ಜೈಶ್ ಉಗ್ರರ ಸಂಚಿನ ಹಿಂದೆ ಮಸೂದ್ ಅಜರ್ ಸಂಬಂಧಿ
ನವದೆಹಲಿ, ನವೆಂಬರ್ 21: ಜಮ್ಮು ಮತ್ತು ಕಾಶ್ಮೀರದ ನಗ್ರೋಟಾದಲ್ಲಿ ಗುರುವಾರ ನಡೆದ ಎನ್ಕೌಂಟರ್ನಲ್ಲಿ ಜೈಶ್ ಎ ಮೊಹಮ್ಮದ್ ಭಯೋತ್ಪಾದನಾ ಸಂಘಟನೆಯ ನಾಲ್ವರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದವು. ಈ ಉಗ್ರರನ್ನು ಜೈಶ್ ಮುಖ್ಯಸ್ಥ ಮಸೂದ್ ಅಜರ್ನ ಭಾಮೈದ ಅಬ್ದುಲ್ ರಾವುಫ್ ಅಸ್ಗರ್ ನಿಭಾಯಿಸುತ್ತಿದ್ದ ಎನ್ನುವುದು ಬಹಿರಂಗವಾಗಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಉಗ್ರರ ಬಳಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳಲ್ಲದೆ, ಪಾಕಿಸ್ತಾನ ನಿರ್ಮಿತ ಕ್ಯೂ ಮೊಬೈಲ್ ಸೆಟ್ಗಳು, ಜರ್ಮನ್ ತಯಾರಿಕೆಯ ಜಿಪಿಎಸ್ ವ್ಯವಸ್ಥೆಯ ಉಪಕರಣಗಳು ಮತ್ತು ಪಾಕಿಸ್ತಾನ ನಿರ್ಮಿತ ವೈರ್ಲೆಸ್ ಸೆಟ್ಗಳು ಪತ್ತೆಯಾಗಿದ್ದವು.
ನಗ್ರೋಟಾದ ಬಾನ್ ಟೋಲ್ ಪ್ಲಾಜಾ ಬಳಿ ಹಲವು ಗಂಟೆ ನಡೆದ ಗುಂಡಿನ ಚಕಮಕಿಯಲ್ಲಿ ಎಲ್ಲ ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಅವರ ಬಳಿ ದೊರೆತ ಜಿಪಿಎಸ್ ಉಪಕರಣ ಮತ್ತು ಮೊಬೈಲ್ ಫೋನ್ಗಳಲ್ಲಿನ ದಾಖಲೆಗಳು ಅವರು, ಪಾಕಿಸ್ತಾನ ಮೂಲದ ಭಯೋತ್ಪಾದನಾ ಗುಂಪು ಜೈಶ್ನ ಆಪರೇಷನಲ್ ಕಮಾಂಡರ್ಗಳಾದ ಮುಫ್ತಿ ರಾವುಫ್ ಅಸ್ಗರ್ ಮತ್ತು ಖಾರಿ ಜರಾರ್ ಜತೆ ಸಂಪರ್ಕ ಹೊಂದಿದ್ದರು ಎನ್ನುವುದನ್ನು ಖಾತರಿಪಡಿಸಿದೆ.

26/11ರ ಮುಂಬೈ ಮಾದರಿಯಲ್ಲಿ ನವೆಂಬರ್ 26ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ದೊಡ್ಡ ಭಯೋತ್ಪಾದನಾ ದಾಳಿ ನಡೆಸುವುದು ಉಗ್ರರ ಗುರಿಯಾಗಿತ್ತು. ಈ ದಾಳಿ ನಡೆಸುವ ಹೊಣೆಯನ್ನು ಅಸ್ಗರ್ಗೆ ವಹಿಸಲಾಗಿತ್ತು. ಜೈಶ್ ಉಗ್ರರ ಜಾಲದಲ್ಲಿರುವ ಮೌಲಾನಾ ಅಬು ಜುಂಡಾಲ್ ಮತ್ತು ಮುಫ್ತಿ ತೌಸೀಫ್ ಈ ದಾಳಿ ಕುರಿತು ಯೋಜನೆ ರೂಪಿಸಲು ಬಹವಲ್ಪುರದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು. ಆರಂಭದ ಯೋಜನೆ ಬಳಿಕ ಜೈಶ್ನ ಶಕರಗಡ ಘಟಕವು ಉಗ್ರರ ಆಯ್ಕೆ ಮತ್ತು ಅವರ ತರಬೇತಿ ಸೇರಿದಂತೆ ಅಂತಿಮ ಸಿದ್ಧತೆ ನಡೆಸುವ ಜವಾಬ್ದಾರಿ ಪಡೆದುಕೊಂಡಿತ್ತು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications