J&K: ಮಾತಾ ವೈಷ್ಣೋದೇವಿ ದೇವಸ್ಥಾನದಲ್ಲಿ ಅಮಿತ್ ಶಾ ಪ್ರಾರ್ಥನೆ

3 ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಬೆಳಗ್ಗೆ ಜಮ್ಮುವಿನ ಕತ್ರಾದಲ್ಲಿರುವ ಮಾತಾ ವೈಷ್ಣೋದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಡೋಗ್ರಾ ಸಮುದಾಯದ ಪ್ರತಿನಿಧಿಗಳು ಸೇರಿದಂತೆ ಹಲವಾರು ನಿಯೋಗಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸಹ ಉಪಸ್ಥಿತರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಪ್ಟೆಂಬರ್ 23 ರಂದು ಈ ಪ್ರದೇಶದ ಕೊನೆಯ ಡೋಗ್ರಾ ದೊರೆ ಮಹಾರಾಜ ಹರಿ ಸಿಂಗ್ ಅವರ ಜನ್ಮದಿನದಂದು ರಾಜ್ಯ ರಜೆ ಘೋಷಿಸಿದ್ದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಜಮ್ಮು ಮತ್ತು ಕಾಶ್ಮೀರ ಘಟಕದ ಮುಖ್ಯಸ್ಥ ರವೀಂದರ್ ರೈನಾ ನೇತೃತ್ವದ ಡೋಗ್ರಾ ಸಮುದಾಯದ ನಿಯೋಗ ಮತ್ತು ಪಕ್ಷದ ಹಿರಿಯ ನಾಯಕರಾದ ಅಜತ್ ಶತ್ರು ಸಿಂಗ್, ದೇವೇಂದ್ರ ಸಿಂಗ್ ರಾಣಾ ಮತ್ತು ಎಸ್ ಎಸ್ ಸ್ಲಾಥಿಯಾ ಅವರನ್ನು ಒಳಗೊಂಡಂತೆ ಕೇಂದ್ರಕ್ಕೆ ಧನ್ಯವಾದ ಅರ್ಪಿಸಿದರು.

Jammu and Kashmir: Union Home Minister Amit Shah prays at Mata Vaishno Devi Temple

ಯುವ ರಜಪೂತ ಸಭಾ ಮತ್ತು ಅಮರ್ ಕ್ಷತ್ರಿಯ ರಜಪೂತ ಸಭಾದ ಮುಖಂಡರು ಸಹ ನಿಯೋಗದ ಭಾಗವಾಗಿದ್ದರು. ಸಭೆಯ ಚಿತ್ರಗಳನ್ನು ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿರುವ ಶಾ, ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವನ್ನಾಗಿ ಮಾಡುವಲ್ಲಿ ಅವರು ನೀಡಿದ ಕೊಡುಗೆಯನ್ನು ಗೌರವಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಜ ಹರಿ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದಂದು ರಾಜ್ಯ ರಜೆ ಘೋಷಿಸಿದ್ದಾರೆ ಎಂದು ಹೇಳಿದರು.

"ಜಮ್ಮುವಿನಲ್ಲಿ, ಡೋಗ್ರಾ ಸಮುದಾಯದ ಪ್ರತಿನಿಧಿಗಳು ಭೇಟಿಯಾಗಿ ಮೋದಿಜಿಯ ನಿರ್ಧಾರಕ್ಕಾಗಿ ಮನಃಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸಿದರು" ಎಂದು ಗೃಹ ಸಚಿವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಮತ್ತು ಮಹಾರಾಜ ಹರಿ ಸಿಂಗ್ ಅವರ ಮೊಮ್ಮಗ ಅಜತ್ ಶತ್ರು ಸಿಂಗ್ ಅವರು ಕೊನೆಯ ಡೋಗ್ರಾ ಆಡಳಿತಗಾರನ ಭಾವಚಿತ್ರವನ್ನು ಶಾಗೆ ಹಸ್ತಾಂತರಿಸಿದರು.

ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯದ ಪ್ರತಿನಿಧಿಗಳು ಸಹ ಗೃಹ ಸಚಿವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಅವರ ಸಮಸ್ಯೆಗಳನ್ನು ಚರ್ಚಿಸಿದರು. ಸಿಖ್ ನಿಯೋಗ ಕೂಡ ಶಾ ಅವರನ್ನು ಭೇಟಿ ಮಾಡಿದೆ.

ಈ ಮಧ್ಯೆ, ಜಮ್ಮು ಮತ್ತು ಕಾಶ್ಮೀರ ಡಿಜಿಪಿ (ಜೈಲು ಇಲಾಖೆ) ಹೇಮಂತ್ ಕುಮಾರ್ ಲೋಹಿಯಾ ಜಮ್ಮುವಿನ ಅವರ ನಿವಾಸದಲ್ಲಿ ಹತ್ಯೆಗೀಡಾದ ಪ್ರಕರಣವು ಜಮ್ಮು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆಯನ್ನು ಎತ್ತಿದೆ. ಶಾ ಜಿಲ್ಲೆಗೆ ಭೇಟಿ ನೀಡಿದ ಗಂಟೆಗಳ ಹಿಂದೆ ಈ ಘಟನೆ ನಡೆದಿದೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ)ನ ಅಂಗಸಂಸ್ಥೆ ಪೀಪಲ್ಸ್ ಆ್ಯಂಟಿ ಫ್ಯಾಸಿಸ್ಟ್ ಫ್ರಂಟ್ (ಪಿಎಎಫ್‌ಎಫ್) ಹತ್ಯೆಯ ಹಿಂದಿರುವ ಶಂಕೆ ಇದೆ.

ಜಮ್ಮು ಮತ್ತು ಕಾಶ್ಮೀರ ಕಾರಾಗೃಹ ಇಲಾಖೆ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಅವರು ಸೋಮವಾರ ಅಕ್ಟೋಬರ್ 03 ರಂದು ಜಮ್ಮುವಿನ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖಾ ವರದಿ ಪ್ರಕಾರ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ದೇಹದ ಮೇಲೆ ಹಲವಾರು ಗಾಯದ ಗುರುತುಗಳೂ ಕಂಡುಬಂದಿವೆ. ಹತ್ಯೆಯ ನಂತರ ಕಾರಾಗೃಹ ಇಲಾಖೆಯ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಅವರನ್ನು ಸುಟ್ಟು ಹಾಕಿರುವ ಪುರಾವೆಗಳೂ ಸಿಕ್ಕಿವೆ. ಹೇಮಂತ್ ಕುಮಾರ್ ಲೋಹಿಯಾ ಅವರ ಸೇವಕನು ಅವರನ್ನು ಕೊಂದಿದ್ದಾನೆ ಎಂದು ಶಂಕಿಸಲಾಗಿದೆ. ಸೇವಕ ಜಮ್ಮು ಮತ್ತು ಕಾಶ್ಮೀರದ ರಾಂಬನ್ ನಿವಾಸಿಯಾಗಿದ್ದು, ಪ್ರಸ್ತುತ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಕೊಲೆ ಸೇರಿದಂತೆ ಎಲ್ಲಾ ಕೋನಗಳಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+