ಜಯಾ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಡಿಎಂಕೆ
ನವದೆಹಲಿ, ಜುಲೈ 06 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಯಲಲಿತಾ ಅವರನ್ನು ಖುಲಾಸೆಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಡಿಎಂಕೆ ಪಕ್ಷ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
ಸೋಮವಾರ ಡಿಎಂಕೆ ಸುಪ್ರೀಂಕೋರ್ಟ್ಗೆ ಈ ಮೇಲ್ಮನವಿಯನ್ನು ಸಲ್ಲಿಕೆ ಮಾಡಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕ ಸರ್ಕಾರವೂ ಮೇಲ್ಮನವಿಯನ್ನು ಸಲ್ಲಿಸಿದ್ದು, ಎರಡೂ ಅರ್ಜಿಗಳನ್ನು ಕೋರ್ಟ್ ಒಟ್ಟಿಗೆ ವಿಚಾರಣೆ ನಡೆಸಲಿದೆ. [ಜಯಾ ಅಕ್ರಮ ಆಸ್ತಿ ಕೇಸ್, ಮೇಲ್ಮನವಿ ಸಲ್ಲಿಸಿದ ಕರ್ನಾಟಕ]

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಮತ್ತು ಇತರ ಮೂವರನ್ನು ಖುಲಾಸೆಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿರುವ ಡಿಎಂಕೆ, ಜಯಲಲಿತಾ ಅವರಿಗೆ ವಿಶೇಷ ಕೋರ್ಟ್ ನೀಡಿದ್ದ 4 ವರ್ಷದ ಜೈಲು ಶಿಕ್ಷೆ ತೀರ್ಪನ್ನು ಜಾರಿಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದೆ. [ಜಯಲಲಿತಾ ವಿರುದ್ಧ ಮೇಲ್ಮನವಿ ಸಲ್ಲಿಸಲು 7 ಕಾರಣಗಳು!]
ಪ್ರಕರಣದಲ್ಲಿ ತೀರ್ಪು ನೀಡುವಾಗ ವಿಶೇಷ ನ್ಯಾಯಾಲಯ ಹೇಳಿದ್ದ ಹಲವು ಅಂಶಗಳನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಪರಿಗಣಿಸಿಲ್ಲ. ತೀರ್ಪು ನೀಡುವಾಗ ಹೈಕೋರ್ಟ್ ಹಲವು ಗಣಿತದ ತಪ್ಪುಗಳನ್ನು ಮಾಡಿದ್ದು, ಇದರಿಂದ ಜಯಲಲಿತಾ ಅವರು ಖುಲಾಸೆಗೊಂಡಿದ್ದಾರೆ ಎಂದು ಅರ್ಜಿಯಲ್ಲಿ ಹೇಳಿದೆ.
ಒಟ್ಟಿಗೆ ಎರಡೂ ಅರ್ಜಿಗಳ ವಿಚಾರಣೆ : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕ ಸರ್ಕಾರ ಮತ್ತು ಡಿಎಂಕೆ ಮೇಲ್ಮನವಿ ಸಲ್ಲಿಸಿವೆ. ಸುಪ್ರೀಂಕೋರ್ಟ್ ಎರಡೂ ಅರ್ಜಿಗಳನ್ನು ಮುಂದಿನವಾರ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.
ಕರ್ನಾಟಕ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಗೂ ದಿನಾಂಕವನ್ನು ನಿಗದಿಪಡಿಸಿಲ್ಲ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯ ವಿಚಾರಣೆಯನ್ನು ನಡೆಸುವ ಸಾಧ್ಯತೆ ಇದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications