Jayalalithaa death case : ಜಯಲಲಿತಾ ಸಾವು ಪ್ರಕರಣ: ಶಶಿಕಲಾ ವಿರುದ್ಧ ತನಿಖೆಗೆ ಆದೇಶ
ಚೆನ್ನೈ, ಅಕ್ಟೋಬರ್ 18: ತಮಿಳುನಾಡು ಮಾಜಿ ಸಿಎಂ ಮತ್ತು ಎಐಎಡಿಎಂಕೆ ನಾಯಕಿ ಜೆ ಜಯಲಲಿತಾ ಅವರ ಸಾವಿನ ಕುರಿತು ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಆರುಮುಗಸ್ವಾಮಿ ತನಿಖಾ ಆಯೋಗವು ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ತನ್ನ ತನಿಖಾ ವರದಿಯನ್ನು ಮಂಡಿಸಿದ್ದು, ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ ವಿರುದ್ಧ ತನಿಖೆಗೆ ಆದೇಶಿಸಿದೆ.
ವರದಿಗಳ ಪ್ರಕಾರ, ಜಯಲಲಿತಾ ಅವರ ಸಾವಿನ ತನಿಖೆ ಬಗ್ಗೆ ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ, ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್ ಮತ್ತು ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ವೈದ್ಯ ಶಿವಕುಮಾರ್ ಅವರನ್ನು ವಿಚಾರಣೆ ನಡೆಸಲು ಆದೇಶಿಸಲಾಗಿದೆ. ಇದಕ್ಕೂ ಮುನ್ನ ಸಮಿತಿ ವರದಿಯನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಸಲ್ಲಿಸಿತ್ತು. 2016ರ ಸೆಪ್ಟೆಂಬರ್ 22ರಿಂದ ದಿವಂಗತ ಮುಖ್ಯಮಂತ್ರಿ ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರು ನಿಧನ ಹೊಂದಿದ್ದರು. ಈ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರ ಸಮಿತಿಯನ್ನು ರಚಿಸಿತ್ತು.
ವಿಕೆ ಶಶಿಕಲಾ, ಶಿವಕುಮಾರ್, ಆಗಿನ ಆರೋಗ್ಯ ಸಚಿವ ಸಿ ವಿಜಯಭಾಸ್ಕರ್ ಮತ್ತು ಆಗಿನ ಮುಖ್ಯ ಕಾರ್ಯದರ್ಶಿ ರಾಮಮೋಹನ ರಾವ್ ಸೇರಿದಂತೆ (ಅವರ) ವಿರುದ್ಧ ಸರ್ಕಾರಿ ತನಿಖೆಗೆ ಆದೇಶಿಸುವ (ಆಯೋಗ) ವರದಿಯ ಕುರಿತು ಕಾನೂನು ತಜ್ಞರ ಅಭಿಪ್ರಾಯವನ್ನು ತೆಗೆದುಕೊಂಡು ಸೂಕ್ತ ಕ್ರಮ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ. ಅಲ್ಲದೆ ಅದನ್ನು ವರದಿಯೊಂದಿಗೆ ತಮಿಳುನಾಡು ವಿಧಾನಸಭೆಯ ಮುಂದೆ ಇರಿಸಿ ಎಂದು ಸಿಎಂ ಕಚೇರಿಯ ಈ ಹಿಂದೆ ಬಿಡುಗಡೆ ಮಾಡಲಾಗಿತ್ತು.

ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನ ತನಿಖೆಗೆ ನೇಮಕಗೊಂಡ ನಿವೃತ್ತ ನ್ಯಾಯಮೂರ್ತಿ ಆರುಮುಗಸ್ವಾಮಿ ಅವರ ಏಕಸದಸ್ಯ ಆಯೋಗವು ಐದು ವರ್ಷಗಳ ನಂತರ ಆಗಸ್ಟ್ 27ರಂದು ತನ್ನ ವರದಿಯನ್ನು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಸಲ್ಲಿಸಿತ್ತು. ಡಿಸೆಂಬರ್ 2016 ರಲ್ಲಿ ಜಯಲಲಿತಾ ಅವರ ನಿಧನದ ನಂತರ, ಅವರ ಸಾವಿನ ಕಾರಣ ಮತ್ತು ಅವರು ಆಸ್ಪತ್ರೆಗೆ ದಾಖಲಾದ ಸಮಯದಲ್ಲಿ ಅನುಸರಿಸಿದ ವೈದ್ಯಕೀಯ ವಿಧಾನಗಳ ಬಗ್ಗೆ ರಾಜಕೀಯ ಕದನ ಆರಂಭವಾಗಿತ್ತು. ಇದು ಹಲವು ಗಲಾಟೆ, ರಾಜಕೀಯ ದ್ವೇಷದ ಜಗಳಗಳಿಗೂ ಕಾರಣವಾಗಿತ್ತು.

ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನ ಕುರಿತು ತನಿಖೆ ನಡೆಸುವಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಒ.ಪನ್ನೀರ್ಸೆಲ್ವಂ ಮನವಿ ಮಾಡಿದ್ದರು. ಇದರಿಂದ ಇದು ಅರ್ಮುಗಸ್ವಾಮಿ ಆಯೋಗ ರಚನೆಗೆ ಕಾರಣವಾಯಿತು. 22 ಸೆಪ್ಟೆಂಬರ್ 2016 ರಂದು ದಿವಂಗತ ಮುಖ್ಯಮಂತ್ರಿ ಜೆ ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾದ ಸಂದರ್ಭಗಳು, ಆರೋಗ್ಯ ಸ್ಥಿತಿ ಮತ್ತು ಪರಿಸ್ಥಿತಿ ಮತ್ತು ನಂತರದ ಚಿಕಿತ್ಸೆಯು 5 ಡಿಸೆಂಬರ್ 2016 ರಂದು ಅವರ ನಿಧನದವರೆಗೆ ಒದಗಿಸಿದ ಸಂದರ್ಭಗಳ ಕುರಿತು ವಿಚಾರಣೆ ನಡೆಸಲು ಆಯೋಗವನ್ನು ನಿಯೋಜಿಸಲಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications