ಜಮ್ಮು & ಕಾಶ್ಮೀರ ವಿಧಾನಸಭೆ ಗೆಲುವಿನ ಇತಿಹಾಸ ಏನು ಹೇಳುತ್ತೆ?
ಜಮ್ಮು ಮತ್ತು ಕಾಶ್ಮೀರದ ವಿಚಾರ ಜಾಗತಿಕ ಮಟ್ಟದಲ್ಲೂ ಪದೇ ಪದೇ ಚರ್ಚೆಯಾಗುತ್ತದೆ. ಭಾರತದ ತುತ್ತ ತುದಿಯಲ್ಲಿ ಇರುವ ರಾಜ್ಯ ಎಂದು ಕರೆಸಿಕೊಳ್ಳುತ್ತಿದ್ದ ಜಮ್ಮು & ಕಾಶ್ಮೀರಕ್ಕೆ ಈಗ, ಬೇರೆಯದ್ದೇ ಸ್ಥಾನಮಾನ ಸಿಕ್ಕಿದೆ. ಜಮ್ಮು & ಕಾಶ್ಮೀರದ ವಿಶೇಷ ಸ್ಥಾನ ರದ್ದು ಮಾಡಿ ಬರೋಬ್ಬರಿ 5 ವರ್ಷಗಳೇ ಕಳೆದಿದ್ದು, ಇಂದು ಜಮ್ಮು & ಕಾಶ್ಮೀರದ ವಿಧಾನಸಭೆ ಚುನಾವಣೆ ಮತದಾನಕ್ಕೆ ಕೌಂಟ್ಡೌನ್ ಶುರುವಾಗಿದೆ. ಹಾಗಾದರೆ ಜಮ್ಮು & ಕಾಶ್ಮೀರ ಗೆಲುವಿನ ಇತಿಹಾಸ ಹೇಳುವುದು ಏನು? ಕಣಿವೆ ರಾಜ್ಯದ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಕಣಿವೆ ರಾಜ್ಯ ಜಮ್ಮು & ಕಾಶ್ಮೀರದ ಚುನಾವಣೆಗೆ ಸಾಕಷ್ಟು ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಜಮ್ಮು & ಕಾಶ್ಮೀರದ ವಿಧಾನಸಭೆ ಚುನಾವಣೆ ಆರಂಭ ಆಗಿದೆ, ಬಹು ನಿರೀಕ್ಷಿತ ಚುನಾವಣೆಯು ಇದಾಗಿದೆ. ಭದ್ರತೆ ಕಾರಣಕ್ಕೆ ವಿವಿಧ ಹಂತಗಳಲ್ಲಿ ಜಮ್ಮು & ಕಾಶ್ಮೀರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಇಂದು ಮೊದಲನೇ ಹಂತದ ವೋಟಿಂಗ್ ಶುರು ಆಗಿದೆ. ಮೊದಲ ಹಂತದಲ್ಲಿ ಒಟ್ಟು 24 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, 23.27 ಲಕ್ಷ ಮತದಾರರು ಈಗ ಮೊದನೇ ಹಂತದಲ್ಲಿ ಮತದಾನ ಮಾಡಲು ಸಜ್ಜಾಗಿದ್ದಾರೆ. ಹಾಗಾದ್ರೆ ಈ ಬಾರಿ ಸಮೀಕ್ಷೆಗಳು ಹೇಳಿದ್ದು ಏನು? ಯಾವ ಪಕ್ಷ ಜಮ್ಮು & ಕಾಶ್ಮೀರದಲ್ಲಿ ಅಧಿಕಾರ ಹಿಡಿಯಲಿದೆ? ಮುಂದೆ ಓದಿ.

3 ಹಂತಗಳಲ್ಲಿ ಮತದಾನ ನಡೆಯಲಿದೆ
ಭಾರತದ ಸುಂದರ ರಾಜ್ಯ ಜಮ್ಮು ಮತ್ತು ಕಾಶ್ಮೀರ ಆಗಿದ್ದು, ಜಾಗತಿಕವಾಗಿ ಕೂಡ ಜಮ್ಮು & ಕಾಶ್ಮೀರ ಗಮನ ಸೆಳೆಯುತ್ತಾ ಬಂದಿದೆ. ಇಂತಿಪ್ಪ ಜಮ್ಮು & ಕಾಶ್ಮೀರದ ವಿಧಾನಸಭೆ ಒಟ್ಟು 90 ಸದಸ್ಯರ ಬಲ ಹೊಂದಿದೆ. 90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದ ವಿಧಾಸಭೆಗೆ ಒಟ್ಟಾರೆ 3 ಹಂತಗಳಲ್ಲಿ ಮತದಾನ ನಡೆಯಲಿದೆ. ಸೆಪ್ಟೆಂಬರ್ 18 ಅಂದರೆ ಇಂದು ಮೊದಲನೇ ಹಂತ, ಸೆಪ್ಟೆಂಬರ್ 25ಕ್ಕೆ 2ನೇ ಹಂತ ಮತ್ತು ಅಕ್ಟೋಬರ್ 01ಕ್ಕೆ 3ನೇ ಹಂತದಲ್ಲಿ ಮತದಾನ ನಡೆದು, ಅದೇ ದಿನ ವೋಟಿಂಗ್ ಮುಕ್ತಾಯ ಆಗಲಿದೆ. ಹೀಗಿದ್ದಾಗ ಜಮ್ಮು ಮತ್ತು ಕಾಶ್ಮೀರ ಎಲೆಕ್ಷನ್ ಸಮೀಕ್ಷೆಗಳು ಈಗಾಗಲೇ ಒಂದು ಪಕ್ಷಕ್ಕೆ ಆಘಾತ ನೀಡಿದ್ದು, ಬಹುಮತದ ಸರ್ಕಾರ ಅಧಿಕಾರ ಹಿಡಿಯಲಿದೆ ಎನ್ನುತ್ತಿವೆ ಸಮೀಕ್ಷೆಗಳು.
ಎಲೆಕ್ಷನ್ ರಿಸಲ್ಟ್ ಏನಾಗಲಿದೆ?
ಅಂದಹಾಗೆ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ ಸುಮಾರು 10 ವರ್ಷಗಳ ನಂತರ ಹೀಗೆ ಚುನಾವಣೆ ನಡೆಯುತ್ತಿದ್ದು, ಗೆಲುವಿಗಾಗಿ ಕಾಂಗ್ರೆಸ್ & ಬಿಜೆಪಿ ಪೈಪೋಟಿ ನಡೆಸಿವೆ. ಎರಡೂ ಪಕ್ಷಗಳು ಒಕ್ಕೂಟ ರಚಿಸಿಕೊಂಡು ಹೋರಾಟ ನಡೆಸಿದ್ದವು. ಹೀಗಿದ್ದಾಗ ಸಮೀಕ್ಷೆಗಳು ವಿವಿಧ ರೀತಿಯ ಫಲಿತಾಂಶ ನೀಡಿದ್ದರೂ, ಇಂದು ಜಮ್ಮು ಮತ್ತು ಕಾಶ್ಮೀರದ ಮತದಾರರು ತಮಗೆ ಯಾರು ಬೇಕು? ಎಂಬುದನ್ನ ಆಯ್ಕೆ ಮಾಡಲಿದ್ದಾರೆ. ಹೀಗಾಗಿ ಫಲಿತಾಂಶ ಕುತೂಹಲವನ್ನು ಕೆರಳಿಸಿದ್ದು, ಎಲೆಕ್ಷನ್ ರಿಸಲ್ಟ್ ಏನಾಗಲಿದೆ? ಎಂಬುದನ್ನ ಕಾದು ನೋಡಬೇಕಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications