ಜಯಲಲಿತಾ ಚೆಕ್ ಮೂಲಕ ನಡೆಸಿದ ಹಣ ವರ್ಗಾವಣೆ ಅಕ್ರಮ
ಬೆಂಗಳೂರು, ಮೇ 05 : ಜಯಲಲಿತಾ ಮತ್ತು ಇತರ ಆರೋಪಿಗಳು ಚೆಕ್ ಮೂಲಕ ನಡೆಸಿದ ಹಣ ವರ್ಗಾವಣೆ ಅಕ್ರಮವಾದದ್ದು ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ಗೆ ಹೇಳಿಕೆ ನೀಡಿದೆ. ಪ್ರಕರಣದ ವಿಚಾರಣೆಯನ್ನು ಕೋರ್ಟ್ ಮಂಗಳವಾರಕ್ಕೆ ಮುಂದೂಡಿದೆ.
ವಿಶೇಷ ಸರ್ಕಾರಿ ಅಭಿಯೋಜಕ ಬಿ.ವಿ.ಆಚಾರ್ಯ ಅವರು ಸುಪ್ರೀಂಕೋರ್ಟ್ಗೆ ಇಂದು ಲಿಖಿತ ದಾಖಲೆಗಳನ್ನು ಸಲ್ಲಿಸಿದ್ದು, ಹಣ ವರ್ಗಾವಣೆ ಅಕ್ರಮವಾದದ್ದು ಎಂದು ಹೇಳಿದರು. ಅಕ್ರಮ ಹಣವನ್ನು ಸಕ್ರಮವಾದದ್ದು ಎಂದು ತೋರಿಸಲು ಕಂಪನಿಗಳನ್ನು ಶಶಿಕಲಾ ನಟರಾಜನ್ ಹೆಸರಿಗೆ ವರ್ಗಾವಣೆ ಮಾಡಲಾಗಿದೆ ಎಂದು ವಾದ ಮಂಡಿಸಿದರು. [ಶಶಿಕಲಾಗೆ ಹಣ ಕೊಟ್ಟು ಸಾಲ ರೂಪದಲ್ಲಿ ವಾಪಸ್ ಪಡೆದಿದ್ದ ಜಯಾ!]

ಚೆಕ್ ಮೂಲಕ ನಡೆಸಿರುವ ಹಣದ ವರ್ಗಾವಣೆ ಅಕ್ರಮ ಎಂದು ವಿಶೇಷ ಕೋರ್ಟ್ಗೂ ದಾಖಲೆಗಳನ್ನು ಸಲ್ಲಿಕೆ ಮಾಡಲಾಗಿತ್ತು. ಈ ಬಗ್ಗೆ ಇನ್ನಷ್ಟು ದಾಖಲೆಗಳನ್ನು ಕೋರ್ಟ್ಗೆ ಸಲ್ಲಿಸಲು ಕಾಲಾವಕಾಶ ಬೇಕು ಎಂದು ಆಚಾರ್ಯ ಮನವಿ ಮಾಡಿದರು. ಕೋರ್ಟ್ ಮಂಗಳವಾರಕ್ಕೆ ವಿಚಾರಣೆ ಮುಂದೂಡಿತು. [ಪ್ರಭಾವ ಬಳಸಿ ಗಿರಗಿಟ್ಲೆಯಾಡಿಸುವ ಶಶಿಕಲಾ]
ಹಣ ವರ್ಗಾವಣೆ ಮಾಡಿರುವುದು ಕಾನೂನು ಬದ್ಧವಾಗಿದೆ ಎಂಬುದನ್ನು ಸಾಬೀತು ಮಾಡಲು ಜಯಲಲಿತಾ ಕಂಪನಿಗಳನ್ನು ಶಶಿಕಲಾ ಮತ್ತು ಇತರರ ಹೆಸರಿಗೆ ನೋಂದಣಿ ಮಾಡಿಸಿದ್ದಾರೆ. ಇಲ್ಲಿ ಕೂಡಾ ನಡೆದಿರುವುದು ಅಕ್ರಮ ವ್ಯವಹಾರ ಎಂದು ಕೋರ್ಟ್ಗೆ ತಿಳಿಸಿದರು. [ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಟೈಮ್ ಲೈನ್]
ಶಶಿಕಲಾ ಹೆಸರಿಗೆ ಹಣವನ್ನು ವರ್ಗಾವಣೆ ಮಾಡಿದ ಜಯಲಲಿತಾ ಅವರು ಪುನಃ ಅದನ್ನು ಸಾಲ ರೂಪದಲ್ಲಿ ಪಡೆದು, ಕಾನೂನು ಬದ್ಧವಾಗಿದೆ ಎಂದು ತೋರಿಸಿದ್ದಾರೆ ಎಂದು ಆಚಾರ್ಯ ಅವರು ಕೋರ್ಟ್ಗೆ ದಾಖಲೆಗಳನ್ನು ಸಲ್ಲಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications