ವಿಪಕ್ಷಗಳ ಮುಂಬೈ ಸಭೆ: ನಿತೀಶ್ ಕುಮಾರ್ರನ್ನು ಪಿಎಂ ಅಭ್ಯರ್ಥಿಯಾಗಿ ಬಿಂಬಿಸಲು ಜೆಡಿಯು ಒತ್ತಾಯ
ಪಾಟ್ನಾ, ಆಗಸ್ಟ್. 01: ಮುಂಬೈನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ನಾಯಕರ ಮೂರನೇ ಸುತ್ತಿನ ಸಭೆಗೆ ಮುನ್ನ ಜೆಡಿ (ಯು) ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುವ ಬೇಡಿಕೆಯನ್ನು ಮತ್ತೊಮ್ಮೆ ಪುನರುಚ್ಛರಿಸಿದೆ. ಈ ಹಿಂದೆಯೂ ಜೆಡಿಯು ಅನೇಕ ಬಾರಿ ಈ ಬೇಡಿಕೆಯನ್ನು ವಿಪಕ್ಷಗಳ ಮುಂದಿಟ್ಟಿದೆ.
ಹಲವಾರು ಮಾಜಿ ಜೆಡಿ (ಯು) ಮಾಜಿ ಸಂಸದರು ಮತ್ತು ಮಾಜಿ ಶಾಸಕರು ವಿರೋಧ ಪಕ್ಷದ ಮೈತ್ರಿ 'ಇಂಡಿಯಾ' (ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ) ನಲ್ಲಿ ನಿತೀಶ್ಗಿಂತ ಉತ್ತಮ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ತಿಳಿಸಿದ್ದಾರೆ. ಸಿಎಂ ಅವರ ಅಧಿಕೃತ ನಿವಾಸ ಅನ್ನೆ ಮಾರ್ಗದಲ್ಲಿ ನಿತೀಶ್ ಕುಮಾರ್ ಅವರೊಂದಿಗೆ ಸಭೆ ನಡೆಸಿದ್ದರು.

"ನಿತೀಶ್ ಕುಮಾರ್ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ನಾವು ಬಯಸುತ್ತೇವೆ. ಇದು ನಡೆದಲ್ಲಿ ಭಾರತವು ಗಮನಾರ್ಹವಾಗಿ ಲಾಭ ಪಡೆಯುತ್ತದೆ" ಎಂದು ಎಲ್ಲರೂ ಒಗ್ಗಟ್ಟಿನಿಂದ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ಪಕ್ಷವನ್ನು ಬಲಪಡಿಸಲು ನಿತೀಶ್ ಕುಮಾರ್ ವಿಶೇಷ ಗಮನ ಹರಿಸುತ್ತಿದ್ದಾರೆ. ಈ ಕುರಿತು ಪಕ್ಷದ ಎಲ್ಲಾ ಹಳೆಯ ಮತ್ತು ಹೊಸ ನಾಯಕರೊಂದಿಗೆ ಒಂದಿಲ್ಲೊಂದು ಸಭೆ ನಡೆಸುತ್ತಿದ್ದು, ತಳಮಟ್ಟದ ವಾಸ್ತವಗಳ ಬಗ್ಗೆ ಪ್ರತಿಕ್ರಿಯೆಯನ್ನೂ ಪಡೆಯುತ್ತಿದ್ದಾರೆ.
ಸಿಎಂ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ ನಂತರ ಮಾಜಿ ಸಂಸದರು ಮತ್ತು ಶಾಸಕರು ನಿತೀಶ್ ಕುಮಾರ್ ಅವರ ರಾಜಕೀಯ ಜೀವನವು ಇಷ್ಟು ವರ್ಷಗಳ ಕಾಲ ಸ್ವಚ್ಛವಾಗಿದೆ ಮತ್ತು ವಿರೋಧ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಲು ಸಂಪೂರ್ಣ ಅರ್ಹತೆ ಹೊಂದಿದ್ದಾರೆ ಎಂದು ಘೋಷಿಸಿದ್ದಾರೆ. "ಅವರು ವಿರೋಧ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲು ಅರ್ಹರು" ಎಂದು ಹೆಸರು ಹೇಳಲು ಇಚ್ಚಿಸದ ಹಿರಿಯ ಜೆಡಿಯು ನಾಯಕರೊಬ್ಬರು ಹೇಳಿದ್ದಾರೆ.

ಆದರೆ ನಿತೀಶ್ ಕುಮಾರ್ ಅವರು ತಾವು ಪ್ರಧಾನಿ ಹುದ್ದೆಯ ರೇಸ್ನಲ್ಲಿ ಇಲ್ಲ ಎಂದು ಪದೇ ಪದೇ ಹೇಳುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಮಾತ್ರ ನನಗೆ ಬೇಕಾಗಿರುವುದು ಎಂದಿದ್ದಾರೆ. ಆದರೂ, ಕಳೆದ ತಿಂಗಳು ಜೆಡಿಯು ಸಂಸದರು, ಶಾಸಕರು, ಎಂಎಲ್ಸಿಗಳು ಮತ್ತು ಸಚಿವರನ್ನು ಭೇಟಿ ಮಾಡಿದ್ದರು. ಬಳಿಕ ಪಕ್ಷದ ಮಾಜಿ ಸಂಸದರು, ಶಾಸಕರು, ಎಂಎಲ್ಸಿಗಳನ್ನು ಭೇಟಿ ಮಾಡಿ ಸಮಸ್ಯೆಗಳ ಕುರಿತು ಪ್ರತಿಕ್ರಿಯೆ ಪಡೆದಿದ್ದಾರೆ. ಸದ್ಯದಲ್ಲೇ ನಿತೀಶ್ ಜಿಲ್ಲಾಧ್ಯಕ್ಷರ ಜತೆ ಸಭೆ ನಡೆಸಬಹುದು ಎಂದು ಹೇಳಲಾಗುತ್ತಿದೆ.
ಇತ್ತ, ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ ಬಗ್ಗೆ ಮಾತನಾಡಿದ್ದರು. "ಕಾಂಗ್ರೆಸ್ ಪಕ್ಷ ಅಧಿಕಾರವಾಗಲಿ, ಪ್ರಧಾನ ಮಂತ್ರಿ ಹುದ್ದೆಯ ಬಗ್ಗೆಯಾಗಲಿ ಯಾವುದೇ ಆಸಕ್ತಿ ಹೊಂದಿಲ್ಲ" ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕಾಂಗ್ರೆಸ್ನಿಂದ ಯಾರೂ ಪ್ರಧಾನಿ ಅಭ್ಯರ್ಥಿ ಆಗಲ್ಲ ಎಂಬ ಸಂದೇಶ ನೀಡಿದ್ದರು.
ಹೀಗಾಗಿಯೇ ವಿಪಕ್ಷಗಳ ಮೈತ್ರಿಕೂಟದಿಂದ ಯಾರು ಪ್ರಧಾನಿ ಅಭ್ಯರ್ಥಿಯಾಗಬಹುದು ಎಂಬುದು ಇನ್ನು ನಿಗೂಢವಾಗಿದೆ. ಹೆಚ್ಚಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಹೆಸರು ಮಾತ್ರ ಕೇಳಿಬರುತ್ತಿದೆ. ಅವರು ನಾನು ಪಿಎಂ ಹುದ್ದೆಯ ಸ್ಪರ್ಧೆಯಲ್ಲಿಲ್ಲ ಎಂದು ಹೇಳುತ್ತಿದ್ದರೂ ಕೂಡ ಅವರಿಗೆ ಆ ಬಗ್ಗೆ ಆಸಕ್ತಿಯಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಮುಂಬೈನಲ್ಲಿ ನಡೆಯಲಿರುವ ಮೂರನೇ ಸುತ್ತಿನ ವಿಪಕ್ಷಗಳ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಬಹುದು.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications