ಭಾರತದ 14ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಜಗದೀಪ್ ಧನಕರ್
ನವದೆಹಲಿ, ಆಗಸ್ಟ್ 11 : ಜಗದೀಪ್ ಧನಕರ್ ಭಾರತದ 14ನೇ ಉಪರಾಷ್ಟ್ರಪತಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿಮುರ್ಮು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.
ಇನ್ನು ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ, ಜಗದೀಪ್ ಧನಕರ್ ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. "ಪೂಜ್ಯ ಬಾಪು ಅವರಿಗೆ ಗೌರವ ಸಲ್ಲಿಸುವಾಗ ರಾಜ್ ಘಾಟ್ನ ಪ್ರಶಾಂತ ಭವ್ಯತೆಯಲ್ಲಿ ಭಾರತ ಸೇವೆಯಲ್ಲಿ ಸದಾ ಇರುವಂತೆ ಆಶೀರ್ವಾದ, ಸ್ಫೂರ್ತಿ ಮತ್ತು ಪ್ರೇರಣೆಯನ್ನು ಪಡೆದೆ" ಎಂದು ಜಗದೀಪ್ ಧನಕರ್ ಟ್ವೀಟ್ ಮಾಡಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಮಾರ್ಗರೇಟ್ ಆಳ್ವ ಅವರನ್ನು ಸೋಲಿಸುವ ಮೂಲಕ ಜಗದೀಪ್ ಧನಕರ್ ಆಗಸ್ಟ್ 6 ರಂದು ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿ ಮಾರ್ಗರೇಟ್ ಆಳ್ವಾ 182 ಮತಗಳನ್ನು ಪಡೆದರೆ ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿ ಜಗದೀಪ್ ಧನಕರ್ 528 ಮತಗಳನ್ನು ಪಡೆದು ನಿರಾಯಾಸವಾಗಿ ಗೆಲುವು ಸಾಧಿಸಿದರು.
ಜಗದೀಪ್ ಧನಖರ್ ಶೇ.74.36 ಗಳಿಸಿದರು. 1997 ರಿಂದ ನಡೆದ ಕೊನೆಯ ಆರು ಉಪರಾಷ್ಟ್ರಪತಿ ಚುನಾವಣೆಗಳಲ್ಲಿ ಅವರು ಅತಿ ಹೆಚ್ಚು ಅಂತರದ ಗೆಲುವು ಸಾಧಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. ಉಪರಾಷ್ಟ್ರಪತಿ ರಾಜ್ಯಸಭೆಯ ಅಧ್ಯಕ್ಷರೂ ಆಗಿ ಕಾರ್ಯ ನಿರ್ವಹಿಸುತ್ತಾರೆ.
ಭೌತಶಾಸ್ತ್ರದಲ್ಲಿ ಪದವಿ ಪಡೆದಿರುವ ಜಗದೀಪ್ ಧನಕರ್ ನಂತರ ರಾಜಸ್ಥಾನ ವಿಶ್ವವಿದ್ಯಾನಿಲಯದಿಂದ ಎಲ್ಎಲ್ಬಿ ವ್ಯಾಸಂಗ ಮಾಡಿದ್ದಾರೆ. ರಾಜಸ್ಥಾನ ಹೈಕೋರ್ಟ್ ಮತ್ತು ಭಾರತದ ಸುಪ್ರೀಂ ಕೋರ್ಟ್ ಎರಡರಲ್ಲೂ ವಕೀಲ ವೃತ್ತಿಯನ್ನು ಅಭ್ಯಾಸ ಮಾಡಿದ್ದಾರೆ. 1989 ರ ಲೋಕಸಭಾ ಚುನಾವಣೆಯಲ್ಲಿ ಜನತಾ ದಳ ಪಕ್ಷದ ಮೂಲಕ ಜುಂಜುನುದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದರು.

ಧನಕರ್ ಅವರನ್ನು 2019 ರಲ್ಲಿ ಪಶ್ಚಿಮ ಬಂಗಾಳದ ಗವರ್ನರ್ ಆಗಿ ನೇಮಿಸಲಾಯಿತು. ಎನ್ಡಿಎ ಉಪಾಧ್ಯಕ್ಷ ಅಭ್ಯರ್ಥಿಯಾಗಿ ಅವರ ಹೆಸರು ಘೋಷಣೆಯಾದ ನಂತರ ಪಶ್ಚಿಮ ಬಂಗಾಳದ ರಾಜ್ಯಪಾಲ ಹುದ್ದೆಗೆ ಜುಲೈ 17 ರಂದು ರಾಜೀನಾಮೆ ನೀಡಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications