ಅಲ್ಪಸಂಖ್ಯಾತರ ಪಟ್ಟಿಗೆ ಜೈನ ಸಮುದಾಯ
ನವದೆಹಲಿ, ಜ.8: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎ ಸರ್ಕಾರ ತನ್ನ ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳುವತ್ತ ಹೆಜ್ಜೆ ಹಾಕಿದೆ. ಈ ನಿಟ್ಟಿನಲ್ಲಿ ಬಹು ದಿನಗಳ ಬೇಡಿಕೆಗಳನ್ನು ಒಂದೊಂದಾಗಿ ಪೂರೈಸುವ ಮೂಲಕ ಎಲ್ಲಾ ಸಮುದಾಯದಕ್ಕೆ ಸಲ್ಲುವ ಪಕ್ಷ ನಮ್ಮದು ಎನ್ನುವ ಹಣೆಪಟ್ಟಿ ಹೊತ್ತು ಚುನಾವಣೆ ಎದುರಿಸುವ ತಂತ್ರಗಾರಿಕೆ ರೂಪಿಸಲಾಗುತ್ತಿದೆ.
ಅಲ್ಪಸಂಖ್ಯಾತರ ತುಷ್ಟೀಕರಣ ಎನ್ನಬಹುದಾದರೆ ಜೈನ್ ಸಮುದಾಯವನ್ನು ರಾಷ್ಟ್ರೀಯ ಅಲ್ಪಸಂಖ್ಯಾತರ ಕಾಯ್ದೆಯಡಿ ಅಲ್ಪಸಂಖ್ಯಾತರ ಪಟ್ಟಿಗೆ ಸೇರಿಸಲು ಮುಂದಾಗಿರುವುದು ಯುಪಿಎ ಮೊದಲ ಹೆಜ್ಜೆ ಆಗಿದೆ. ಸಮಾನ ಅವಕಾಶ ಆಯೋಗ ರಚನೆಗೆ ಚಾಲನೆ ನೀಡಲಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಕೆ.ರೆಹಮಾನ್ ಖಾನ್ ತಿಳಿಸಿದ್ದಾರೆ.[ಧರ್ಮಸ್ಥಳದಲ್ಲಿ ಸಮವಸರಣ ಪೂಜೆ]
ಸಾಚಾರ್ ಆಯೋಗದ ಶಿಫಾರಸಿನಂತೆ ಸಮಾನ ಅವಕಾಶ ಆಯೋಗ ರಚಿಸಲಾಗುತ್ತಿದೆ. ಈಗಾಗಲೇ ಸಮಾನ ಅವಕಾಶ ಆಯೋಗ ರಚನೆ ಕರಡು ಸಿದ್ಧವಾಗಿದ್ದು ಕೇಂದ್ರ ಸಂಪುಟದ ಮುಂದಿದೆ. ಸಾಧ್ಯವಾದಷ್ಟು ಶೀಘವಾಗಿ ಅದಕ್ಕೆ ಕಾನೂನು ರೂಪ ನೀಡಲಾಗುತ್ತದೆ ಎಂದು ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಕೆ.ರೆಹಮಾನ್ ಖಾನ್ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಹಿತರಕ್ಷಣೆಗಾಗಿಯೇ ರೂಪುಗೊಳ್ಳುತ್ತಿರುವ ಸಮಾನ ಅವಕಾಶ ಆಯೋಗದ ವ್ಯಾಪ್ತಿಗೆ ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳು ಒಳಪಡುತ್ತವೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಯಾವುದೇ ವ್ಯಕ್ತಿ ತನಗೆ ತಾರತಮ್ಯವಾಗಿದೆ ಎಂದೆನಿಸಿದರೆ ಆಯೋಗಕ್ಕೆ ದೂರು ನೀಡಬಹುದು. ಸಂವಿಧಾನದತ್ತ ಅಧಿಕಾರ ಪಡೆಯುವ ಆಯೋಗವು ದೂರುಗಳನ್ನು ವಿಲೇವಾರಿ ಮಾಡಿ ದೂರುದಾರರಿಗೆ ನ್ಯಾಯ ಒದಗಿಸುತ್ತದೆ.[ಮಹಾವೀರನಿಗೆ ಮದುವೆಯಾಗಿತ್ತಂತೆ?]
ಜೈನ ಸಮುದಾಯವನ್ನು ರಾಷ್ಟ್ರೀಯ ಅಲ್ಪಸಂಖ್ಯಾತರ ಪಟ್ಟಿಗೆ ಸೇರಿಸುವ ಪ್ರಕ್ರಿಯೆಯೂ ಅಂತಿಮ ಹಂತದಲ್ಲಿದೆ. ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯದ ಪ್ರಸ್ತಾಪಕ್ಕೆ ಅಟಾರ್ನಿ ಜನರಲ್ ಮತ್ತು ಕಾನೂನು ಸಚಿವಾಲಯ ಅನುಮೋದನೆ ನೀಡಿದೆ. ಈಗಾಗಲೇ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಪ್ರಸ್ತಾವ ರವಾನಿಸಲಾಗಿದೆ ಎಂದು ಕೆ.ರೆಹಮಾನ್ ಖಾನ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಈಗಾಗಲೇ ಕಾನೂನು ಸಚಿವಾಲಯದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಸುಪ್ರೀಂಕೋರ್ಟಿನಲ್ಲಿ ಆಕ್ಷೇಪಣೆ ಸಲ್ಲಿಕೆಯಾಗದಿದ್ದರೆ ಶೀಘ್ರದಲ್ಲೇ ಜೈನರ ಮೇಲೆ ಅಲ್ಪ ಸಂಖ್ಯಾತ ಎಂಬ ಟ್ಯಾಗ್ ಬೀಳಲಿದೆ. ಭಾರತದಲ್ಲಿ ಮುಸ್ಲಿಂ, ಸಿಖ್, ಬೌದ್ಧರು, ಕ್ರೈಸ್ತರು ಹಾಗೂ ಪಾರ್ಸಿಗಳು ಅಲ್ಪಸಂಖ್ಯಾತ ಪಟ್ಟಿಯಲ್ಲಿದ್ದಾರೆ.
ಭಾರತದಲ್ಲಿ ಜೈನ ಸಮುದಾಯ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಆಂಧ್ರಪ್ರದೇಶ, ಕರ್ನಾಟಕ, ಛತ್ತೀಸ್ ಗಢ, ಜಾರ್ಖಂಡ್ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ಹೆಚ್ಚಾಗಿ ಕಂಡು ಬರುತ್ತದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications