ಸತ್ಯ ಹೇಳಿದ್ದ ಯೋಧ ಪ್ಲಂಬರ್ ಆಗಿ ನಿಯೋಜನೆ!
ನವದೆಹಲಿ, ಜ. 11: ಗಡಿ ಕಾಯುವ ಸೈನಿಕರಿಗೆ ಕಳಪೆ ಆಹಾರ ಪೂರೈಸುತ್ತಿರುವ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಕರಾಳ ಮುಖ ಅನಾವರಣಗೊಳಿಸಿದ್ದ ಯೋಧ ತೇಜ್ ಬಹಾದೂರ್ ಯಾದವ್ ಅವರನ್ನು ಅವರು ಕಾರ್ಯ ನಿರ್ವಹಿಸುತ್ತಿದ್ದ ಜಮ್ಮು ಕಾಶ್ಮೀರ ಗಡಿ ಭಾಗದಿಂದ ಎತ್ತಂಗಡಿ ಮಾಡಿ ಅವರನ್ನು ಕೊಳಾಯಿ ರಿಪೇರಿ ಮಾಡುವ ಕೆಲಸಕ್ಕೆ ದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸೋಮವಾರವಷ್ಟೇ ಗಡಿಯಲ್ಲಿ ಸೈನಿಕರು ಪಡುತ್ತಿರುವ ಯಾತನೆಯನ್ನು ವೀಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಹಾಕಿದ್ದ ಯಾದವ್, ಗಡಿಯಲ್ಲಿ ಕಾವಲು ಕಾಯುವ ಸೈನಿಕರು, ಕಳಪೆ ಆಹಾರ ತಿನ್ನುವ ಹಾಗೂ ಆಹಾರ ಕೊರತೆ ಎದುರಿಸುವ ಪ್ರಸಂಗಗಳು ಸಾಮಾನ್ಯವಾಗಿದ್ದು, ಇದಕ್ಕೆ ಬಿಎಸ್ ಎಫ್ ಅಧಿಕಾರಿಗಳೇ ನೇರ ಕಾರಣವೆಂದು ಆರೋಪಿಸಿದ್ದರು.

ಸರ್ಕಾರದಿಂದ ಸರಬರಾಜಾಗುವ ದಿನಸಿ ಮತ್ತಿತರ ಉಪಯುಕ್ತ ಪದಾರ್ಥಗಳನ್ನು ಬಿಎಸ್ಎಫ್ ಅಧಿಕಾರಿಗಳು ಕ್ಯಾಂಪ್ ನ ಹೊರಗಡೆ ಜನ ಸಾಮಾನ್ಯರಿಗೆ ಮಾರಿಕೊಳ್ಳುತ್ತಿದ್ದಾರೆಂದು ಆರೋಪಿಸಿದ್ದರು. ಅಲ್ಲದೆ, ಇದರ ಸತ್ಯಾಸತ್ಯತೆ ಬಯಲಾಗಲು ಕೇಂದ್ರ ಸರ್ಕಾರದಿಂದ ಸ್ವತಂತ್ರ್ಯ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದರು.
ಆದರೆ, ಬಿಎಸ್ಎಫ್ ಯಾದವ್ ವಿರುದ್ಧವೇ ಹರಿಹಾಯ್ದಿತ್ತು. ಆತನೊಬ್ಬ ಮದ್ಯವ್ಯಸನಿ, ಅವಿಧೇಯ. ತನ್ನ ಹತಾಶ ಮನೋಭಾವನೆಯಿಂದಾಗಿ ಆತ ಹೀಗೆ ಆರೋಪಿಸಿದ್ದಾನೆಂದು ಹೇಳಿತ್ತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications