ರಾಜಸ್ಥಾನದಲ್ಲಿ ಬಿಜೆಪಿಗೆ ಹಿನ್ನಡೆ, ಪಕ್ಷ ತೊರೆದ ಜಸ್ವಂತ್ ಸಿಂಗ್ ಪುತ್ರ
ಜೈಪುರ, ಸೆಪ್ಟೆಂಬರ್ 23: ವಿಧಾನಸಭೆ ಚುನಾವಣೆಗೂ ಮುನ್ನ ರಾಜಸ್ಥಾನದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯುಂಟಾಗಿದೆ. ಬಿಜೆಪಿಯ ಸಂಸ್ಥಾಪಕ ಸದಸ್ಯ, ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರ ಪುತ್ರ, ಶಾಸಕ ಮಾನವೇಂದ್ರ ಸಿಂಗ್ ಅವರು ಬಿಜೆಪಿ ತೊರೆದಿದ್ದಾರೆ.
ರಾಜಸ್ಥಾನದ ಬರ್ಮೆರ್ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಪಾಚ್ಪಾದ್ರ ಎಂಬಲ್ಲಿ ಶನಿವಾರದಂದು ನಡೆದ ಸ್ವಾಭಿಮಾನಿ ಸಮಾವೇಶದ ನಂತರ ಪತ್ರಿಕಾಗೋಷ್ಠಿ ನಡೆಸಿದ ಮಾನವೇಂದ್ರ,'ನಾನು ಬಿಜೆಪಿ ಸೇರಿದ್ದು ನನ್ನ ಅತಿ ದೊಡ್ಡ ಪ್ರಮಾದ, ನಾನು ಪಕ್ಷ ತೊರೆಯುತ್ತಿದ್ದೇನೆ ಎಂದು ಘೋಷಿಸಿದರು.

ಶಿಯೋ ಕ್ಷೇತ್ರದ ಶಾಸಕರೂ ಆಗಿರುವ ಮಾನವೇಂದ್ರ ತಮ್ಮ ಮುಂದಿನ ನಡೆಯ ಕುರಿತು ಸ್ಪಷ್ಟನೆ ನೀಡಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಹೀಗಾಗಿ, ಜಸ್ವಂತ್ ಸಿಂಗ್ ಪ್ರತಿನಿಧಿಸುತ್ತಿದ್ದ ಬರ್ಮರ್- ಜೈಸ್ಮಲೇರ್ ಲೋಕಸಭಾ ಕ್ಷೇತ್ರದಿಂದ ಅವರ ಪುತ್ರ ಕಣಕ್ಕಿಳಿಯಲಿದ್ದಾರೆ.
ಕಾಂಗ್ರೆಸ್ ಸೇರುವ ಇರಾದೆ ಇಲ್ಲ: ನನ್ನನ್ನು ಯಾವೊಬ್ಬ ಕಾಂಗ್ರೆಸ್ ನಾಯಕರು ಸಂಪರ್ಕಿಲ್ಲ. ನಾನು ಕಾಂಗ್ರೆಸ್ ಸೇರುವ ಯಾವುದೇ ಯೋಜನೆ ಹಾಕಿಕೊಂಡಿಲ್ಲ ಎಂದು ಹೇಳಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಂತೂ ಖಚಿತ. ಈ ಬಗ್ಗೆ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿ, ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಸ್ವಾಭಿಮಾನಿ ಯಾತ್ರೆ: ಇದೆಲ್ಲವೂ ಶುರುವಾಗಿದ್ದು 2014ರಲ್ಲಿ ಎನ್ನಬಹುದು. ಮೋದಿ ನೇತೃತ್ವದ ಬಿಜೆಪಿ ಚುನಾವಣೆ ಎದುರಿಸುವಾಗ ಜಸ್ವಂತ್ ಸಿಂಗ್ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಈ ಬಗ್ಗೆ ಮೋದಿ ಅವರು ನನಗೆ ಕರೆ ಮಾಡಿ, ಅಂದು ಟಿಕೆಟ್ ಆಯ್ಕೆ ಬಗ್ಗೆ ನಡೆದ ಸಭೆಯಲ್ಲಿ ತಾವೂ ಪಾಲ್ಗೊಂಡಿರಲಿಲ್ಲ. ಹೀಗಾಗಿ ನನಗೇನು ಗೊತ್ತಿಲ್ಲ ಎಂದಿದ್ದರು.
ನನ್ನ ತಂದೆ ಜಸ್ವಂತ್ಸಿಂಗ್ವಿರುದ್ಧದ ನಡೆದ ಪಿತೂರಿಯಲ್ಲಿ ಜೈಪುರದ ಒಬ್ಬರು ಮತ್ತು ದೆಹಲಿಯ ಇಬ್ಬರ ಕೈವಾಡವಿದೆ. ಅವರ ಹೆಸರುಗಳನ್ನು ನಾನು ಬಹಿರಂಗಪಡಿಸಲಾರೆ ಎಂದು ಮಾನ್ವೇಂದ್ರ ಸಿಂಗ್ ಹೇಳಿದ್ದಾರೆ.
I would like to thank my supporters. I will do whatever they ask me to do. Their decision is my decision but I will ask everyone: Manvendra Singh, MLA and senior BJP leader Jaswant Singh's son who quit BJP today, when asked if he will now join Congress party #Rajasthan pic.twitter.com/lQhoAzi7Ix
— ANI (@ANI) September 22, 2018
ಸಿಎಂ ವಸುಂಧರಾ ರಾಜೇ ಅವರ ಗೌರವ್ ಯಾತ್ರಾ ಸಮಾರಂಭದಲ್ಲೂ ಮಾನ್ವೇಂದ್ರ ಅವರು ಪಾಲ್ಗೊಂಡಿರಲಿಲ್ಲ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications