ಬುರ್ಖಾ ಬ್ಯಾನ್ ಆಗಲಿ, ಜೊತೆಗೆ ಗೂಂಗಟ್ ಕೂಡ: ಜಾವೆದ್ ಅಖ್ತರ್
ನವದೆಹಲಿ, ಮೇ 03: ಭೀಕರ ಭಯೋತ್ಪಾದಕ ದಾಳಿಗೆ ತುತ್ತಾದ ಪಕ್ಕದ ಶ್ರೀಲಂಕಾದಲ್ಲಿ ಭದ್ರತಾ ಕಾರಣದಿಂದ ಬುರ್ಖಾ ಸೇರಿದಂತೆ ಮುಖ ಮುಚ್ಚುವ ಉಡುಪುಗಳಿಗೆ ನಿಷೇಧ ಹೇರಿದ ಬೆನ್ನಲ್ಲೆ ಭಾರತದಲ್ಲೂ ಈ ಬಗ್ಗೆ ಚರ್ಚೆ ಗರಿಗೆದರಿದೆ.
ಈ ಬಗ್ಗೆ ಹಲವರು ಪರ ವಿರೋಧ ದನಿಗಳನ್ನು ಎತ್ತಿದ್ದಾರೆ, ದೇಶದ ಖ್ಯಾತ ಸಾಹಿತಿ, ಗೀತರಚನೆಕಾರ ಮತ್ತು ಮಾಜಿ ರಾಜ್ಯಸಭಾ ಸದಸ್ಯ ಜಾವೇದ್ ಅಖ್ತರ್ ಅವರು ಬುರ್ಖಾ ನಿಷೇಧದ ಬಗ್ಗೆ ಮಾತನಾಡಿರುವ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ.
ಬುರ್ಖಾ ನಿಷೇಧದ ಬಗ್ಗೆ ಮಾತನಾಡಿರುವ ಅವರು, ಬುರ್ಖಾ ನಿಷೇಧ ಮಾಡುವುದಾದರೆ ಉತ್ತರ ಭಾರತದ ಹಲವೆಡೆ ಹಿಂದೂ ಮಹಿಳೆಯರು ಮುಖದ ಮೇಲೆ ಸೆರಗು ಹಾಕಿಕೊಳ್ಳುವ 'ಗೂಂಗಟ್' ಅನ್ನೂ ನಿಷೇಧಿಸಲಿ ಎಂದಿದ್ದಾರೆ. ಜಾವೇದ್ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಹೊಸ ಚರ್ಚೆಯನ್ನೇ ಹುಟ್ಟು ಹಾಕಿದೆ.
ಬುರ್ಖಾ ನಿಷೇಧದ ವಿಷಯವು ಮಹಿಳಾ ಹಕ್ಕುಗಳ ಚರ್ಚೆಯ ವಿಷಯವಾಗುವ ಬದಲಿಗೆ, ಹಿಂದೂ vs ಮುಸ್ಲಿಂ ಚರ್ಚೆಗೆ ದಾರಿ ಮಾಡಿಕೊಟ್ಟಿದೆ, ಈ ಚರ್ಚೆಗೆ ಒಂದು ಪಂಗಡದವರು ಜಾವೇದ್ ಅಖ್ತರ್ ಅವರ ಮೇಲಿನ ಹೇಳಿಕೆಯನ್ನು ಮತ್ತೊಂದು ಪಂಗಡದ ವಾದಕ್ಕೆ ಗುರಾಣಿಯಾಗಿ ಬಳಸುತ್ತಿದ್ದಾರೆ.

ಸ್ಪಷ್ಟೀಕರಣ ನೀಡಿರುವ ಜಾವೇದ್ ಅಖ್ತರ್
ಆದರೆ ತಮ್ಮ ಹೇಳಿಕೆ ಬಗ್ಗೆ ಮತ್ತೆ ಸ್ಪಷ್ಟೀಕರಣ ನೀಡಿರುವ ಜಾವೇದ್ ಅಖ್ತರ್ ಅವರು, 'ನನ್ನ ಹೇಳಿಕೆಯನ್ನು ಬೇರೆಯದ್ದೇ ರೀತಿಯಲ್ಲಿ ಬಿಂಬಿಸಲಾಗುತ್ತಿದೆ, ಶ್ರೀಲಂಕಾದಲ್ಲಿ ಭದ್ರತಾ ಕಾರಣಗಳಿಗಾಗಿ ಬುರ್ಖಾಗೆ ನಿಷೇಧ ಹೇರಲಾಗಿದೆ, ಆದರೆ ನಿಷೇಧ ಹೇರಬೇಕಾಗಿರುವುದು ಮಹಿಳಾ ಸಬಲೀಕರಣಕ್ಕಾಗಿ ಎಂದು ಅವರು ಹೇಳಿದ್ದಾರೆ.

ಬುರ್ಖಾ, ಗೂಂಗಟ್ ಎರಡನ್ನೂ ನಿಷೇಧಿಸಿ
ಮಹಿಳೆಯರು ಮುಖ ಮುಚ್ಚಿಕೊಳ್ಳುವುದು ನಿಲ್ಲಬೇಕಿದೆ, ಅದು ಬುರ್ಖಾ ಆಗಿರಲಿ ಅಥವಾ ಗೂಂಗಟ್ ಆಗಿರಲಿ ಎಂದು ಜಾವೇದ್ ಅವರು ಟ್ವೀಟ್ ಮಾಡುವ ಮೂಲಕ ತಮ್ಮ ನಿಲವು ಸ್ಪಷ್ಟಪಡಿಸಿದ್ದಾರೆ.

ಮುಸ್ಲಿಂ ಸಮುದಾಯದ ಹಲವರ ವಿರೋಧ
ಬುರ್ಖಾ ನಿಷೇಧಕ್ಕೆ ಮುಸ್ಲಿಂ ಮೂಲಭೂತವಾದಿಗಳು ಈಗಾಗಲೇ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಿವಸೇನಾ ಪಕ್ಷವು ಭಾರತದಲ್ಲಿ ಬುರ್ಖಾ ನಿಷೇಧ ಮಾಡಬೇಕೆಂದು ಬಿಜೆಪಿಯನ್ನು ಒತ್ತಾಯಿಸಿದೆ.

ಹಿಂದೂ vs ಮುಸ್ಲಿಂ ಆಗುತ್ತಿರುವ ಚರ್ಚೆ
ಬುರ್ಖಾ ಅಥವಾ ಇನ್ನಾವುದೇ ಮಹಿಳೆಯ ಮುಖ ಮುಚ್ಚುವಂತಹ ಆಚರಣೆ ಅಥವಾ ಪದ್ಧತಿಯ ಹಿನ್ನೆಲೆಯಲ್ಲಿ ಮಹಿಳಾ ಸ್ವಾತಂತ್ರ್ಯ, ಆಕೆಯ ಹಕ್ಕಿನ ಚರ್ಚೆ ಆಗಬೇಕಾದ ವಿಷಯವು ನಿಧಾನವಾಗಿ ಮುಸ್ಲಿಂ vs ಹಿಂದೂ ಎಂದು ಸಾಮಾಜಿಕ ಜಾಲತಾಣದಲ್ಲಿ ಬದಲಾವಣೆ ಆಗುತ್ತಿರುವುದು ಆತಂಕಕಾರಿ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications