ಭಾರತ್ ಜೋಡೋ ಯಾತ್ರೆಗೂ ಮುನ್ನವೇ ಜಮ್ಮು ಕಾಂಗ್ರೆಸ್ ವಕ್ತಾರ ರಾಜೀನಾಮೆ, ಕಾರಣವೇನು?
ಶ್ರೀನಗರ, ಜನವರಿ 18: ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ವಕ್ತಾರ ದೀಪಿಕಾ ಪುಷ್ಕರ್ ನಾಥ್ ಅವರು ಜನವರಿ 20ರಂದು ಕೇಂದ್ರಾಡಳಿತ ಪ್ರದೇಶವನ್ನು ಪ್ರವೇಶಿಸಲು ಉದ್ದೇಶಿಸಿರುವ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಗೆ ಸೇರಲು ಬಿಜೆಪಿಯ ಮಾಜಿ ನಾಯಕ ಮತ್ತು ಸಚಿವ ಚೌಧರಿ ಲಾಲ್ ಸಿಂಗ್ ಅವರಿಗೆ ರಾಜ್ಯ ಘಟಕ ಅನುಮತಿ ನೀಡಿದ ನಂತರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ದೀಪಿಕಾ ಪುಷ್ಕರ್ ನಾಥ್ ಮಂಗಳವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. 2018ರ ಕಥುವಾದಲ್ಲಿ ಎಂಟು ವರ್ಷದ ಅಲೆಮಾರಿ ಬಾಲಕಿಯ ಅತ್ಯಾಚಾರಿಗಳನ್ನು ಸಮರ್ಥಿಸುವ ಮೂಲಕ ಚೌಧರಿ ಲಾಲ್ ಸಿಂಗ್ ಜವಾಬ್ದಾರರಾಗಿರುವುದರಿಂದ ಸೈದ್ಧಾಂತಿಕ ಆಧಾರದ ಮೇಲೆ ಪಕ್ಷವನ್ನು ತೊರೆಯುತ್ತಿದ್ದೇನೆ ಎಂದು ನಾಥ್ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
Karnataka Assembly Election 2023: ಚಿತ್ರದುರ್ಗ ಜಿಲ್ಲೆಯಲ್ಲಿನ ಟಿಕೆಟ್ ಆಕಾಂಕ್ಷಿಗಳು
ಭಾರತ್ ಜೋಡೋ ಯಾತ್ರೆ ಮತ್ತು ಕಾಂಗ್ರೆಸ್ ಸೇರುವ ಚೌಧರಿ ಲಾಲ್ ಸಿಂಗ್ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ಗೆ ರಾಜೀನಾಮೆ ನೀಡುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ. ಅತ್ಯಾಚಾರಿಗಳನ್ನು ನಿರ್ಲಜ್ಜವಾಗಿ ಸಮರ್ಥಿಸುವ ಮೂಲಕ 2018 ರಲ್ಲಿ ಕಥುವಾ ಅತ್ಯಾಚಾರ ಪ್ರಕರಣವನ್ನು ಬುಡಮೇಲು ಲಾಲ್ ಸಿಂಗ್ ಕಾರಣರಾಗಿದ್ದರು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಅತ್ಯಾಚಾರಿಗಳನ್ನು ರಕ್ಷಿಸಲು ಲಾಲ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದ ಸಂಪೂರ್ಣ ಪ್ರದೇಶವನ್ನು ವಿಭಜಿಸಿದ್ದಾರೆ. ಇಂತಹವರಿಗೆ ಭಾರತ್ ಜೋಡೋ ಸೈದ್ಧಾಂತಿಕವಾಗಿ ವಿರುದ್ಧವಾಗಿದೆ. ಸೈದ್ಧಾಂತಿಕ ಆಧಾರದ ಮೇಲೆ ಅಂತಹ ವ್ಯಕ್ತಿಯೊಂದಿಗೆ ನಾನು ಪಕ್ಷದ ವೇದಿಕೆಯನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ರಾಹುಲ್ ಗಾಂಧಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.
ವನ್ಯಜೀವಿಗಳ ಪತ್ತೆ ಪ್ರಕರಣ: ಬಿಜೆಪಿಯವರಿಗೆ ಮೆದುಳಿಲ್ಲ: ಎಸ್. ಎಸ್. ಮಲ್ಲಿಕಾರ್ಜುನ್ ಆಕ್ರೋಶ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಜನತಾ ಪಾರ್ಟಿಯೊಂದಿಗೆ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷವು ಒಪ್ಪಂದಕ್ಕೆ ಬಂದಾಗ ಅಂದಿನ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಅರಣ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಚೌಧರಿ ಲಾಲ್ ಸಿಂಗ್ ಅವರನ್ನು ಒತ್ತಾಯಿಸಿದ್ದರು. ಭಾರತ್ ಜೋಡೋ ಯಾತ್ರೆ ಜನವರಿ 19ರಂದು ಜಮ್ಮು ಮತ್ತು ಕಾಶ್ಮೀರವನ್ನು ಪ್ರವೇಶಿಸಲಿದ್ದು, ಅಲ್ಲಿ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಸಂಜಯ್ ರಾವತ್, ಎಂವೈ ತಾರಿಗಾಮಿ, ಮೆಹಬೂಬಾ ಮುಫ್ತಿ ವಿವಿಧ ಸ್ಥಳಗಳಲ್ಲಿ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.