ಅವರು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದೊಂದಿಗೆ ಆಗಾಗ್ಗೆ ಜಟಾಪಟಿಯಲ್ಲಿ ತೊಡಗಿದ್ದರು. ಉಪ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲು ಜಗದೀಪ್ ಧನಕರ್ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
Recommended Video
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications