ಜನಧನ ಯೋಜನೆಯಡಿ ಜೀವ ವಿಮಾ ಸೌಲಭ್ಯ
ಮುಂಬೈ, ಸೆ. 30 : ಪ್ರಧಾನಿ ಮಂತ್ರಿ ಜನಧನ ಯೋಜನೆಯಡಿ ಖಾತೆ ತೆರದ ಪ್ರತಿಯೊಬ್ಬರಿಗೂ ಜೀವ ವಿಮೆ ನೀಡಲು ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಹಣಕಾಸು ಸೇವೆಗಳ ಕಾರ್ಯದರ್ಶಿ ಜಿ.ಎಸ್. ಸಂಧು ತಿಳಿಸಿದ್ದಾರೆ.
ಇಂಡೋ-ಅಮೆರಿಕನ್ ವಾಣಿಜ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ಜನಧನ ಯೋಜನೆಯಡಿ ಈಗಾಗಲೇ ಒಂದು ಲಕ್ಷ ರೂ. ಅಪಘಾತ ವಿಮೆ ನೀಡಿಕೆ ಚಾಲ್ತಿಯಲ್ಲಿದೆ. ಎಚ್ಡಿಎಫ್ಸಿ ಇದರ ಜವಾಬ್ದಾರಿ ಹೊತ್ತುಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.(ಪ್ರಧಾನಮಂತ್ರಿ ಜನಧನ ಯೋಜನೆ ಎಂದರೇನು?)

ಅದರೊಂದಿಗೆ ಈಗ 30 ಸಾವಿರ ರೂ. ಜೀವ ವಿಮೆ ಒದಗಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಯೋಜನೆಯ ಜವಾಬ್ದಾರಿಯನ್ನು ಎಲ್ಐಸಿ ವಹಿಸಿಕೊಳ್ಳಲಿದೆ ಎಂದು ಸಂಧು ತಿಳಿಸಿದ್ದಾರೆ.
ಎಲ್ಲರಿಗೂ ವಿಮೆ ಲಾಭ ತಲುಪಬೇಕು ಎಂಬ ಚಿಂತನೆ ಇಟ್ಟುಕೊಂಡು ಈ ತೀರ್ಮಾನಕ್ಕೆ ಬರಲಾಗಿದೆ. ಸಂಪೂರ್ಣ ರೂಪುರೇಷೆ ಇನ್ನು ಸಿದ್ಧವಾಗಬೇಕಿದೆ. 30 ಸಾವಿರ ರೂ. ವಿಮೆಯ ಪ್ರಿಮಿಯಂ ಯಾರು ತುಂಬಬೇಕು? ಅದನ್ನು ಸರ್ಕಾರವೇ ನೀಡುತ್ತದೆಯೋ? ಇನ್ಶೂರೆನ್ಸ್ ಕಂಪನಿ ನೀಡುತ್ತದೆಯೋ ಅಥವಾ ಖಾತೆದಾರರೇ ತುಂಬಬೇಕೋ ಎಂಬುದರ ಕುರಿತು ಕೆಲ ಗೊಂದಲಗಳಿದ್ದು ಅದನ್ನು ನಿವಾರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.(ಅಕ್ಟೋಬರ್ ಮೊದಲ ವಾರವಿಡೀ ಬ್ಯಾಂಕ್ ತೆರೆಯಲ್ಲ)
ಮೈಕ್ರೋ ವಿಮೆಯನ್ನು ಇನಷ್ಟು ಜನರಿಗೆ ವಿಸ್ತರಿಸಬೇಕಿದೆ. ಕೇವಲ 50 ಲಕ್ಷ ಜನ ಈ ಸೌಲಭ್ಯಕ್ಕೆ ಒಳಪಡುತ್ತಿದ್ದು ಅದನ್ನು 30 ಕೋಟಿ ಜನರಿಗೆ ವಿಸ್ತರಿಸುವ ಗುರಿಯಿದೆ. 50 ಸಾವಿರದವರೆಗೂ ವಿಮಾ ಸೌಲಭ್ಯ ಪಡೆಯಲು ಸಾಧ್ಯವಿದೆ ಎಂದು ಹೇಳಿದ್ದಾರೆ.
ಈ ಎಲ್ಲ ಗೊಂದಲ ನಿವಾರಿಸಿ ಎಲ್ಲರಿಗೂ ಸರ್ಕಾರದ ಸವಲತ್ತು ತಲುಪುವಂತೆ ಮಾಡಲಾಗುವುದು. ಜನರಲ್ಲಿ ವಿಮಾ ಸೌಲಭ್ಯದ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications