ಭಾರತದ ಗ್ರಾಮೀಣ ಪ್ರದೇಶದಲ್ಲೇ ಅತಿಹೆಚ್ಚು ಎಟಿಎಂ ಬಳಕೆ!
ನವದೆಹಲಿ, ನವೆಂಬರ್.30: ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಜನ್ ಧನ್ ಖಾತೆದಾರರು ಮತ್ತು ನೇರ ಫಲಾನುಭವಿಗಳ ಹಣ ವರ್ಗಾವಣೆ ಪ್ರಕ್ರಿಯೆಯಲ್ಲಿ ಸುಧಾರಣೆ ಕಂಡು ಬಂದಿದೆ. ದೇಶದಲ್ಲಿ ವೈಟ್ ಲೇಬಲ್ ಆಪರೇಟರ್ ಗಳ ಎಟಿಎಂಗಳ ಸಂಖ್ಯೆಯು ಹೆಚ್ಚಳವಾಗುತ್ತಿದೆ.
2014ರಲ್ಲಿ ಶೇ.02ರಷ್ಟಿದ್ದ ವೈಟ್ ಲೇಬಲ್ ಆಪರೇಟರ್ ಎಟಿಎಂಗಳ ವಹಿವಾಟಿನ ಪ್ರಮಾಣವು ಏಳು ವರ್ಷಗಳಲ್ಲಿ ಶೇ.12ರಷ್ಟಾಗಿದೆ. ಡೆಬಿಟ್ ಕಾರ್ಡ್ ಗಳ ಸಂಖ್ಯೆಯು ದ್ವಿಗುಣಗೊಂಡಿದ್ದು, 2020ರ ಸಪ್ಟೆಂಬರ್ ವೇಳೆಗೆ 86 ಕೋಟಿಗೂ ಅಧಿಕ ಜನರು ಡೆಬಿಟ್ ಕಾರ್ಡ್ ಹೊಂದಿದ್ದಾರೆ. ಈ ಪೈಕಿ ಶೇ.35ರಷ್ಟು ರುಪಿ ಕಾರ್ಡ್ ಗಳನ್ನು ಪ್ರಧಾನಮಂತ್ರಿ ಜನ್ ಧನ್ ಖಾತೆ ಹೊಂದಿರುವ 30 ಕೋಟಿ ಜನರಿಗೆ ನೀಡಲಾಗಿದೆ.
ಸಾಂಕ್ರಾಮಿಕ ಪಿಡುಗಿನ ನಡುವೆ ಗ್ರಾಮೀಣ ಪ್ರದೇಶದಲ್ಲಿ ಬೇಡಿಕೆ ಹೆಚ್ಚಾಗಿರುವುದನ್ನು ನಾವು ಕಂಡುಕೊಂಡಿದ್ದೇನೆ. ಏಕೆಂದರೆ ಕೊವಿಡ್-19 ಸೋಂಕಿನಿಂದ ನಗರ ಪ್ರದೇಶಗಳಲ್ಲಿ ಆರ್ಥಿಕ ವಹಿವಾಟಿನ ಮೇಲೆ ಹೊಡೆತ ಬಿದ್ದಷ್ಟು ಗ್ರಾಮೀಣ ಪ್ರದೇಶಗಳಲ್ಲಿ ಅಷ್ಟಾಗಿ ಹೊಡೆತ ಬಿದ್ದಿಲ್ಲ. ಗ್ರಾಮೀಣ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಎಂದಿನಂತೆ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ ಎಂದು ಬಿಟಿಐ ಪೇಮೆಂಟ್ ಸಿಇಓ ಕೆ.ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ. ಇನ್ನು, ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ಸರ್ಕಾರವು ಬಿಪಿಎಲ್ ಕಾರ್ಮಿಕರಿಗೆ ನೀಡಿದ ನೆರವಿನಿಂದ 2019 ಸಪ್ಟೆಂಬರ್ ಶೇ.9.5ರಷ್ಟಿದ್ದ ಉದ್ಯಮವನ್ನು 2020ರ ಸಪ್ಟೆಂಬರ್ ವೇಳೆಗೆ ಶೇ.12ರಷ್ಟು ಏರಿಕೆಗೆ ಕಾರಣವಾಯಿತು ಎಂದಿದ್ದಾರೆ.

ಭಾರತದ ಎಟಿಎಂ ಉದ್ಯಮದಲ್ಲಿ ಅಭಿವೃದ್ಧಿ:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆಯೂ ಎಟಿಎಂ ಉದ್ಯಮದಲ್ಲಿ ಅಭಿವೃದ್ಧಿ ಕಂಡು ಬಂದಿದೆ. ದೇಶದಲ್ಲಿ ಶೇ.03ರಷ್ಟು ಎಟಿಎಂ ಸಂಖ್ಯೆ ಏರಿಕೆಯಾಗಿದ್ದು, 2.5 ಲಕ್ಷದ ಗಡಿ ದಾಟಿದೆ. 2020ರ ಸಪ್ಟೆಂಬರ್ ಅಂಕಿ-ಅಂಶಗಳ ಪ್ರಕಾರ 24195 ವೈಟ್ ಲೇಬಲ್ ಎಟಿಎಂಗಳ ಸಂಖ್ಯೆ ಹೆಚ್ಚಾಗಿದ್ದು, ಶೇ.14ರಷ್ಟು ಏರಿಕೆ ಕಂಡು ಬಂದಿದೆ. ವೈಟ್ ಲೇಬಲ್ ಎಟಿಎಂಗಳ ಪ್ರಮಾಣ ಗ್ರಾಮೀಣ ಪ್ರದೇಶಗಳಲ್ಲೇ ಅತಿಹೆಚ್ಚಾಗಿರುವುದು ತಿಳಿದು ಬಂದಿದೆ.
ಗ್ರಾಮೀಣ ಪ್ರದೇಶಗಲ್ಲಿ ಆರ್ಥಿಕ ಚಟುವಟಿಕೆ ಹೆಚ್ಚು:
ಸಾಂಕ್ರಾಮಿಕ ಪಿಡುಗಿನಿಂದಾಗಿ ಕೇಂದ್ರ ಸರ್ಕಾರವು ನೇರವಾಗಿ ಫಲಾನುಭವಿಗಳ ಖಾತೆಗೆ ಹಣವನ್ನು ಜಮೆ ಮಾಡಿದೆ. ಈ ಹಿನ್ನೆಲೆ ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳು ಹೆಚ್ಚಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಅತಿಹೆಚ್ಚು ಜನರು ಯೋನೋ ಅಪ್ಲಿಕೇಷನ್ ಅಥವಾ ಎಟಿಎಂಗಳನ್ನು ಬಳಕೆ ಮಾಡುತ್ತಾರೆ ಎಂದು ಕರ್ನಾಟಕ ವಿಭಾಗ ಅಭಿಜಿತ್ ಮಜುಂದಾರ್ ಹೇಳಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications