ಜಮ್ಮು ಕಾಶ್ಮೀರದಲ್ಲಿ ಸರ್ವಪಕ್ಷ ಸಭೆ ಕರೆದ ರಾಜ್ಯಪಾಲ ವೋಹ್ರಾ
ಶ್ರೀನಗರ, ಜೂನ್ 22: ಜಮ್ಮು ಕಾಶ್ಮೀರ ರಾಜ್ಯದ ಪರಿಸ್ಥಿಯ ಬಗ್ಗೆ ಚರ್ಚೆ ನಡೆಸಲು ಸರ್ವಪಕ್ಷ ಸಭೆಯನ್ನು ರಾಜ್ಯಪಾಲ ಎನ್ ಎನ್ ವೋಹ್ರಾ ಇಂದು ಕರೆದಿದ್ದಾರೆ.
ಜೂನ್ 20 ರಿಂದ ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆ ಅಸ್ತಿತ್ವದಲ್ಲಿದ್ದು, ಈ ಹಿನ್ನೆಲೆಯಲ್ಲಿ ಅವರು ಸಭೆ ಕರೆದಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಸಚಿವಾಲಯದಿಂದ ಇತ್ಯಾರ್ಥವಾಗದೆ ಉಳಿದ ನಿರ್ಣಯಗಳ ಕುರಿತೂ ಚರ್ಚಿಸುವ ಸಾಧ್ಯತೆ ಇದೆ.

ಜಮ್ಮು ಕಾಶ್ಮೀರದಲ್ಲಿದ್ದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರವೂ, ಬಿಜೆಪಿ ತನ್ನ ಬೆಂಬಲವನ್ನು ವಾಪಸ್ ಪಡೆದ ನಂತರ ಅಲ್ಪಮತಕ್ಕೆ ಕುಸಿದಿತ್ತು. ಇದರಿಂದಾಗಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆ ಸಲ್ಲಿಸಿದ್ದರು. ವಿಪಕ್ಷಗಳೂ ಮೈತ್ರಿ ಸರ್ಕಾರ ರಚಿಸಲು ಮುಂದೆ ಬಾರದ ಕಾರಣ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಹೇರಲಾಗಿತ್ತು.












Click it and Unblock the Notifications