ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಭಾರತ ವಿಮಾನ
ಕರಾಚಿ, ನವೆಂಬರ್, 8: ಪ್ರಯಾಣಿಕರೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಭಾರತದ ಜೆಟ್ ಏರ್ ವೇಸ್ ವಿಮಾನ ಪಾಕಿಸ್ತಾನದ ಕರಾಚಿಯಲ್ಲಿ ಮಂಗಳವಾರ ತುರ್ತು ಭೂ ಸ್ಪರ್ಶ ಮಾಡಿದೆ.
ಪಾಕಿಸ್ತಾನದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲು ಪೈಲಟ್ ಪರವಾನಗಿ ಪಡೆದಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಜಿಯೋ ನ್ಯೂಸ್ ವರದಿ ಮಾಡಿದೆ.
ಅಸ್ವಸ್ಥಗೊಂಡ ಪ್ರಯಾಣಿಕನನ್ನು ಸೋಹನ್ ಸಿಂಗ್ ಎಂದು ಗುರುತಿಸಲಾಗಿದ್ದು, ಪಾಕಿಸ್ತಾನದ ವೈದ್ಯರು ಪರೀಕ್ಷೆ ಮಾಡಿ, ಪ್ರಯಾಣದ ವೇಳೆ ಆತ ಮೃತಪಟ್ಟಿದ್ದಾನೆ ಎಂದು ದೃಢಪಡಿಸಿದ್ದಾರೆ.

ಜೆಟ್ ಏರ್ ವೇಸ್ ನ 9w 202 ವಿಮಾನವು ನವದೆಹಲಿಯಿಂದ ದೋಹಾ ಕಡೆಗೆ ಹೊರಟಿತ್ತು ಪ್ರಯಾಣಿಕ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಜೆಟ್ ಏರ್ ಲೈನ್ಸ್ ಸಂಸ್ಥೆ ತಿಳಿಸಿದೆ.
"ಪ್ರಯಾಣಿಕರಲ್ಲಿ ಒಬ್ಬರು ತೀವ್ರ ಅಸ್ವಸ್ಥಗೊಂಡಿದ್ದರಿಂದ ತುರ್ತಾಗಿ ಹತ್ತಿರದ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಸಲು ಕ್ಯಾಪ್ಟನ್ ನಿರ್ಧರಿಸಿದ್ದರು ಎಂದು ಸಂಸ್ಥೆ ಮಾಧ್ಯಮಗಳಿಗೆ ತಿಳಿಸಿದೆ. ವಿಮಾನವು ಮಂಗಳವಾರ ಬೆಳಿಗ್ಗೆ ದೆಹಲಿಗೆ ಹಿಂತಿರುಗಲಿದೆ ಎಂದು ಸಂಸ್ಥೆ ಹೇಳಿದೆ.
ವಿಮಾನದಲ್ಲಿ ಒಟ್ಟು 141 ಜನ ಪ್ರಯಾಣಿಕರಿದ್ದರು, ವಿಮಾನ ಇಳಿಯುವುದಕ್ಕೂ ಮುಂಚೆ ಪ್ರಯಾಣಿಕರಿಗೆ ಸೋಹನ್ ಸಿಂಗ್ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗಿತ್ತು. ಆದರೆ ಕರಾಚಿಯಲ್ಲಿ ಇಳಿಯುವ ಮೊದಲೇ ಅವರು ಮರಣಿಸಿದ್ದಾರೆ ಎಂದು ಸಂಸ್ಥೆ ಹೇಳಿದೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications