ರಸ್ತೆ ರಂಪಾಟ: ಶಿಕ್ಷೆ ಭೀತಿಯಲ್ಲಿ ಮಾಜಿ ಕ್ರಿಕೆಟರ್ ಸಿಧು
ನವದೆಹಲಿ, ಸೆಪ್ಟಂಬರ್ 12: ಮಾಜಿ ಕ್ರಿಕೆಟರ್, ಕಾಂಗ್ರೆಸ್ ಮುಖಂಡ, ಪಂಜಾಬ್ ಸಚಿವ ನವಜ್ಯೋತ್ ಸಿಂಗ್ ಸಿಧು ಅವರಿಗೆ ರಸ್ತೆ ರಂಪಾಟ ಪ್ರಕರಣ ಮತ್ತೊಮ್ಮೆ ಕಾಡುತ್ತಿದೆ. ಈ ಪ್ರಕರಣದ ಮರು ವಿಚಾರಣೆಗೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸ್ವೀಕರಿಸಿದೆ.
1988ರ ರಸ್ತೆ ರಂಪಾಟ ಕೇಸಿನಲ್ಲಿ ಸಿಧು ಅವರು ನೀಡಿರುವ ಹೇಳಿಕೆ ಸುಳ್ಳು, ಅವರ ವಿರುದ್ಧ ಕ್ರಮ ಜರುಗಿಸಬಹುದು ಎಂದು ಸರ್ಕಾರಿ ವಕೀಲರು ಸುಪ್ರೀಂಕೋರ್ಟಿಗೆ ತಿಳಿಸಿದ್ದಾರೆ.
ಪಟಿಯಾಲದಲ್ಲಿ 1998ರ ಡಿಸೆಂಬರ್ 27ರಂದು ಷೇರನ್ ವಾಲ ಗೇಟ್ ಕ್ರಾಸಿಂಗ್ ಬಳಿ ಸಿಧು ಅವರ ಜಿಪ್ಸಿ ನಿಲುಗಡೆ ಮಾಡಲಾಗಿತ್ತು. ಗುರ್ ನಾಮ್ ಅವರು ಮಾರುತಿ ಕಾರಿನಲ್ಲಿ ಅದೇ ಸ್ಥಳಕ್ಕೆ ಬಂದು ಸ್ಥಳ ಕೊಡುವಂತೆ ಕೇಳಿದ್ದರು. ರಸ್ತೆ ರಂಪಾಟ ನಂತರ ನಡೆದ ಹಲ್ಲೆ, ಸಾವಿನ ಪ್ರಕರಣದಲ್ಲಿ ನವಜೋತ್ ಸಿಂಗ್ ಸಿಧು ಆರೋಪಿಯಾಗಿದ್ದಾರೆ. ಸಿಧು ಹಾಗೂ ಅವರ ಸ್ನೇಹಿತರೊಬ್ಬರು ಹಲ್ಲೆ ಮಾಡಿದ್ದರಿಂದ ಗುರ್ನಾಮ್ ಸಿಂಗ್(65) ಎಂಬುವರು ಮೃತಪಟ್ಟರು ಎಂಬ ಆರೋಪವಿತ್ತು.

1999ರಲ್ಲಿ ಸ್ಥಳೀಯ ನ್ಯಾಯಾಲಯ ಸಿಧು ನಿರ್ದೋಷಿಯೆಂದು ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೃತ ಗುರ್ನಾಮ್ ಸಿಂಗ್ ಕುಟುಂಬದವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮೊರೆ ಹೋಗಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಧು ವಿರುದ್ಧ ಹರ್ಯಾಣ ಹಾಗೂ ಪಂಜಾಬ್ ಹೈಕೋರ್ಟ್ ತೀರ್ಪು ನೀಡಿದೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಸಿಧು ಅವರಿಗೆ ಹೈಕೋರ್ಟ್ ಮೂರು ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿತ್ತು.
ಈ ವೇಳೆ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿಯುವಂತೆ ಸುಪ್ರೀಂಕೋರ್ಟ್ಗೆ ಪಂಜಾಬ್ ಸರ್ಕಾರ ಮನವಿ ಸಲ್ಲಿಸಿದೆ. 2007ರಲ್ಲಿ ಈ ಪ್ರಕರಣದಿಂದಾಗಿ ಸಿಧು ಅವರು ಚುನಾವಣೆ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications