ಜೆಇಇ ಅಡ್ವಾನ್ಸ್ಡ್ 2021 ಫಲಿತಾಂಶ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ
ನವದೆಹಲಿ, ಅಕ್ಟೋಬರ್ 15: ಖರಗ್ಪುರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಯ 2021ರ ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಜೊತೆಗೆ ಅಂತಿಮ ಕೀ ಉತ್ತರಗಳನ್ನು ಸಹ ಬಿಡುಗಡೆ ಮಾಡಿದೆ.
ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ದೆಹಲಿಯ ಐಐಟಿಯ ಮೃದುಲ್ ಅಗರ್ವಾಲ್ 360ಕ್ಕೆ 348 ಅಂಕಗಳನ್ನು ಪಡೆಯುವ ಮೂಲಕ ಟಾಪ್ ಸ್ಥಾನ ಪಡೆದಿದ್ದಾರೆ.
ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ಫಲಿತಾಂಶವನ್ನು (JEE Advanced Result 2021) ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ jeeadv.ac.in ಕ್ಲಿಕ್ ಮಾಡುವ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

ಅಭ್ಯರ್ಥಿಗಳು ಜೆಇಇ ಅಡ್ವಾನ್ಸ್ಡ್-2021ರ ರೋಲ್ ಸಂಖ್ಯೆ, ಜನ್ಮದಿನಾಂಕ ಮತ್ತು ಫೋನ್ ನಂಬರ್ಗಳ ಮೂಲಕ ಫಲಿತಾಂಶವನ್ನು ತಿಳಿದುಕೊಳ್ಳಬಹುದಾಗಿದೆ. ಫಲಿತಾಂಶವು ಅಂಕಪಟ್ಟಿ ಮಾದರಿಯಲ್ಲಿ ಲಭ್ಯವಿರಲಿದ್ದು, ದೇಶದ ಟಾಪರ್ಗಳ ಪಟ್ಟಿ ಮತ್ತು ಇತರ ಸಂಬಂಧಿತ ಮಾಹಿತಿಯೂ ಇರಲಿದೆ.
ಜೆಇಇ ಮೇನ್ ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್ಐಟಿ), ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಮತ್ತು ಇತರ ಸರ್ಕಾರಿ ಅನುದಾನಿತ ತಾಂತ್ರಿಕ ಸಂಸ್ಥೆಗಳ (ಜಿಎಫ್ಟಿಐ) ಪ್ರವೇಶಕ್ಕಾಗಿ ನಡೆಯುವ ಜಂಟಿ ಸೀಟು ಹಂಚಿಕೆ ಪ್ರಾಧಿಕಾರದ ದ ಕೌನ್ಸೆಲಿಂಗ್ನಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ಖರಗ್ಪುರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯಿಂದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಮೊದಲು ನೋಂದಾವಣೆ ಮಾಡಿಕೊಂಡು, ನಂತರ ತಮ್ಮ ಆದ್ಯತೆಯ ಸಂಸ್ಥೆಗಳು ಮತ್ತು ಕೋರ್ಸ್ಗಳ ಆಯ್ಕೆಯನ್ನು ಭರ್ತಿ ಮಾಡಬೇಕು.
ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ ರೋಲ್ ಸಂಖ್ಯೆ ಮತ್ತು ಇತರ ವಿವರಗಳನ್ನು ಭರ್ತಿ ಮಾಡುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ಜೆಇಇ ಅಡ್ವಾನ್ಸ್ಡ್ ಫಲಿತಾಂಶದೊಂದಿಗೆ, ಐಐಟಿ ಖರಗ್ಪುರವು ಅಖಿಲ ಭಾರತ ಟಾಪರ್ಗಳ ಪಟ್ಟಿಯನ್ನು ಕೂಡ ಪ್ರಕಟಿಸಿದೆ.
ಜೆಇಇ ಅಧಿಕೃತ ವೆಬ್ಸೈಟ್ jeeadv.ac.inನಲ್ಲಿ ಫಲಿತಾಂಶ ಪ್ರಕಟಗೊಂಡಿದೆ. ಅಭ್ಯರ್ಥಿಗಳು ಜೆಇಇ ಅಡ್ವಾನ್ಸ್ಡ್-2021ರ ರೋಲ್ ಸಂಖ್ಯೆ, ಜನ್ಮದಿನಾಂಕ ಮತ್ತು ಫೋನ್ ನಂಬರ್ಗಳ ಮೂಲಕ ಫಲಿತಾಂಶವನ್ನು ತಿಳಿದುಕೊಳ್ಳಬಹುದು. ಫಲಿತಾಂಶವು ಅಂಕಪಟ್ಟಿ ಮಾದರಿಯಲ್ಲಿ ಲಭ್ಯವಿರಲಿದ್ದು, ದೇಶದ ಟಾಪರ್ಗಳ ಪಟ್ಟಿ ಮತ್ತು ಇತರ ಸಂಬಂಧಿತ ಮಾಹಿತಿಯೂ ಇರಲಿದೆ.
ಜೆಇಇ ಮೇನ್ ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಮತ್ತು ಇತರ ಸರ್ಕಾರಿ ಅನುದಾನಿತ ತಾಂತ್ರಿಕ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆಯುವ ಜಂಟಿ ಸೀಟು ಹಂಚಿಕೆ ಪ್ರಾಧಿಕಾರದ ಕೌನ್ಸೆಲಿಂಗ್ನಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ಜಂಟಿ ಸೀಟು ಹಂಚಿಕೆ ಪ್ರಕ್ರಿಯೆಯ ಮೂಲಕ ಅಭ್ಯರ್ಥಿಗಳಿಗೆ ಐಐಟಿಯಲ್ಲಿನ ಸೀಟು ಹಂಚಿಕೆ ನಡೆಯುತ್ತದೆ. ಜೆಇಇ ಮುಖ್ಯ ಪರೀಕ್ಷೆಯಲ್ಲಿ 44 ವಿದ್ಯಾರ್ಥಿಗಳು 100ಕ್ಕೆ ನೂರು ಅಂಕ ಗಳಿಸುವ ಮೂಲಕ ಸಾಧನೆ ಮಾಡಿದ್ದರು. ಕರ್ನಾಟಕದ ಗೌರವ್ ದಾಸ್ ಮೊದಲ ಸ್ಥಾನ ಗಳಿಸುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದರು.
ಜೆಇಇ ಅಡ್ವಾನ್ಸ್ಡ್ 2021ರ ಫಲಿತಾಂಶವನ್ನು ಇಂದು ಘೋಷಿಸಲಾಗಿದೆ. JoSAA ಅಡಿಯಲ್ಲಿ ಮುಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ಅಭ್ಯರ್ಥಿ ಗಳ ನೋಂದಣಿ/ ಆಯ್ಕೆ ಪ್ರಕ್ರಿಯೆ ಅಕ್ಟೋಬರ್ 16ರಂದು ಆರಂಭವಾಗುತ್ತದೆ.
ಮೊದಲ ಅಣಕು ಸೀಟು ಹಂಚಿಕೆಯನ್ನು ಅಕ್ಟೋಬರ್ 22ರಂದು 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ. ಎರಡನೇ ಪಟ್ಟಿಯನ್ನು ಅಕ್ಟೋಬರ್ 24ರ ಬೆಳಿಗ್ಗೆ 10ಕ್ಕೆ ಬಿಡುಗಡೆ ಮಾಡಲಾಗುತ್ತದೆ. ಮೊದಲ ಹಂತದ ಸೀಟು ಹಂಚಿಕೆ ಪ್ರಕ್ರಿಯೆ ಅ. 27ರಂದು ನಡೆಯಲಿದೆ.
ಐಐಟಿ ದೆಹಲಿಯ ಕಾವ್ಯ ಚೋಪ್ರಾ 360ಕ್ಕೆ 286 ಅಂಕಗಳನ್ನು ಪಡೆದು ಮಹಿಳೆಯರ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಜೆಇಇ ಅಡ್ವಾನ್ಸ್ಡ್-2021ರಲ್ಲಿ ರ್ಯಾಂಕ್ ಪಡೆದ ಎಲ್ಲ ಅಭ್ಯರ್ಥಿಗಳು ಜಂಟಿ ಸೀಟು ಹಂಚಿಕೆ ಪ್ರಾಧಿಕಾರ (JoSAA) ದ ಕೌನ್ಸೆಲಿಂಗ್ನಲ್ಲಿ ಭಾಗವಹಿಸಬಹುದು. ವಿದ್ಯಾರ್ಥಿಗಳು ಮೊದಲು ನೋಂದಾವಣೆ ಮಾಡಿಕೊಂಡು, ನಂತರ ತಮ್ಮ ಆದ್ಯತೆಯ ಕಾಲೇಜು ಮತ್ತು ಕೋರ್ಸ್ಗಳ ಆಯ್ಕೆಯನ್ನು ಭರ್ತಿ ಮಾಡಬೇಕು.
ಸೆಪ್ಟೆಂಬರ್ 15ಕ್ಕೆ ಜೆಇಇ ಮೇನ್ಸ್ ಫಲಿತಾಂಶ ಪ್ರಕಟಗೊಂಡಿತ್ತು. ಜೆಇಇ ಮೇನ್ಸ್ 2021 ಫಲಿತಾಂಶ ಪ್ರಕಟವಾಗಿದ್ದು, 44 ಅಭ್ಯರ್ಥಿಗಳು ಶೇ.100 ಅಂಕಗಳನ್ನು ಗಳಿಸಿದ್ದಾರೆ. ಹಾಗೂ 18 ಮಂದಿ ಟಾಪ್ ರಾಂಕ್ ಪಡೆದಿದ್ದರು.
ಕರ್ನಾಟಕದ ಗೌರವ್ ದಾಸ್,ಬಿಹಾರದ ವೈಭವ್ ವಿಶಾಲ್, ಆಂಧ್ರಪ್ರದೇಶದ ದುಗ್ಗಿನೇನಿ ವೆಂಕಟ ಪನೀಶ್, ರಾಜಸ್ಥಾನದ ಸಿದ್ಧಾಂತ್ ಮುಖರ್ಜಿ, ಅಂಶುಲ್ ವರ್ಮಾ ಹಾಗೂ ಮೃದುಲ್ ಅಗರ್ವಾಲ್, ದೆಹಲಿಯ ರುಚಿರ್ ಬನ್ಸಾಲ್ ಹಾಗೂ ಕಾವ್ಯಾ ಚೋಪ್ರಾ, ಉತ್ತರ ಪ್ರದೇಶದ ಅಮಯ್ಯ ಸಿಂಘಾಲ್ ಹಾಗೂ ಪಾಲ್ ಅಗರ್ವಾಲ್, ತೆಲಂಗಾಣದ ಕೊಮ್ಮಾ ಶರಣ್ಯ ಮತ್ತು ಜೋಯ್ಸುಲಾ ವೆಂಕಟ ಆದಿತ್ಯ, ಆಂಧ್ರಪ್ರದೇಶದ ಪಸಾಲ ವೀರ ಶಿವ, ಕರ್ಣಂ ಲೋಕೇಶ್ ಹಾಗೂ ಕಾಂಚನಪಲ್ಲಿ ರಾಹುಲ್ ನಾಯ್ಡು, ಪಂಜಾಬ್ನ ಪುಲ್ಕಿತ್ ಗೋಯಲ್, ಚಂಡೀಗಢದ ಗುರಮೃತ್ ಸಿಂಗ್ ಮೊದಲ ಸ್ಥಾನ ಪಡೆದಿದ್ದರು.

ಕರ್ನಾಟಕದ ಟಾಪರ್: ಅಲೇನ್ ತರಬೇತಿ ಕೇಂದ್ರದ ಮೂಲಕ ತರಬೇತಿ ಪಡೆದಿದ್ದ ವಿದ್ಯಾರ್ಥಿ ವಿರೇಶ್ ಬಿ.ಪಾಟೀಲ್ ಅಖಿಲ ಭಾರತೀಯ ಮಟ್ಟದಲ್ಲಿ 39ನೇ ರ್ಯಾಂಕ್ ಗಳಿಸಿದ್ದಾನೆ. ಆ ಮೂಲಕ ಕರ್ನಾಟಕ ಟಾಪರ್ ಆಗಿದ್ದಾನೆ.
ಈ ವಿದ್ಯಾರ್ಥಿಯು ಕರ್ನಾಟಕ ಕೆ-ಸಿಇಟಿನಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ 7ನೇ ರ್ಯಾಂಕ್, ಕಾಮೆಡ್-ಕೆನಲ್ಲಿ ಪ್ರಥಮ ರ್ಯಾಂಕ್, ಜೆಇಇ ಮೈನ್ಸ್ನಲ್ಲಿ 187ನೇ ರ್ಯಾಂಕ್ ಪಡೆದಿದ್ದ.
ಈ ಕುರಿತು ಮಾತನಾಡಿದ ಅಲೇನ್ ದಕ್ಷಿಣ ಭಾರತ ಕೇಂದ್ರದ ಶೈಕ್ಷಣಿಕ ಮುಖ್ಯಸ್ಥ ಮಹೇಶ್ ಯಾದವ್, ವೀರೇಶ್ ಈ ಹಿಂದೆ ಕೆಲವು ಪ್ರವೇಶ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದ. ತಿಳಿಯುವ ಆಸಕ್ತಿ ಹೆಚ್ಚಾಗಿರುವುದರಿಂದ ಈ ರ್ಯಾಂಕ್ ಪಡೆಯಲು ವೀರೇಶ್ಗೆ ಸಾಧ್ಯವಾಗಿದೆ. ಆದ್ಯೋತ್ ಭಾರದ್ವಾಜ್ 144, ಅನಿರುದ್ಧ 384 ಈ ರೀತಿ 11 ವಿದ್ಯಾರ್ಥಿಗಳು ಉತ್ತಮ ರ್ಯಾಂಕ್ ಪಡೆದಿದ್ದಾರೆ.
''ನಾನು ಪ್ರತಿ ನಿತ್ಯ 6ರಿಂದ 7 ಗಂಟೆ ಸಮಯ ವ್ಯಾಸಂಗ ಮಾಡುತ್ತಿದ್ದೆ. ಉತ್ತಮ ರ್ಯಾಂಕ್ ಬಂದಿದೆ. ದೆಹಲಿಯ ಐಐಟಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಮಾಡುವ ಉದ್ದೇಶ ಇದೆ. ಅಲೇನ್ ಕೇಂದ್ರದ ಉಪನ್ಯಾಸಕರು ಮತ್ತು ಪ್ರೋತ್ಸಾಹ ನೀಡಿದ ಪಾಲಕರಿಗೆ ಧನ್ಯವಾದಗಳು,'' ವಿರೇಶ್ ಬಿ.ಪಾಟೀಲ್, ಜೆಇಇ 39ನೇ ರ್ಯಾಂಕ್.
-
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
CBSE ಗಣಿತ ಪ್ರಶ್ನೆಪತ್ರಿಕೆಯ QR ಕೋಡ್ ಸ್ಕ್ಯಾನ್ ಮಾಡಿದ್ರೆ ಬರ್ತಿದೆ ಇಂಗ್ಲಿಷ್ ಹಾಡು: ಸಿಬಿಎಸ್ಇ ಸ್ಪಷ್ಟನೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ












Click it and Unblock the Notifications