ಪ.ಬಂಗಾಳದ ಬಿಜೆಪಿ ಸಂಸದನ ಪ್ರಮಾಣವಚನದ ವೇಳೆ ಮೊಳಗಿದ ಜೈಶ್ರೀರಾಂ ಘೋಷಣೆ
ನವದೆಹಲಿ, ಜೂನ್ 17: ಹದಿನೇಳನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ (ಜೂ 17) ಆರಂಭಗೊಂಡಿದ್ದು, ನೂತನ 542 ಸಂಸದರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.
ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ, ಭಾರತ್ ಮಾತಾ ಕೀ ಜೈ, ಮೋದಿ, ಮೋದಿ ಎಂದು ಬಿಜೆಪಿ ಸಂಸದರು ಹರ್ಷೋದ್ಗಾರ ಮಾಡಿದರೆ, ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಪ್ರಮಾಣವಚನ ಸ್ವೀಕರಿಸಿದಾಗ, 'ಜೈ ಶ್ರೀರಾಂ' ಘೋಷಣೆ ಲೋಕಸಭೆಯಲ್ಲಿ ಮೊಳಗಿದೆ.
ಕಳೆದ ಲೋಕಸಭಾ ಚುನಾವಣೆಯ ಪ್ರಚಾರದ ನಂತರ, ಪಶ್ಚಿಮ ಬಂಗಾಳ, ಮಮತಾ ಬ್ಯಾನರ್ಜಿ, ಬಿಜೆಪಿ, ಜೈಶ್ರೀರಾಂ ನಡುವೆ ವಿಶೇಷ ಅನುಬಂಧ ಇರುವುದರಿಂದ, ಬಿಜೆಪಿ ಸಂಸದರು ಬಾಬುಲ್ ಸುಪ್ರಿಯೋ ಪ್ರಮಾಣವಚನ ಸ್ವೀಕಾರದ ವೇಳೆ, ತೃಣಮೂಲ ಕಾಂಗ್ರೆಸ್ ಸಂಸದರ ಕಣ್ಣುಕಾಯಿಸಲೆಂದೇ ಘೋಷಣೆ ಕೂಗಿದಂತಿತ್ತು.

ಪಶ್ಚಿಮ ಬಂಗಾಳದ ಅಸನ್ಸೋಲ್ ಸಂಸದ ಬಾಬುಲ್ ಸುಪ್ರಿಯೋ ಅವರಿಗೆ ಪ್ರಮಾಣವಚನ ಸ್ವೀಕರಿಸಲು ಸ್ಪೀಕರ್ ಹೇಳುತ್ತಿದ್ದಂತೆಯೇ, ಬಿಜೆಪಿ ಸಂಸದರು ಮೇಜು ಕುಟ್ಟಿ, ಶ್ರೀರಾಮನನ್ನು ನೆನಪಿಸಿಕೊಂಡರು.
ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಇತ್ತೀಚೆಗೆ ರಾಜ್ಯದ 24 ಪರಗಣ ಜಿಲ್ಲೆಯಲ್ಲಿ ಪ್ರವಾಸದಲ್ಲಿದ್ದಾಗ, ಕೆಲವರು 'ಜೈಶ್ರೀರಾಂ' ಘೋಷಣೆಯನ್ನು ಕೂಗಿದ್ದರು. ಅದಕ್ಕೆ, ಮಮತಾ ಕಾರಿನಿಂದ ಕೆಳಗಿಳಿದು ಘೋಷಣೆ ಕೂಗಿದವರನ್ನು ತರಾಟೆಗೆ ತೆಗೆದುಕೊಂಡು, ಕೇಸ್ ಜಡಾಯಿಸಿದ್ದರು.
ಜೈಶ್ರೀರಾಂ ವಿಚಾರವನ್ನೂ ಇಟ್ಟುಕೊಂಡು ಬಿಜೆಪಿ ಲೋಕಸಭಾ ಚುನಾವಣೆಯ ವೇಳೆ ಪ್ರಚಾರವನ್ನು ಮಾಡಿತ್ತು. ಅಸನ್ಸೋಲ್ ಲೋಕಸಭಾ ಕ್ಷೇತ್ರದಿಂದ ಬಾಬುಲ್ ಸುಪ್ರಿಯೊ, ಟಿಎಂಸಿಯ ಮೂನ್ ಮೂನ್ ಸೇನ್ ವಿರುದ್ದ 197,637 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications