Jammu- Kashmir: ಅನಂತನಾಗ್ ಎನ್ಕೌಂಟರ್- ಮತ್ತೊಬ್ಬ ಯೋಧ ಸಾವು, 3 ನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ
ನವದೆಹಲಿ, ಸೆಪ್ಟೆಂಬರ್ 15: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ಈ ಎನ್ಕೌಂಟರ್ನಲ್ಲಿ ನಿನ್ನೆಯಿಂದ ನಾಪತ್ತೆಯಾಗಿದ್ದ ಮತ್ತೊಬ್ಬ ಯೋಧ ಪ್ರಾಣ ಕಳೆದುಕೊಂಡಿರುವ ಬಗ್ಗೆ ವರದಿಯಾಗಿದೆ.
ಬುಧವಾರ ಸಂಜೆ ಆರಂಭವಾದ ಎನ್ಕೌಂಟರ್ ಮೂರನೇ ದಿನಕ್ಕೆ ( ಶುಕ್ರವಾರ ) ಕಾಲಿಟ್ಟಿದೆ. ಅನಂತ್ನಾಗ್ ಜಿಲ್ಲೆಯ ಗುಡ್ಡಗಾಡು ಪ್ರದೇಶದ ಅರಣ್ಯ ಪ್ರದೇಶದಲ್ಲಿ ಅಡಗಿರುವ ಭಯೋತ್ಪಾದಕರ ಸ್ಥಳವನ್ನು ಗುರುತಿಸಲು ಸೇನೆಯು ಇದೀಗ ಡ್ರೋನ್ಗಳನ್ನು ಬಳಸುತ್ತಿದೆ.

ಈ ಕುರಿತು ಮಾಹಿತಿ ನೀಡಿರುವ ಭದ್ರತಾ ಪಡೆಯ ಅಧಿಕಾರಿಗಳು, 'ಅನಂತನಾಗ್ ಕಾರ್ಯಾಚರಣೆಯಲ್ಲಿ ಮತ್ತೊಬ್ಬ ಯೋಧ ಪ್ರಾಣ ಕಳೆದುಕೊಂಡಿದ್ದಾರೆ. ಅವರು ನಿನ್ನೆಯಿಂದ ನಾಪತ್ತೆಯಾಗಿದ್ದರು. ಅನಂತನಾಗ್ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ಜಂಟಿ ಭದ್ರತಾ ಕಾರ್ಯಾಚರಣೆಯ ಸಂದರ್ಭದಲ್ಲಿ ಅವರು ತಪ್ಪಿಸಿಕೊಂಡಿದ್ದರು. ಪಡೆಗಳು ಡ್ರೋನ್ಗಳನ್ನು ಬಳಸಿಕೊಂಡು ಶಂಕಿತ ಭಯೋತ್ಪಾದಕರ ಅಡಗುತಾಣಗಳ ಮೇಲೆ ಗ್ರೆನೇಡ್ಗಳನ್ನು ಹಾಕುತ್ತಿವೆ' ಎಂದು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಬುಧವಾರ, ಅನಂತನಾಗ್ನ ಕೋಕರ್ನಾಗ್ ಪ್ರದೇಶದ ಗದೂಲ್ ಗ್ರಾಮದ ಸುತ್ತಮುತ್ತಲಿನ ಅರಣ್ಯಗಳಲ್ಲಿ ಭಯೋತ್ಪಾದಕರನ್ನು ಪತ್ತೆಮಾಡಲು ಸೇನೆ ಮತ್ತು ಪೊಲೀಸರ ಸಂಯೋಜಿತ ಪಡೆ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.
ಈ ಪ್ರದೇಶದಲ್ಲಿ ಎರಡರಿಂದ ಮೂವರು ಭಯೋತ್ಪಾದಕರು ಇರುವ ಬಗ್ಗೆ ಸುಳಿವು ಸಿಕ್ಕ ನಂತರ ಕಾರ್ಯಾಚರಣೆ ನಡೆಸಲಾಯಿತು. ಈಗ ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದಿವೆ.
ಭಯೋತ್ಪಾದಕರೊಂದಿಗಿನ ಭೀಕರ ಗುಂಡಿನ ಚಕಮಕಿಯ ಸಮಯದಲ್ಲಿ, ಕರ್ನಲ್ ಮನ್ಪ್ರೀತ್ ಸಿಂಗ್ ಮತ್ತು 19 ರಾಷ್ಟ್ರೀಯ ರೈಫಲ್ಸ್ನ ಮೇಜರ್ ಆಶಿಶ್ ಧೋಂಚಕ್ ಅವರು ಮೃತಪಟ್ಟಿದ್ದಾರೆ.
ಮಂಗಳವಾರ ಮತ್ತು ಬುಧವಾರದ ಮಧ್ಯರಾತ್ರಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಪಡೆಯ ಡಿಎಸ್ಪಿ ಹುಮಾಯೂನ್ ಭಟ್ ಪ್ರಾಣ ಕಳೆದುಕೊಂಡಿದ್ದಾರೆ.
2023 ರಲ್ಲಿ ಸೇನಾ ಪದಕ ಪುರಸ್ಕೃತರಾದ ಮೇಜರ್ ಧೋಂಚಕ್ ಅವರ ಪಾರ್ಥೀವ ಶರೀರವು ಹರಿಯಾಣದ ಪಾಣಿಪತ್ ತಲುಪಿದ್ದು ಅಲ್ಲಿ ಇಂದು ಅಂತಿಮ ವಿಧಿವಿಧಾನಗಳನ್ನು ನಡೆಸಲಾಗುವುದು.
ಪತ್ನಿ ಮತ್ತು ಮೂರು ತಿಂಗಳ ಮಗನನ್ನು ಅಗಲಿರುವ ಡಿಎಸ್ಪಿ ಭಟ್ ಅವರ ಅಂತ್ಯಕ್ರಿಯೆ ಬುಧವಾರ ಸಂಜೆ ಬುದ್ಗಾಮ್ನಲ್ಲಿ ನೆರವೇರಿತು.
ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿವೆ. ಕೋಕರ್ನಾಗ್ ಪ್ರದೇಶದಲ್ಲಿ 48 ಗಂಟೆಗಳ ಕಾಲ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಯುತ್ತಿದೆ.
ಭಯೋತ್ಪಾದಕರು ಪಾಕಿಸ್ತಾನ ಬೆಂಬಲಿತ ಲಷ್ಕರ್-ಎ-ತೊಯ್ಬಾದ ಗುಂಪಿನ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ನವರು ಎಂದು ಶಂಕಿಸಲಾಗಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications