ಜೆಇಇ ಮುಖ್ಯ ಪೇಪರ್ 2 ಪರೀಕ್ಷೆ ಫಲಿತಾಂಶ ಪ್ರಕಟ
ನವದೆಹಲಿ, ಸೆಪ್ಟೆಂಬರ್ 18: ಜೆಇಇ ಮುಖ್ಯ ಪೇಪರ್ 2 ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಶುಕ್ರವಾರ ಜೆಇಇ ಪೇಪರ್ 2 ಪರೀಕ್ಷೆ ಫಲಿತಾಂಶ ವನ್ನು ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್(B.Arch), ಬ್ಯಾಚುಲರ್ ಪ್ಲಾನಿಂಗ್ (B.Plan) ಪೇಪರ್ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸಬಹುದು. ಫಲಿತಾಂಶವನ್ನು jeemain.nta.nic.in.NTA ನಲ್ಲಿ ವೀಕ್ಷಿಸಬಹುದು.

ಪರೀಕ್ಷೆಯು ಸೆಪ್ಟೆಂಬರ್ 1 ರಂದು ನಡೆದಿತ್ತು.ಶುಕ್ರವಾರ ಸಂಜೆ ಅಂತಿಮ ಆನ್ಸರ್ ಕೀಯನ್ನು ಬಿಡುಗಡೆ ಮಾಡಿತ್ತು. ಸೆಪ್ಟೆಂಬರ್ 8 ರಂದು ಮೊದಲ ಆನ್ಸರ್ ಕೀ ಬಿಡುಗಡೆ ಮಾಡಿತ್ತು. ಆನ್ಸರ್ ಕೀನಲ್ಲಿ ತಪ್ಪಿದ್ದ ಕಾರಣ ಅಭ್ಯರ್ಥಿಗಳು ವಿರೋಧ ವ್ಯಕ್ತಪಡಿಸಿದ್ದರು.
ಎನ್ಟಿಎ ಅಂತಿಮ ಆನ್ಸರ್ ಕೀಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಸೆಪ್ಟೆಂಬರ್ 10 ರಂದು ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಬಿ.ಟೆಕ್, ಬಿ.ಇ ಅಭ್ಯರ್ಥಿಗಳ ಫಲಿತಾಂಶ ಬಂದಿತ್ತು.
-JEE Main 2020 NTA score Paper 2 ಕ್ಲಿಕ್ ಮಾಡಬೇಕು
-ಅಪ್ಲಿಕೇಷನ್ ಐಡಿ ಪಾಸ್ವರ್ಡ್ ನೀಡಬೇಕು
-ಜೆಇಇ ಮುಖ್ಯ ಪೇಪರ್ 2 ಫಲಿತಾಂಶ ಸ್ಕ್ರೀನ್ನಲ್ಲಿ ಕಾಣಿಸಲಿದೆ.
-ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆಯಬಹುದಾಗಿದೆ.
ಜೆಇಇ ಮುಖ್ಯ ಪರೀಕ್ಷೆಯಲ್ಲಿ 24 ವಿದ್ಯಾರ್ಥಿಗಳು ಶೇ. 100 ರಷ್ಟು ಅಂಕಗಳನ್ನು ಗಳಿಸಿದ್ದರು.
ಕೋವಿಡ್ -19 ಹಿನ್ನೆಲೆಯಲ್ಲಿ ಜೆಇಇ ಪರೀಕ್ಷೆ ಎರಡು ಬಾರಿ ಮುಂದೂಡಿಕೆಯಾಗಿತ್ತು. ಅಂತಿಮವಾಗಿ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 6 ರವರೆಗೆ ದೇಶದ 233 ನಗರಗಳ 660 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು.
ಇಂದು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ. 100 ರಷ್ಟು ಅಂಕ ಪಡೆದವರ ಪಟ್ಟಿಯಲ್ಲಿ ತೆಲಂಗಾಣ(8 ಅಭ್ಯರ್ಥಿಗಳು) ಮೊದಲ ಸ್ಥಾನದಲ್ಲಿರೆ, ದೆಹಲಿ(5) ಎರಡನೇ ಸ್ಥಾನದಲ್ಲಿದೆ. ನಂತರದಲ್ಲಿ ಸ್ಥಾನದಲ್ಲಿ ರಾಜಸ್ಥಾನ(4), ಆಂಧ್ರಪ್ರದೇಶ (3), ಹರಿಯಾಣ (2) ಮತ್ತು ಗುಜರಾತ್ ಹಾಗೂ ಮಹಾರಾಷ್ಟ್ರದ ತಲಾ ಒಬ್ಬ ಅಭ್ಯರ್ಥಿ ಶೇ. 100 ಅಂಕ ಪಡೆದಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications