HD Kumaraswamy: ಸಿಎಂ ಸ್ಥಾನದಿಂದ ಕ್ಯಾಬಿನೆಟ್ ದರ್ಜೆಯ ಸ್ಥಾನಕ್ಕೆ ಎಚ್ ಡಿ ಕುಮಾರಸ್ವಾಮಿ
ನವದೆಹಲಿ, ಜೂನ್. 09: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಗೆ ಬಹುಮತ ಸಿಕ್ಕಿದ್ದು, ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸಲಿದ್ದಾರೆ. 63 ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಸಿಗಲಿದೆ. ಅದರಲ್ಲಿ ಕರ್ನಾಟಕದ ಐವರು ಮೋದಿ ಸಂಪುಟ ಸೇರಲಿದ್ದಾರೆ. ಅದರಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕೂಡ ಒಬ್ಬರು.
ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಎಚ್ ಡಿ ಕುಮಾರಸ್ವಾಮಿ ಮೋದಿ ಸಂಪುಟ ಸೇರಲಿದ್ದಾರೆ. ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವಕಾಶ ನೀಡಿದ್ದು, ಅದರ ಕ್ರೆಡಿಟ್ ಕನ್ನಡ ನಾಡಿನ ಜನತೆಗೆ ಸಲ್ಲುತ್ತದೆ ಎಂದು ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ, ಕೃಷಿ ಸಚಿವರಾಗುವ ಆಸೆಯನ್ನು ಮತ್ತೆ ವ್ಯಕ್ತಪಡಿಸಿದ್ದಾರೆ.

ಎಚ್ ಡಿ ಕುಮಾರಸ್ವಾಮಿ
ಹಾಸನ ಜಿಲ್ಲೆಯ ಹೊಳೇನರಸೀಪುರದ ತಾಲ್ಲೂಕಿನ ಹರದನಹಳ್ಳಿಯಲ್ಲಿ 1959ರ ಡಿಸೆಂಬರ್ 16ರಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗೂ ಚೆನ್ನಮ್ಮ ಪುತ್ರನಾಗಿ ಎಚ್ ಡಿ ಕುಮಾರಸ್ವಾಮಿ ಜನಿಸಿದರು. ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಪಡೆದ ಇವರು, ವೃತ್ತಿ ಜೀವನ ಆರಂಭಿಸಿದ್ದು ಕನ್ನಡ ಚಿತ್ರೋದ್ಯಮದಿಂದ.
ಮಾಜಿ ಪ್ರಧಾನಿ ಎಚ್ ದೇವೇಗೌಡರ ಮಗನಾಗಿರುವ ಕುಮಾರಸ್ವಾಮಿ ರಾಜಕೀಯ ಪ್ರವೇಶ ಮಾಡಿದ್ದು 1996ರಲ್ಲಿ. ಕನಕಪುರ ಲೋಕಸಭಾ ಕ್ಷೇತ್ರವನ್ನು ಗೆದ್ದು ಸಂಸದನಾಗಿ ಲೋಕಸಭೆ ಪ್ರವೇಶಿಸಿದರು. 1998ರಲ್ಲಿ ಇದೇ ಕನಕಪುರ ಕ್ಷೇತ್ರಕ್ಕೆ ಮರುಚುನಾವಣೆಯಲ್ಲಿ ಸೋಲು ಕಂಡಿದ್ದರು. 1999ರಲ್ಲಿ ಸಾತನೂರಿನಲ್ಲಿ ಸೋಲು ... ಕಹಿಯಿಂದ ತುಂಬಿದ್ದ ರಾಜಕೀಯ ಜೀವನದಲ್ಲಿ 2004ರಿಂದ ಮತ್ತೆ ಪುಟಿದೆದ್ದರು. 2006 ರಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಬಳಿಕ ಎರಡು ಬಾರಿ ಮುಖ್ಯಮಂತ್ರಿಯಾಗಿ (2006 ರಿಂದ 2007 ಹಾಗೂ 2018 ರಿಂದ 2019) ರಾಜ್ಯವನ್ನಾಳಿದ್ದಾರೆ. ರೈತ ಪರ ಕಾಳಜಿಯಿಂದ ರೈತರಿಗೆ ನಾನಾ ಯೋಜನೆಗಳ ಜೊತೆಗೆ ರೈತನನ್ನು ಸಾಲಮನ್ನದಂತಹ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಸದ್ಯ ಚನ್ನಪಟ್ಟಣದಿಂದ ಶಾಕರಾಗಿದ್ದ ಇವರು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಕೇಂದ್ರ ಕೃಷಿ ಖಾತೆಯ ಮೇಲೆ ಕಣ್ಣಿಟ್ಟಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications