Get Updates
Get notified of breaking news, exclusive insights, and must-see stories!

ಅದಾನಿಗೆ 3 ವಿಮಾನ ನಿಲ್ದಾಣಗಳ ನಿರ್ವಹಣೆ ಜವಾಬ್ದಾರಿ ನೀಡಲು ಕೇಂದ್ರ ಅಸ್ತು

ನವದೆಹಲಿ, ಆಗಸ್ಟ್ 19: ಭಾರತದ ಮೂರು ವಿಮಾನ ನಿಲ್ದಾಣಗಳ ನಿರ್ವಹಣೆ ಹಾಗೂ ಗುತ್ತಿಗೆಯ ಜವಾಬ್ದಾರಿಯನ್ನು ಅದಾನಿ ಗ್ರೂಪ್‌ಗೆ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಈ ಕುರಿತು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್, ನಾಗರಿಕ ವಿಮಾನಯಾನ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮೂರು ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮತ್ತು ಎಎಐ ಮೂಲಕ ಗುತ್ತಿಗೆಗೆ ನೀಡಲು ಅನುಮೋದಿಸಿದೆ.

ಇದರಿಂದ ಸುಮಾರು 1,070 ಕೋಟಿ ರೂ.ಗಳಿಕೆಯೇ ಅಲ್ಲದೆ, ಪ್ರಯಾಣಿಕರಿಗೆ ಲಭ್ಯವಿರುವ ಸೌಲಭ್ಯಗಳು ಸುಧಾರಿಸುತ್ತದೆ ಎಂದರು.

Jaipur, Guwahati And Thiruvananthapuram Airports To Be Leased Out

ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಈ ಕಾರ್ಯ ನಡೆಯಲಿದೆ. ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು ಗುತ್ತಿಗೆ ನೀಡುವ ಪ್ರಸ್ತಾಪಕ್ಕೆ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು ಗುತ್ತಿಗೆಯನ್ನು ಅದಾನಿ ಗ್ರೂಪ್ ಗೆ ನೀಡಲಾಗಿದೆ. ಸಾರ್ವಜನಿಕ ವಿಮಾನಯಾನ(ಪಿಪಿಪಿ) ಆಧಾರದ ಮೇಲೆ ಗುತ್ತಿಗೆಗೆ ಈ ವಿಮಾನ ನಿಲ್ದಾಣಗಳನ್ನು ನಿರ್ವಹಿಸುವ ಮತ್ತು ಅಭಿವೃದ್ಧಿಪಡಿಸುವ ಹಕ್ಕನ್ನು ಖಾಸಗಿ ಕಂಪನಿಗಳಿಗೆ ವಹಿಸಲಾಗುವುದು.

50 ವರ್ಷಗಳ ಗುತ್ತಿಗೆ ನೀಡಲಾಗುವುದು ಎಂದು ಜಾವಡೇಕರ್ ಮಾಹಿತಿ ನೀಡಿದರು. ಪ್ರಸ್ತುತ, ಈ ಮೂರು ವಿಮಾನ ನಿಲ್ದಾಣಗಳನ್ನು ಎಎಐ ನಿರ್ವಹಿಸುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+