"ಜನತಾ ಪರಿವಾರ ಉದಯ ಮೋದಿ ಸರ್ಕಾರ ಪತನಕ್ಕಲ್ಲ"
ಬೆಂಗಳೂರು, ಏ.17: ಹಲವು ದಶಕಗಳ ನಂತರ ಜನತಾ ಪರಿವಾರ ಒಂದಾಗಿ ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿರುವುದು ದೇಶದ ರಾಜಕೀಯದಲ್ಲಿ ಒಳ್ಳೆ ಬೆಳವಣಿಗೆಯಾಗಿದೆ. ಭಾನುವಾರ ಪಕ್ಷಗಳ ವಿಲೀನದ ಬಗ್ಗೆ ಅಂತಿಮ ಘೋಷಣೆಯಾಗಲಿದೆ. ಜನತಾ ಪರಿವಾರ ಉದಯವಾಗುತ್ತಿರುವುದು ನರೇಂದ್ರ ಮೋದಿ ಸರ್ಕಾರದ ಪತನ ಮಾಡಲಿಕ್ಕೆ ಅಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಹುಳುಕುಗಳನ್ನು ಜನರ ಮುಂದಿಡಲು ಜನತಾ ಪರಿವಾರ ಮುಂದಾಗಲಿದೆ. ಸಂಸತ್ತಿನ ಒಳಗೂ ಹೊರಗೂ ಈ ಬಗ್ಗೆ ಹೋರಾಟ ಸದಾ ಜಾರಿಯಲ್ಲಿರುತ್ತದೆ.
ರೈತರು, ಶ್ರಮಿಕ ವರ್ಗ, ದಲಿತರ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಲಾಗುವುದು, ಅಪೌಷ್ಟಿಕತೆಯಿಂದ ಬಳಲುತ್ತಿರುವ ಜನರಿಗೆ ಸರಿಯಾದ ನೆರವು ಸಿಗುತ್ತಿಲ್ಲ. ಮೋದಿ ಅವರು ಅಧಿಕಾರಕ್ಕೆ ಬಂದಾಗ ನೀಡಿದ್ದ ಭರವಸೆಗಳು ಈಡೇರಿಲ್ಲ. ರೈತರ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಪ್ಪಿಸಲು ಸಾಧ್ಯವಾಗುತ್ತಿಲ್ಲ ಎಂಬ ದುಃಖ ನನ್ನನ್ನು ಕಾಡುತ್ತಿದೆ ಎಂದು ದೇವೇಗೌಡರು ವ್ಯಥೆ ಪಟ್ಟರು.

ಪಿಟಿಐ ಪ್ರತಿನಿಧಿಯೊಂದಿಗೆ ಮಾತನಾಡಿದ ದೇವೇಗೌಡರು,ಮೋದಿ ಸರ್ಕಾರವನ್ನು ಅಲ್ಲಾಡಿಸಲು ನಾವು ಯಾವುದೇ ರಣತಂತ್ರ ಹೂಡುವುದಿಲ್ಲ. ಸರ್ಕಾರವನ್ನು ಉಳಿಸುವುದು ಬೀಳಿಸುವುದು ಜನರಿಗೆ ಬಿಟ್ಟ ನಿರ್ಧಾರ. ಜನಪರ ಯೋಜನೆಗಳನ್ನು ಕೈಗೊಳ್ಳದ ಸರ್ಕಾರ ತಾನೇ ತಾನಾಗಿ ಕುಸಿಯುತ್ತದೆ. ಭೂ ಸ್ವಾದೀನ ಮಾಡುವ ಹೆಸರಿನಲ್ಲಿ ರೈತರ ಜಮೀನಿಗೆ ಕೈ ಹಾಕಿದರೆ ಮುಂದೆ ಕಷ್ಟ ಅನುಭವಿಸಬೇಕಾಗುತ್ತದೆ ಎಂದರು.
ಕಾಂಗ್ರೆಸ್ ಮೈತ್ರಿ ಸರ್ಕಾರ ಮುರಿದು ಬೀಳಲು ಹಗರಣಗಳು ಕಾರಣವಾಗಿದ್ದು ನಿಜ. ಹತ್ತು ಹಲವು ಪಕ್ಷಗಳು ಒಂದಾಗಿ ಒಟ್ಟಿಗೆ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂಬ ಮಾತು ನಿಜವಲ್ಲ. ಸಮರ್ಥ ನಾಯಕತ್ವವಿದ್ದರೆ ಸಮರ್ಥ ಆಡಳಿತ ಸಾಧ್ಯ. ನಮಗೆ ಮುಲಾಯಂ ಸಿಂಗ್ ಯಾದವ್ ಅವರ ಮೇಲೆ ನಂಬಿಕೆಯಿದೆ.
1989ರ ದಿನಗಳನ್ನು ಮತ್ತೆ ನೆನಪಿಸುವಂತೆ ಜನತಾ ಪರಿವಾರ ಮತ್ತೊಮ್ಮೆ ಪುಟಿದೇಳುವ ಭರವಸೆ ಇದೆ. ಜನರ ವಿಶ್ವಾಸ ಗಳಿಸುವುದು ಮುಖ್ಯ, ಪಕ್ಷದ ಚಿನ್ಹೆ, ಧ್ಯೇಯ, ಬಾವುಟ ಮುಂತಾದವುಗಳ ಬಗ್ಗೆ ಚರ್ಚೆ ಆರಂಭವಾಗಿದ್ದು, ಭಾನುವಾರ ಒಂದು ಹಂತದ ಚರ್ಚೆ ನಡೆಯಲಿದೆ ಎಂದು ಹೇಳಿದರು. (ಪಿಟಿಐ)
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications