50 ದಿನಕ್ಕೆ ಕಾಶ್ಮೀರದಲ್ಲಿ 26 ಸೈನಿಕರು ಹುತಾತ್ಮ, 22 ಉಗ್ರರ ಹತ್ಯೆ
2010ರ ನಂತರ ಇದೇ ಮೊದಲ ಬಾರಿಗೆ 2017ರಲ್ಲಿ ಕೇವಲ 50 ದಿನಗಳಲ್ಲಿ 22 ಉಗ್ರರನ್ನು ಭಾರತೀಯ ಸೇನಾ ಪಡೆಗಳು ಹೊಡೆದುರುಳಿಸಿವೆ. ಆದರೆ ಇದೇ ವೇಳೆ 26 ಸೈನಿಕರೂ ಪ್ರಾಣ ಕಳೆದುಕೊಂಡಿದ್ದಾರೆ.
ಬೆಂಗಳೂರು, ಫೆಬ್ರವರಿ 19: 2010ರ ನಂತರ ಇದೇ ಮೊದಲ ಬಾರಿಗೆ 2017ರಲ್ಲಿ ಕೇವಲ 50 ದಿನಗಳಲ್ಲಿ 22 ಉಗ್ರರನ್ನು ಭಾರತೀಯ ಸೇನಾ ಪಡೆಗಳು ಹೊಡೆದುರುಳಿಸಿವೆ. ಆದರೆ ಇದೇ ವೇಳೆ 26 ಸೈನಿಕರೂ ಪ್ರಾಣ ಕಳೆದುಕೊಂಡಿದ್ದಾರೆ.
ಕಾಶ್ಮೀರದಲ್ಲಿ ಈ ಬಾರಿ ಹಿಮಪಾತ ಹೆಚ್ಚಾದ ಹಿನ್ನಲೆಯಲ್ಲಿ ಓರ್ವ ಅಧಿಕಾರಿ ಸೇರಿ 20 ಸೈನಿಕರು ಹಿಮ ಕುಸಿತಕ್ಕೆ ಜೀವ ಕಳೆದುಕೊಂಡಿದ್ದಾರೆ. ಇನ್ನುಳಿದ 6 ಜವಾನರು ಉಗ್ರರ ಜತೆಗಿನ ಕಾದಾಟದಲ್ಲಿ ಅಸುನೀಗಿದ್ದಾರೆ.[ಉಗ್ರರು ಒಳನುಳಲು ತೋಡಿದ್ದ 20 ಅಡಿ ಸುರಂಗ ಪತ್ತೆ ಹಚ್ಚಿದ ಬಿಎಸ್ ಎಫ್]
2017ರ ಜನವರಿ ಒಂದರಿಂದ ಕಾಶ್ಮೀರದಲ್ಲಿ ಒಟ್ಟು 50 ಕಾರ್ಯಾಚರಣೆಗಳನ್ನು ಸೇನೆ ನಡೆಸಿದೆ. ಇದರಲ್ಲಿ 22 ಜನ ಸಾವನ್ನಪ್ಪಿದ್ದರೆ ಮೂವರು ಸೆರೆ ಸಿಕ್ಕಿದ್ದಾರೆ. ಇದೇ ವೇಳೆ ಬಂಡುಕೋರರಿಗೆ ಮಾಹಿತಿಗಳನ್ನು ನೀಡುತ್ತಿದ್ದ ಹಲವರನ್ನೂ ಸೇನೆ ಬಂಧಿಸಿದೆ.

ಕಳೆದ ವರ್ಷ ಹಿಜ್ಬುಲ್ಲಾ ಮುಜಾಹಿದ್ದೀನ್ ಬಂಡುಕೋರ ಬುರ್ಹಾನ್ ವನಿ ಸಾವಿನ ನಂತರ ಸುಮಾರು 100 ಯುವಕರು ಬಂಡುಕೋರ ಸಂಘಟನೆಗಳನ್ನು ಸೇರಿಕೊಂಡಿದ್ದಾರೆ ಎಂದು ಗುಪ್ತಚರ ಇಲಾಖೆ ಹೇಳಿದೆ.[ಜಮ್ಮು ಕಾಶ್ಮೀರ ಬಂಡಿಪೋರಾ ಎನ್ಕೌಂಟರ್, 3 ಸೈನಿಕರು ಹುತಾತ್ಮ]
ಇತ್ತೀಚೆಗೆ ಸಾವನ್ನಪ್ಪಿರುವ ಉಗ್ರರು ವನಿ ಸಾವಿನ ನಂತರ ಕಳೆದ 6 ತಿಂಗಳಲ್ಲಿ ರೈಫಲ್ ಕೈಗೆತ್ತಿಕೊಂಡವರಾಗಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರರು ಬಂಡುಕೋರ ಸಂಘಟನೆ ಸೇರುವುದನ್ನು ತಡೆಯಲು ಸೇನೆ ಈ ಮಿಂಚಿನ ಕಾರ್ಯಾಚರಣೆಗಳನ್ನು ನಡೆಸಿದೆ.
2010ರಲ್ಲಿ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಒಟ್ಟು 38 ಸೈನಿಕರು ಸಾವನ್ನಪ್ಪಿದ್ದರೆ ಈ ವರ್ಷ 22 ಜನ ಸಾವನ್ನಪ್ಪಿದ್ದಾರೆ. ಇನ್ನು 2015 ಮತ್ತು 16ರಲ್ಲಿ ತಲಾ 18 ಉಗ್ರರು ಸಾವನ್ನಪ್ಪಿದ್ದರು.
ಇತ್ತೀಚೆಗೆ ಅಂದರೆ ಫೆಬ್ರವರಿ 12ರಂದು ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರಿನಲ್ಲಿ 4 ಸೈನಿಕರು ಅಸುನೀಗಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications