ಬಜೆಟ್ ಶಾಕ್ : ಹೋಟೆಲ್ ಊಟ ಇನ್ಮುಂದೆ ದುಬಾರಿ?
ನವದೆಹಲಿ, ಫೆ.24: ಎಫ್ ಡಿಐ, ಮೇಕ್ ಇನ್ ಇಂಡಿಯಾ ಮುಂತಾದ ಯೋಜನೆಗಳಲ್ಲಿ ಬದಲಾವಣೆ ತಂದು ಬಂಡವಾಳ ಆಕರ್ಷಿಸುವಲ್ಲಿ ಮೋದಿ ಸರ್ಕಾರ ಸಫಲವಾಗಿದೆ. ಈಗ ಬಜೆಟ್ ನಲ್ಲಿ ಮಧ್ಯಮ ವರ್ಗದ ಜನತೆಯ ಕೊಡುಗೆಗಳ ಮಹಾಪೂರದ ಹರಿಸಲು ಸಜ್ಜಾಗುತ್ತಿರುವ ಸುದ್ದಿ ಸಿಕ್ಕಿದೆ. ಇದರ ಜೊತೆಗೆ ಸೇವಾ ತೆರಿಗೆ ಹೆಚ್ಚಳವಾಗಲಿದ್ದು, ಹೋಟೆಲ್ ಊಟ ದುಬಾರಿಯಾಗಲಿದೆ.
ಫೆ.28ರಂದು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ನಿರೀಕ್ಷೆಯಂತೆ ಮಧ್ಯಮ ವರ್ಗದ ಜನತೆಗೆ ಹಲವಾರು ತೆರಿಗೆ ವಿನಾಯತಿ ಘೋಷಿಸುವ ಸಾಧ್ಯತೆಯಿದೆ. ಆದಾಯ ತೆರಿಗೆ ಮಿತಿ ಹೆಚ್ಚಳ ಪ್ರತಿ ವರ್ಷದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಬಹುಚರ್ಚಿತ ವಿಷಯ. ಹೀಗಾಗಿ ತೆರಿಗೆ ಮಿತಿ ಬದಲಾವಣೆಯನ್ನು ನಿರೀಕ್ಷಿಸಬಹುದು.
ಆದಾಯದಲ್ಲಿ ವ್ಯತ್ಯಾಸ ಕಂಡು ಬಂದಿರುವುದರಿಂದ ಸೇವಾ ತೆರಿಗೆ ಹೆಚ್ಚಳ ಅನಿವಾರ್ಯ ಎಂದು ಜೇಟ್ಲಿ ಅವರು ಸಮರ್ಥನೆ ನೀಡುವ ಸಾಧ್ಯತೆಯಿದೆ. ಕೆಪಿಎಂಜಿ ಮೂಲಗಳ ಪ್ರಕಾರ ಸೇವಾ ತೆರಿಗೆ ಶೇ 14ರಷ್ಟು ಹೆಚ್ಚಳ ಕಾಣಲಿದೆ. ಹೀಗಾಗಿ ಹೋಟೆಲ್ ಊಟ ಇನ್ಮುಂದೆ ದುಬಾರಿಯಾಗಲಿದೆ.

ಇದರ ಜೊತೆಗೆ ಕ್ಲಬ್, ವಿವಿಧ ಸಂಸ್ಥೆಗಳ ಸದಸ್ಯತ್ವ ವಕೀಲರ ಫೀಸ್ ನಿಮ್ಮ ಕೈ ಕಚ್ಚಲಿದೆ. ಏ.1, 2016ರಿಂದ ಅನ್ವಯವಾಗುವಂತೆ ಹೊಸ ಸರಕು ಹಾಗೂ ಸೇವಾ ತೆರಿಗೆ(ಜಿಎಸ್ ಟಿ) ಅನುಷ್ಠಾನಗೊಳಿಸಲು ಮೋದಿ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆಯಿದೆ.
ಹಾಲಿ ಸೇವಾ ತೆರಿಗೆ ದರ ಶೇ 12ರಷ್ಟಿದೆ. ಜಿಎಸ್ ಟಿ ಅನುಷ್ಠಾನಗೊಂಡರೆ ಶೇ 16-17ರ ತನಕ ಸೇವಾ ತೆರಿಗೆ ಏರಿಕೆಯಾದರೂ ಅಚ್ಚರಿ ಪಡಬೇಕಾಗಿಲ್ಲ. ಆದರೆ, ಗ್ರಾಹಕರ ಹಿತದೃಷ್ಟಿಯಿಂದ ಕಾಲಕಾಲಕ್ಕೆ ಸೇವಾ ತೆರಿಗೆ ದರ ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಬಹುದು ಎಂದು ಕೆಪಿಎಂಜಿ ಸಂಸ್ಥೆಯ ಪ್ರತೀಕ್ ಜೈನ್ ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications