6 ಪಕ್ಷಗಳ ವಿಲೀನ, ಜನತಾ ಪರಿವಾರಕ್ಕೆ ಮುಲಾಯಂ ಕಿಂಗ್
ನವದೆಹಲಿ, ಏ.15: ಹಲವು ವರ್ಷಗಳಿಂದ ದೂರ ದೂರವಿದ್ದ ಜನತಾ ಪರಿವಾರ ಮತ್ತೆ ಒಂದಾಗಿದೆ. ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಹೊಣೆಯನ್ನು ಸಮಾಜವಾದಿ ನಾಯಕ ಮುಲಾಯಂ ಸಿಂಗ್ ಅವರಿಗೆ ವಹಿಸಲಾಗಿದೆ. ಆರು ಪಕ್ಷಗಳು ಅಧಿಕೃತವಾಗಿ ವಿಲೀನಕೊಂಡು ಹೊಸ ಜನತಾ ಪರಿವಾರ ನಿರ್ಮಾಣವಾಗಿದೆ.
ಲೋಕಸಭೆ ಚುನಾವಣೆ, ಇತ್ತೀಚಿನ ವಿಧಾನಸಭೆ ಚುನಾವಣೆಗಳಲ್ಲಿ ಜನತಾ ಪರಿವಾರದೊಡನೆ ಗುರುತಿಸಿಕೊಂಡಿರುವ ಪ್ರಾದೇಶಿಕ ಪಕ್ಷಗಳು ಉತ್ತಮ ಫಲಿತಾಂಶ ಹೊರ ಹಾಕಿಲ್ಲ. ಹೀಗಾಗಿ ಪ್ರಾದೇಶಿಕ ಪಕ್ಷಗಳನ್ನು ವಿಲೀನಗೊಳಿಸಿ ಮತ್ತೊಮ್ಮೆ ತೃತೀಯರಂಗ ಸ್ಥಾಪನೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. [ಜನತಾ ಪರಿವಾರ ಉದಯ]
ರಾಷ್ಟ್ರೀಯ ಜನತಾ ದಳ, ಜನತಾ ದಳ ಸೆಕ್ಯುಲರ್, ಸಮಾಜವಾದಿ ಜನತಾ ಪಕ್ಷ, ಭಾರತೀಯ ರಾಷ್ಟ್ರೀಯ ಲೋಕದಳ, ಸಮಾಜವಾದಿ ಪಕ್ಷ, ಜನತಾದಳ ಯುನೈಟೆಡ್ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಲಾಲೂ ಪ್ರಸಾದ್ ಯಾದವ್, ನಿತೀಶ್ ಕುಮಾರ್, ಶರದ್ ಯಾದವ್,ಸಮಾಜವಾದಿ ಜನತಾ ಪಕ್ಷದ ಕಮಲ್ ಮೊರಾರ್ಕಾ ಐಎನ್ಎಲ್ಡಿ ಮುಖಂಡ ದುಷ್ಯಂತ ಚೌಟಾಲಾ ಸಭೆಯಲ್ಲಿ ಉಪಸ್ಥಿತರಿದ್ದರು.

ಮುಲಾಯಂ ಸಿಂಗ್ ಇಸ್ ಲೀಡರ್: ನೂತನ ಪರಿವಾರದ ಮುಂದಾಳತ್ವವನ್ನು ಮುಲಾಯಂ ಸಿಂಗ್ ಯಾದವ್ ವಹಿಸಿಕೊಳ್ಳಲಿದ್ದಾರೆ. ಪಕ್ಷದ ಸಂಸದೀಯ ಸಮಿತಿ ಮುಖ್ಯಸ್ಥರಾಗಿ ಸಂಸತ್ತಿನ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.
ಹೊಸ ಪರಿವಾರಕ್ಕೆ ಏನು ಹೆಸರು?: ಜನತಾ ಪರಿವಾರಕ್ಕೆ ಸಮಾಜವಾದಿ ಜನತಾ ಪಾರ್ಟಿ ಅಥವಾ ಸಮಾಜವಾದಿ ಜನತಾ ದಳ ಎಂಬ ಹೆಸರಿಡುವ ಸಾಧ್ಯತೆ ಇದೆ. ಅಥವಾ ಜನತಾ ಪರಿವಾರ ಎಂಬ ಹೆಸರನ್ನೇ ಮುಂದುವರೆಸುವ ನಿರೀಕ್ಷೆಯೂ ಇದೆ.
ಹೊಸ ಪಕ್ಷಕ್ಕೆ ಸೈಕಲ್ ಚಿನ್ಹೆ?: ಹೊಸ ಪಕ್ಷಕ್ಕೆ ಸಮಾಜವಾದಿ ಪಕ್ಷದ ಚಿನ್ಹೆಯಾದ ಸೈಕಲ್ ಅನ್ನೇ ಬಳಸುವ ಚಿಂತಿಸಲಾಗಿದೆ.ಸಂಸತ್ತಿನಲ್ಲಿ ಎಸ್ ಪಿ 6 ಜನ ಸದಸ್ಯರನ್ನು ಹೊಂದಿದೆ.ಆರ್ ಜೆ ಡಿ ನಾಲ್ಕು ಜೆಡಿಯು,ಜೆಡಿಎಸ್ ಹಾಗೂ ಐಎನ್ ಎಲ್ ಡಿ ತಲಾ 2 ಸಂಸದರನ್ನು ಹೊಂದಿದೆ. ಲೋಕಸಭೆಯಲ್ಲಿ ಜನತಾ ಪರಿವಾರದ ಬಲ 15.
ರಾಜ್ಯಸಭೆಯಲ್ಲಿ ಎಸ್ ಪಿ 15, ಜೆಡಿಯು 12, ಐಎನ್ ಎಲ್ ಡಿ, ಜೆಡಿಎಸ್ ಹಾಗೂ ಆರ್ ಜೆಡಿ ತಲಾ ಒಬ್ಬ ಸದಸ್ಯರನ್ನು ಹೊಂದಿದೆ. ಮೇಲ್ಮನೆಯಲ್ಲಿ ಜನತಾ ಪರಿವಾರದ ಬಲ 30.
ಮುಂದಿನ ಗುರಿ: ಮೋದಿ ಸರ್ಕಾರದ ವಿರುದ್ಧ ಜನ ಜಾಗೃತಿ, ಪ್ರತಿಭಟನೆ, ಹೋರಾಟ. ಬಿಹಾರದ ಚುನಾವಣೆ(ವರ್ಷಾಂತ್ಯಕ್ಕೆ), ಉತ್ತರ ಪ್ರದೇಶದಲ್ಲಿ ಚುನಾವಣೆ(2017).
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications