ನೂರು ಕೋಟಿ ಆಸ್ತಿ, ಮುದ್ದಾದ ಮಗಳು ತ್ಯಜಿಸಿ ದಂಪತಿ ಸನ್ಯಾಸ
ವಯಸ್ಸು ಕಳೆದ ಮೇಲೆ, ಹಣ ಇಲ್ಲದಾಗ ವೈರಾಗ್ಯ ಮೂಡುವುದು ಅಸಹಜ ಎನಿಸುವುದಿಲ್ಲ. ಆದರೆ ಮಧ್ಯಪ್ರದೇಶದ ಈ ಜೈನ ದಂಪತಿ ಮೂರು ವರ್ಷದ ಮಗುವನ್ನು ಬಿಟ್ಟು, ನೂರು ಕೋಟಿ ಮೌಲ್ಯದ ಆಸ್ತಿ ತ್ಯಜಿಸಿ ಸನ್ಯಾಸ ಸ್ವೀಕರಿಸಲು ನಿರ್ಧರಿಸಿದ್ದಾರೆ.
ಸುಮಿತ್ ರಾಥೋರ್ (35), ಅವರ ಪತ್ನಿ ಅನಾಮಿಕಾ (34) ಮೂಲತಃ ಮಧ್ಯಪ್ರದೇಶದ ನೀಮಚ್ ನವರು. ಮೊದಲಿಗೆ ಕುಟುಂಬದ ವ್ಯಾಪಾರ ನೋಡಿಕೊಳ್ಳುತ್ತಿದ್ದರು. ಆ ನಂತರ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಇದೀಗ ಇಬ್ಬರೂ ಸನ್ಯಾಸ ಸ್ವೀಕರಿಸಲು ತೀರ್ಮಾನಿಸಿದ್ದಾರೆ.

ಶ್ವೇತಾಂಬರ ಗುಂಪಿನ ಸನ್ಯಾಸಿಗಳಾಗಿ ಈ ದಂಪತಿ ಮುಂದುವರಿಯಲಿದ್ದಾರೆ. ಈ ಸಂಬಂಧ ಸೆಪ್ಟೆಂಬರ್ 23ರಂದು ಗುಜರಾತ್ ನ ಸೂರತ್ ನಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಆ ನಂತರ ಇವರಿಬ್ಬರೂ ದೀಕ್ಷೆ ಸ್ವೀಕರಿಸಲಿದ್ದಾರೆ. ಸುಮಿತ್ ಹಾಗೂ ಅನಾಮಿಕರ ಕೇಶ ಮುಂಡನ ಮಾಡಲಾಗುತ್ತದೆ. ಇನ್ನು ಬದುಕಿನ ಉಳಿದ ಕಾಲಾವಧಿ ಶ್ವೇತ ವಸ್ತ್ರವನ್ನು ಧರಿಸಬೇಕಾಗುತ್ತದೆ.
ಬಾಯಿಗೆ ಅಡ್ಡಲಾಗಿ ಬಟ್ಟೆ ಕಟ್ಟಿಕೊಳ್ಳಬೇಕಾಗುತ್ತದೆ. ಅಪ್ಪಿತಪ್ಪಿ ಕ್ರಿಮಿ ಕೀಟಗಳು ಕೂಡ ಬಾಯಿಯೊಳಗೆ ಹೋಗಿ, ಅವುಗಳಿಗೆ ಹಿಂಸೆ ಆಗಬಾರದು ಎಂಬ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ.
ಭಾರತದಲ್ಲಿ ಐವತ್ತು ಲಕ್ಷಕ್ಕೂ ಕಡಿಮೆ ಸಂಖ್ಯೆಯಲ್ಲಿ ಜೈನ ಸಮುದಾಯದವರಿದ್ದಾರೆ. ಅವರು ಕೆಲ ಕಠಿಣ ನಿಯಮಗಳನ್ನು ಪಾಲಿಸುತ್ತಾರೆ. ಅದರಲ್ಲಿ ಸಸ್ಯಾಹಾರ ಸೇವನೆಯೂ ಒಂದು.
ಅನಾಮಿಕಾ ಅವರ ತಂದೆ ಅಶೋಕ್ ಚಂದಲಿಯಾ ಮೊಮ್ಮಗಳ ಪೋಷಣೆ ಮಾಡಲಿದ್ದಾರೆ. ಸುಮಿತ್-ಅನಾಮಿಕಾ ದಂಪತಿಯು ತಮ್ಮ ಮಗಳಿಗೆ ಎಂಟು ತಿಂಗಳು ಇರುವಾಗಲಿಂದಲೇ ಈ ಸನ್ಯಾಸ ದೀಕ್ಷೆಯ ತಯಾರಿ ಆರಂಭಿಸಿದ್ದರಿಂದ ಆ ಕುಟುಂಬದವರಿಗೆ ಈಗ ಆಶ್ಚರ್ಯ ಏನೂ ಆಗಿಲ್ಲ.
ಈ ವರ್ಷದಲ್ಲೇ ಅಹಮದಾಬಾದ್ ನ ಹದಿನೇಳು ವರ್ಷದ ಯುವಕ, ಹನ್ನೆರಡನೇ ತರಗತಿಯಲ್ಲಿ ಗುಜರಾತ್ ಗೆ ಅತಿ ಹೆಚ್ಚು ಅಂಕ ಗಳಿಸಿದ್ದು, ಆ ನಂತರ ಸನ್ಯಾಸ ಸ್ವೀಕಾರ ಮಾಡಿದ್ದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications