Jaipur Earhtquake: ಬೆಳ್ಳಂಬೆಳಗ್ಗೆ 3 ಸರಣಿ ಭೂಕಂಪಕ್ಕೆ ಸಾಕ್ಷಿಯಾದ ಜೈಪುರ
ಜೈಪುರ, ಜುಲೈ 21: ಭಾರತವು ಶುಕ್ರವಾರ ಸರಣಿ ಭೂಕಂಪನಗಳಿಗೆ ಸಾಕ್ಷಿಯಾಗಿದೆ. ಜೈಪುರದಲ್ಲಿ ಶುಕ್ರವಾರ ಮುಂಜಾನೆ ಅರ್ಧ ಗಂಟೆಯ ಅವಧಿಯಲ್ಲಿ ಮೂರು ಭೂಕಂಪಗಳ ಅನುಭವವಾಗಿದೆ. ಜೈಪುರದಲ್ಲಿ 3.4 ರ ತೀವ್ರತೆಯ ಭೂಕಂಪನ ಉಂಟಾಗಿದೆ.
ಶುಕ್ರವಾರ ಬೆಳಗಿನ ಜಾವ 4.25 ರ ಸುಮಾರಿಗೆ ಈ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ವರದಿ ಮಾಡಿದೆ. ಸುಮಾರು ಹತ್ತು ಕಿಲೋ ಮೀಟರ್ ಭೂಮಿಯ ಆಳದಲ್ಲಿ ಭೂಕಂಪನ ಉಂಟಾಗಿದೆ ಕೇಂದ್ರ ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಭೂಕಂಪನ ತೀವ್ರತೆ 3.4ರಷ್ಟಿದ್ದರೆ, ಲ್ಯಾಟ್ 26.87 ಹಾಗೂ ಉದ್ದ 75.69ರಷ್ಟಿದೆ. ಭೂಮಿಯ ಆಳಕ್ಕೆ ಸುಮಾರು 10 ಕಿಲೋ ಮೀಟರ್ ಆಳಕ್ಕೆ ಕಂಪನಗಳು ಕೇಳಿ ಬಂದಿವೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದೆ.
Rajasthan | An earthquake of Magnitude 4.4 strikes Jaipur
— ANI (@ANI) July 20, 2023
(CCTV Visuals)
(Video source - locals) pic.twitter.com/MOudTvT8yF
ಮತ್ತೊಂದು ಘಟನೆಯು ಶುಕ್ರವಾರ ಮುಂಜಾನೆ 4.22 ಗಂಟೆ ಸುಮಾರಿಗೆ 5 ಕಿಲೋ ಮೀಟರ್ ಆಳದಲ್ಲಿ 3.1 ತೀವ್ರತೆಯ ಭೂಕಂಪನದ ಅನುಭವವಾಗಿದೆ ಎಂದು ಕೇಂದ್ರ ತಿಳಿಸಿದೆ.
ಇದಕ್ಕೂ ಮುನ್ನ ಬೆಳಗ್ಗೆ 4.09ಕ್ಕೆ ಭೂಮಿಯ 10 ಕಿಲೋ ಮೀಟರ್ ಆಳದಲ್ಲಿ ಜೈಪುರದಲ್ಲಿ ಮೊದಲ ಭೂಕಂಪದ ಅನುಭವವಾಯಿತು. 4.4 ತೀವ್ರತೆಯ ಭೂಕಂಪನ ಉಂಟಾಗಿದೆ. ಈ ವೇಳೆ ಲ್ಯಾಟ್ ಪ್ರಮಾಣವು 26.88 ರಷ್ಟಿದ್ದರೆ, ಉದ್ದವು 75.70 ಇದ್ದು, ಇದು ಜೈಪುರ ವ್ಯಾಪ್ತಿಯಲ್ಲಿನ ಮತ್ತೊಂದು ಕಡೆಗೆ ಉಂಟಾದ ಭೂಕಂಪನವಾಗಿದೆ.
ಮೂರು ಸರಣಿ ಭೂಕಂಪನಗಳು ಒಂದೇ ದಿನ ಬೆಳಗ್ಗೆ ಉಂಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಜಸ್ತಾನ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು, ಜೈಪುರ ಸೇರಿದಂತೆ ರಾಜ್ಯದ ಇತರ ಸ್ಥಳಗಳಲ್ಲಿ ಭೂಕಂಪನದ ಅನುಭವವಾಗಿದೆ. ಜನರೆಲ್ಲರು ಸುರಕ್ಷಿತ ಸ್ಥಳದಲ್ಲಿದ್ದೀರಿ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಇತ್ತ ಮಣಿಪುರದಲ್ಲಿ ಸಹ ಬೆಳಗಿನ ಜಾವ 3.5 ತೀವ್ರತೆಯ ಭೂಕಂಪನ ಆಗಿದೆ. ಒಟ್ಟು ಭೂಮಿಯ 20 ಕಿಲೋ ಮೀಟರ್ ಆಳದಲ್ಲಿ ಭೂಕಂಪನ ಉಂಟಾಗಿದೆ. ಇತ್ತ ರಾಜಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದ್ದರ ಬಗ್ಗೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಖಚಿತಪಡಿಸಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications