ಜಮ್ಮು ಮತ್ತು ಕಾಶ್ಮೀರ: ಸೈನಿಕನಿಗೆ ಕಲ್ಲಿನಿಂದ ಹೊಡೆದು ಸಾಯಿಸಿದ ದುಷ್ಕರ್ಮಿ ಯುವಕರು
ಶ್ರೀನಗರ, ಅಕ್ಟೋಬರ್ 26: ಜಮ್ಮು ಮತ್ತು ಕಾಶ್ಮೀರದಲ್ಲಿ ಯುವಕರ ಗುಂಪಿನಿಂದ ಕಲ್ಲೇಟಿಗೆ ಒಳಗಾಗಿ ತೀವ್ರ ಗಾಯಗೊಂಡಿದ್ದ ಸೈನಿಕ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.
ಗುರುವಾರ ಗಡಿ ರಸ್ತೆ ಸಂಸ್ಥೆಗೆ (ಬಿಆರ್ಒ) ಭದ್ರತೆ ಒದಗಿಸುವ ಸಲುವಾಗಿ ನಿಯೋಜಿಸಲಾಗಿದ್ದ ತ್ವರಿತ ಪ್ರತಿಕ್ರಿಯಾ ತಂಡದಲ್ಲಿ ಸಿಪಾಯಿ ರಾಜೇಂದ್ರ ಸಿಂಗ್ ಕೂಡ ಸೇರಿದ್ದರು. ಸಂಜೆ ಆರು ಗಂಟೆ ಸುಮಾರಿಗೆ ಅನಂತ್ನಾಗ್ ಬೈಪಾಸ್ ಸಮೀಪ ಹಾದುಹೋಗುವಾಗ ಕಿಡಿಗೇಡಿ ಯುವಕರು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಘಟನೆಯಲ್ಲಿ ರಾಜೇಂದ್ರ ಸಿಂಗ್ ಅವರ ತಲೆಗೆ ಕಲ್ಲು ಬಡಿದು ತೀವ್ರ ಗಾಯವಾಗಿತ್ತು. ಕೂಡಲೇ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಸೇನಾ ಶಿಬಿರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ವಿಪರೀತ ರಕ್ತಸ್ರಾವ ಮತ್ತು ಆಳವಾದ ಗಾಯದಿಂದಾಗಿ ಅವರು ಶುಕ್ರವಾರ ಕೊನೆಯುಸಿರೆಳೆದರು.
Three Army Jawans martyred in the Kashmir valley today. While two Army Jawans were killed in Counter-terror Ops in Sopore and Tral, 22 year old Sepoy Rajendra Singh was killed in an attack by coward stone pelters at Anantnag trijunction when he was providing security to BRO. 🇮🇳 pic.twitter.com/5spSum9STo
— Aditya Raj Kaul (@AdityaRajKaul) 26 October 2018
ಉತ್ತರಾಖಂಡದ ಬಡೇನಾ ಗ್ರಾಮದ ನಿವಾಸಿಯಾಗಿರುವ ರಾಜೇಂದ್ರ ಸಿಂಗ್, 2016ರಲ್ಲಿ ಸೇನೆ ಸೇರಿದ್ದರು.
ಕಾಶ್ಮೀರ ಕಣಿವೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ಇಬ್ಬರು ಯೋಧರು ಕೂಡ ಶುಕ್ರವಾರ ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications