ಜಾಮೀನು ಬೇಕಾ? ಕೇರಳ ಪ್ರವಾಹ ನಿಧಿಗೆ ಹಣ ಕೊಡಿ: ಜಾರ್ಖಂಡ್ ಹೈ ಕೋರ್ಟ್
ರಾಂಚಿ (ಜಾರ್ಖಂಡ್), ಆಗಸ್ಟ್ 28: ಜಾರ್ಖಂಡ್ ನಲ್ಲಿ ಮೂವರು ಆರೋಪಿಗಳ ನಿರೀಕ್ಷಣಾ ಜಾಮೀನಿಗೆ ಹೈ ಕೋರ್ಟ್ ಮಂಜೂರು ಮಾಡಿದ ರೀತಿ ಆಸಕ್ತಿಕರವಾಗಿದೆ. ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ಪಾವತಿಸಬೇಕು ಎಂಬ ನಿಬಂಧನೆ ಪೂರೈಸಿದ ಮೂವರಿಗೆ ಹೈ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಸಿಕ್ಕಿದೆ.
ಕೇರಳದಲ್ಲಿನ ಸದ್ಯದ ಸನ್ನಿವೇಶಕ್ಕೆ ಸಹಾಯದ ಅಗತ್ಯ ಇರುವುದನ್ನು ನ್ಯಾಯಮೂರ್ತಿ ಎ.ಬಿ.ಸಿಂಗ್ ಅವರ ಪೀಠವು ಗಮನಿಸಿದೆ. ವಂಚನೆ ಹಾಗೂ ಫೋರ್ಜರಿ ಪ್ರಕರಣದಲ್ಲಿ ಆರೋಪಿಯಾಗಿರುವ ಉತ್ಪಲ್ ರೇ ಎಂಬಾತ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿಕೊಂಡಿದ್ದು, ಪ್ರವಾಹ ಪರಿಹಾರ ನಿಧಿಗೆ ಏಳು ಸಾವಿರ ರುಪಾಯಿ ಪಾವತಿಸಿದರೆ ಜಾಮೀನು ನೀಡಲಾಗುವುದು ಎಂದು ಪ್ರಕರಣವು ವಿಚಾರಣೆಗೆ ಬಂದಾಗ ತಿಳಿಸಲಾಗಿದೆ.
ವಂಚನೆ ಪ್ರಕರಣದ ಆರೋಪಿಗಳಾದ ಧಾನೇಶ್ವರ್ ಮಂಡಲ್ ಮತ್ತು ಶಂಭು ಮಂಡಲ್ ಕೂಡ ಇದೇ ರೀತಿಯಲ್ಲಿ ಐದು ಸಾವಿರ ರುಪಾಯಿಯನ್ನು ಪರಿಹಾರ ನಿಧಿಗೆ ಪಾವತಿಸುವಂತೆ ಸೂಚಿಸಲಾಗಿದೆ. ಹಣವನ್ನು ಪರಿಹಾರ ನಿಧಿಗೇ ಪಾವತಿಸಿರುವುದಕ್ಕೆ ಸಾಕ್ಷ್ಯವನ್ನು ಕೋರ್ಟ್ ಗೆ ಸಲ್ಲಿಸಬೇಕು ಎಂದು ಹೇಳಿತ್ತು.

ಮಧ್ಯಪ್ರದೇಶ ಹಾಗೂ ಕರ್ನಾಟಕ ಹೈ ಕೋರ್ಟ್ ಸಹ ಇಂಥದ್ದೇ ಸೂಚನೆ ನೀಡಿವೆ. ಕೇರಳ ಪ್ರವಾಹ ಪರಿಹಾರ ನಿಧಿಗೆ ಹಣ ಪಾವತಿಸಲು ತಿಳಿಸಲಾಗಿದೆ ಎಂದು ಜಾರ್ಖಂಡ್ ಹೈ ಕೋರ್ಟ್ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಹೇಮಂತ್ ಕುಮಾರ್ ಸಿಕರ್ವರ್ ತಿಳಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications