ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳ ಗುಂಡಿಗೆ ನಾಲ್ವರು ಉಗ್ರರ ಬಲಿ
ಬಾರಾಮುಲ್ಲಾ, ಆಗಸ್ಟ್ 8: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಉಗ್ರರ ಬೇಟೆಯ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.
ಆವಂತಿಪುರದಲ್ಲಿ ಮಂಗಳವಾರ ಭದ್ರತಾ ಪಡೆಗಳು ಪಟ್ಟಾನ್ ಬಾರಾಮುಲ್ಲಾದಲ್ಲಿ ಇಕ್ಬಾಲ್ ಕಾಲೊನಿ ನಿವಾಸಿ ಅಬ್ದುಲ್ ಮಜೀದ್ ಶಾ ಎಂಬ ಉಗ್ರನನ್ನು ಬಂಧಿಸಿದ್ದವು.

ಆತನ ಬಳಿಯಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರೆ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಆತ ಬಾರಾಮುಲ್ಲಾದಲ್ಲಿ ಚಟುವಟಿಕೆ ನಡೆಸುತ್ತಿರುವ ಇತರೆ ಉಗ್ರರನ್ನು ಭೇಟಿ ಮಾಡಲು ಕಾರ್ನಲ್ಲಿ ತೆರಳುತ್ತಿದ್ದಾಗ ಆತನನ್ನು ಬಂಧಿಸಲಾಗಿತ್ತು.
ವಿಚಾರಣೆ ವೇಳೆ ಆತ, ಭಯೋತ್ಪಾದನಾ ದಾಳಿಗಳನ್ನು ನಡೆಸಲು ಯೋಜನೆ ನಡೆಸುತ್ತಿರುವ ಇತರೆ ಉಗ್ರರ ಜತೆ ನಿಕಟ ಸಂಪರ್ಕ ಹೊಂದಿರುವುದಾಗಿ ಬಾಯ್ಬಿಟ್ಟಿದ್ದ. ಆತನ ವಿರುದ್ಧ ಆವಂತಿಪುರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 7/25 ಅಡಿ ಪ್ರಕರಣ ದಾಖಲಿಸಲಾಗಿದೆ.
ಉಗ್ರ ನೀಡಿದ ಮಾಹಿತಿ ಆಧರಿಸಿ ಉಳಿದ ಉಗ್ರರ ಅಡುಗುದಾಣದ ಮೇಲೆ ದಾಳಿ ನಡೆಸಲಾಗಿದ್ದು, ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ. ಇದುವರೆಗೂ ನಾಲ್ವರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಗುರೇಜ್ ವಲಯದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದ್ದ ಸೇನಾ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಯೋಧರು ಹತ್ಯೆ ಮಾಡಿದ್ದರು. ಈ ಘಟನೆಯಲ್ಲಿ ಒಬ್ಬ ಮೇಜರ್ ಸೇರಿದಂತೆ ಮೂವರು ಯೋಧರು ಕೂಡ ಮೃತಪಟ್ಟಿದ್ದರು.
ಇನ್ನು ನಾಲ್ವರು ತಲೆಮರೆಸಿಕೊಂಡಿದ್ದರು. ಅವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications