ಜಸ್ವಂತ್ ಸಿಂಗ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ
ಜೋಧ್ ಪುರ್, ಮಾ.24: ರಾಜಸ್ಥಾನದ ಬಾರ್ಮರ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ಹಿರಿಯ ಬಿಜೆಪಿ ಧುರೀಣ ಜಸ್ವಂತ್ ಸಿಂಗ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ನಾನು ಇನ್ನೂ ಬಿಜೆಪಿಗೆ ರಾಜೀನಾಮೆ ನೀಡಿಲ್ಲ. ಈ ಕುರಿತು ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ತಕ್ಷಣದ ಪ್ರತಿಕ್ರಿಯೆ ನೀಡಿದ್ದಾರೆ.
ಜಸ್ವಂತ್ ಸಿಂಗ್ ಹಾಲಿ ಡಾರ್ಜಿಲಿಂಗ್ ಕ್ಷೇತ್ರದ ಸಂಸದ, ಬಾರ್ಮರ್ ಕ್ಷೇತ್ರದಿಂದ ಸ್ಪರ್ಧಿಸುವ ಅವರ ಇಚ್ಛೆಗೆ ಬಿಜೆಪಿ ಪಕ್ಷ ಟಿಕೆಟ್ ನಿರಾಕರಿಸಿತ್ತು. ಹಿರಿಯ ನಾಯಕರನ್ನು ಕಡೆಗಣಿಸಿರುವ ಬಿಜೆಪಿ ಇತ್ತೀಚೆಗಷ್ಟೇ ಕಾಂಗ್ರೆಸ್ ನಿಂದ ಬಂದಿದ್ದ ಸೋನಾರಾಂ ಚೌಧರಿಗೆ ಬಿಜೆಪಿ ಟಿಕೆಟ್ ಲಭಿಸಿತ್ತು. ಜಸ್ವಂತ್ ಸಿಂಗ್ ಅವರು ಈಗ ಬಿಜೆಪಿ ಅಭ್ಯರ್ಥಿ ಕರ್ನಲ್(ನಿವೃತ್ತ) ಸೋನಾ ರಾಮ್ ಚೌಧರಿ ವಿರುದ್ಧ ಸೆಣಸಲಿದ್ದಾರೆ.

ಟಿಕೆಟ್ ಹಂಚಿಕೆ ಗೊಂದಲ ಪರಿಹರಿಸುವಂತೆ ಬಿಜೆಪಿಗೆ 48 ಗಂಟೆಗಳ ಗಡುವು ನೀಡಿದ್ದ ಜಸ್ವಂತ್ ಸಿಂಗ್ ಅವರು, ಬಾರ್ಮರ್ ನಲ್ಲಿ ನನ್ನ ಬೆಂಬಲಿಗರು ಮತ್ತು ಇತರರೊಂದಿಗೆ ಸಮಾಲೋಚನೆ ನಡೆಸಿ ಒಂದು ನಿರ್ಧಾರಕ್ಕೆ ಬರುತ್ತೇನೆ. ಅನಂತರ ನಿಮ್ಮೆಂದಿಗೆ ಈ ವಿಚಾರದಲ್ಲಿ ಮಾತನಾಡುತ್ತೇನೆ ಎಂದು ಜಸ್ವಂತ್ ಹೇಳಿದರು. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಹಿರಿಯ ನಾಯಕ ಜಸ್ವಂತ್ ಅವರು ಸ್ವಲ್ಪ ಅಡ್ಜೆಸ್ಟ್ ಮಾಡಿಕೊಳ್ಳಬೇಕು ಎಂದು ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ನೀಡಿದ್ದ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದ ಜಸ್ವಂತ್ ಸಿಂಗ್, ಅಡ್ಜೆಸ್ಟ್ ಮಾಡಿಕೊಳ್ಳಲು ನಾನೇನು ಪೀಠೋಪಕರಣವಲ್ಲ. ಅಡ್ಜೆಸ್ಟ್ ಮನಸ್ಥಿತಿ ಎಲ್ಲವನ್ನು ಹೇಳುತ್ತದೆ. ಇದು ತೀವ್ರ ಆಘಾತಕಾರಿ ಹೇಳಿಕೆ ಎಂದಿದ್ದರು.
ಜನರ ಅಭಿಮತ ಸಂಗ್ರಹಿಸಿ ನಾನು ಕಣಕ್ಕಿಳಿಯುತ್ತಿದ್ದೇನೆ. ನನ್ನ ಗೆಲುವು ಸೋಲು ಜನರ ಕೈಲಿದೆ. ತತ್ತ್ವಸಿದ್ಧಾಂತಕ್ಕೆ ಬದ್ಧನಾಗಿ ನಾನು ಕಣದಲ್ಲಿದ್ದೇನೆ. ಜನರು ನನ್ನ ಕೈಹಿಡಿಯಲಿದ್ದಾರೆ ಎಂದು ಜಸ್ವಂತ್ ಸಿಂಗ್ ಹೇಳಿದ್ದಾರೆ. ನಾಮಪತ್ರ ಸಲ್ಲಿಕೆ ಚಿತ್ರ ಇಲ್ಲಿದೆ ನೋಡಿ...
Will be contesting elections on basis of my principles:Jaswant Singh to TIMES NOW after filing nomination from Barmer pic.twitter.com/AQajVxXmW6
— TIMES NOW (@timesnow) March 24, 2014 -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications