ಜಮ್ಮು: ಭದ್ರತಾ ಪಡೆ - ಉಗ್ರರ ನಡುವೆ ಗುಂಡಿನ ಚಕಮಕಿ, ಮೂವರು ಉಗ್ರರ ಹತ್ಯೆ
ಶ್ರೀನಗರ, ಡಿ. 28: ಬುಧವಾರ ಜಮ್ಮುವಿನ ಹೊರವಲಯದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎನ್ಕೌಂಟರ್ನಲ್ಲಿ ಕನಿಷ್ಠ ಮೂವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
J&K | We noticed unusual movement of a truck & followed it. Truck was stopped at Sidhra in Jammu where driver managed to flee. When the truck was searched terrorists hiding inside, fired on the personnel. Retaliatory firing was done: ADGP Mukesh Singh pic.twitter.com/u9UmTFc5rt
— ANI (@ANI) December 28, 2022
ಬುಧವಾರ ಬೆಳಗ್ಗೆ ಜಮ್ಮುವಿನ ಹೊರವಲಯದ ಜಮ್ಮುವಿನ ಪಂಜತೀರ್ಥಿ-ಸಿದ್ರಾ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದ ಟ್ರಕ್ ಅನ್ನು ಭದ್ರತಾ ಪಡೆಗಳು ತಡೆದ ನಂತರ ಗುಂಡಿನ ಚಕಮಕಿ ನಡೆದಿದೆ. ಎನ್ಕೌಂಟರ್ನಲ್ಲಿ ಕನಿಷ್ಠ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡಿನ ಕಾಳಗದಲ್ಲಿ ಟ್ರಕ್ಗೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಯಲಾಗಿದೆ ಎಂದಿದ್ದಾರೆ.

"ಈ ಪ್ರದೇಶದಲ್ಲಿ ಟ್ರಕ್ನ ಅನುಮಾನಾಸ್ಪದ ಚಲನವಲನವಿತ್ತು. ಪೊಲೀಸರು ಚೆಕ್ ಪೋಸ್ಟ್ನಲ್ಲಿ ಟ್ರಕ್ ಅನ್ನು ತಡೆದರು. ಭದ್ರತಾ ಪಡೆಗಳು ಟ್ರಕ್ ಅನ್ನು ಶೋಧಿಸಲು ಪ್ರಾರಂಭಿಸಿದಾಗ, ಒಳಗೆ ಅಡಗಿದ್ದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು. ಗುಂಡಿನ ಚಕಮಕಿಯಲ್ಲಿ ಎಲ್ಲಾ ಭಯೋತ್ಪಾದಕರು ಹತರಾಗಿದ್ದಾರೆ. ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ " ಎಂದು ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಮುಕೇಶ್ ಸಿಂಗ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೋಮವಾರವಷ್ಟೇ 15 ಕಿಲೋಗ್ರಾಂಗಳಷ್ಟು ತೂಕದ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪೊಲೀಸರು ನಿಷ್ಕ್ರಿಯಗೊಳಿಸಿದ್ದರು. ಸೋಮವಾರ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಯ ಒಂದು ಕೋಡೆಡ್ ಶೀಟ್ ಮತ್ತು ಒಂದು ಲೆಟರ್ ಪ್ಯಾಡ್ ಪುಟವನ್ನು ಸಹ ವಶಪಡಿಸಿಕೊಳ್ಳಲಾಗಿದೆ, ಶಂಕಿತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.
ಅಧಿಕಾರಿಗಳ ಪ್ರಕಾರ, ಬಸಂತಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
"ಸಿಲಿಂಡರ್ ಆಕಾರದಲ್ಲಿ ಸುಮಾರು 15 ಕೆಜಿ ತೂಕದ ಐಇಡಿ ತರಹದ ವಸ್ತು, 300-400 ಗ್ರಾಂ ಆರ್ಡಿಎಕ್ಸ್, 7.6 ಎಂಎಂನ ಏಳು ಕಾರ್ಟ್ರಿಡ್ಜ್ಗಳು, ಐದು ಡಿಟೋನೇಟರ್ಗಳು, ಒಂದು ಕೋಡೆಡ್ ಶೀಟ್, ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯ ಒಂದು ಲೆಟರ್ ಪ್ಯಾಡ್ ಪುಟ ಉಧಮ್ಪುರ ಜಿಲ್ಲೆಯ ಬಸಂತ್ಗಢ ಪ್ರದೇಶದಲ್ಲಿ ದೊರಕಿದೆ. ಒಬ್ಬ ಶಂಕಿತನನ್ನು ಸಹ ಬಂಧಿಸಲಾಗಿದೆ "ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications