ಜೆಇಇ ಮೇನ್ಸ್ 2021 ಫಲಿತಾಂಶ ಪ್ರಕಟ, 44 ಅಭ್ಯರ್ಥಿಗಳಿಗೆ ಶೇ.100 ಅಂಕ
ನವದೆಹಲಿ, ಸೆಪ್ಟೆಂಬರ್ 15: ಜೆಇಇ ಮೇನ್ಸ್ 2021 ಫಲಿತಾಂಶ ಪ್ರಕಟವಾಗಿದ್ದು, 44 ಅಭ್ಯರ್ಥಿಗಳು ಶೇ.100 ಅಂಕಗಳನ್ನು ಗಳಿಸಿದ್ದಾರೆ. ಹಾಗೂ 18 ಮಂದಿ ಟಾಪ್ ರಾಂಕ್ ಪಡೆದಿದ್ದಾರೆ ಎಂದು ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಗೌರವ್ ದಾಸ್,ಬಿಹಾರದ ವೈಭವ್ ವಿಶಾಲ್, ಆಂಧ್ರಪ್ರದೇಶದ ದುಗ್ಗಿನೇನಿ ವೆಂಕಟ ಪನೀಶ್, ರಾಜಸ್ಥಾನದ ಸಿದ್ಧಾಂತ್ ಮುಖರ್ಜಿ, ಅಂಶುಲ್ ವರ್ಮಾ ಹಾಗೂ ಮೃದುಲ್ ಅಗರ್ವಾಲ್, ದೆಹಲಿಯ ರುಚಿರ್ ಬನ್ಸಾಲ್ ಹಾಗೂ ಕಾವ್ಯಾ ಚೋಪ್ರಾ, ಉತ್ತರ ಪ್ರದೇಶದ ಅಮಯ್ಯ ಸಿಂಘಾಲ್ ಹಾಗೂ ಪಾಲ್ ಅಗರ್ವಾಲ್, ತೆಲಂಗಾಣದ ಕೊಮ್ಮಾ ಶರಣ್ಯ ಮತ್ತು ಜೋಯ್ಸುಲಾ ವೆಂಕಟ ಆದಿತ್ಯ, ಆಂಧ್ರಪ್ರದೇಶದ ಪಸಾಲ ವೀರ ಶಿವ, ಕರ್ಣಂ ಲೋಕೇಶ್ ಹಾಗೂ ಕಾಂಚನಪಲ್ಲಿ ರಾಹುಲ್ ನಾಯ್ಡು, ಪಂಜಾಬ್ನ ಪುಲ್ಕಿತ್ ಗೋಯಲ್, ಚಂಡೀಗಢದ ಗುರಮೃತ್ ಸಿಂಗ್ ಮೊದಲ ಸ್ಥಾನ ಪಡೆದಿದ್ದಾರೆ.

ಪರೀಕ್ಷೆಯನ್ನು ಒಟ್ಟು 13 ಭಾಷೆಗಳಲ್ಲಿ ನಡೆಸಲಾಯಿತು. ಇಂಗ್ಲಿಷ್, ಹಿಂದಿ, ಗುಜರಾತಿ, ಅಸ್ಸಾಮೆ, ಬೆಂಗಾಲಿ,ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಹಾಗೂ ಉರ್ದುವಿನಲ್ಲಿ ಪರೀಕ್ಷೆ ನಡೆಯಿತು.
ಈ ವರ್ಷ ಜೆಇಇ ಮೇನ್ 2021 ಪರೀಕ್ಷೆಯನ್ನು ನಾಲ್ಕು ಬಾರಿ ನಡೆಸಲಾಗಿದ್ದು, ಅಭ್ಯರ್ಥಿಗಳಿಗೆ ನಾಲ್ಕು ಬಾರಿ ಅಥವಾ ಅವರು ಇಚ್ಛಿಸಿದಷ್ಟು ಅವಕಾಶಗಳಿಗೆ ಭಾಗವಹಿಸುವ ಅವಕಾಶ ನೀಡಲಾಗಿತ್ತು.
jeemain.nta.nic.inನಲ್ಲಿ ಫಲಿತಾಂಶ ನೋಡಬಹುದಾಗಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications