ಸಂಕಷ್ಟದಲ್ಲಿ ಸಂಸ್ಥೆ: ಹಾರಾಟ ಸ್ಥಗಿತಗೊಳಿಸಲು ನಿರ್ಧರಿಸಿದ ಜೆಟ್ ಏರ್ವೇಸ್
ಮುಂಬೈ, ಏಪ್ರಿಲ್ 17: ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ದೇಶದ ಅತಿ ದೊಡ್ಡ ಖಾಸಗಿ ವಿಮಾನಯಾನ ಸಂಸ್ಥೆ ಜೆಟ್ ಏರ್ವೇಸ್ ಬುಧವಾರ ರಾತ್ರಿಯಿಂದಲೇ ತಮ್ಮ ಎಲ್ಲ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕಳೆದ ಕೆಲವು ದಿನಗಳಿಂದ ಸಂಸ್ಥೆಯು ಕೇವಲ 35-40 ವಿಮಾನಗಳ ಸೇವೆ ಒದಗಿಸುತ್ತಿತ್ತು. ಅತೀವ ಆರ್ಥಿಕ ಸಂಕಷ್ಟದಿಂದಾಗಿ ಈಗ ಅವುಗಳ ಹಾರಾಟಕ್ಕೂ ತೊಡಕು ಉಂಟಾಗಿದ್ದು, ಸಂಪೂರ್ಣವಾಗಿ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲು ಅದು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಜೆಟ್ ಏರ್ವೇಸ್ನ ಸಾಲದಾತ ಸಂಸ್ಥೆಗಳು ಅದರ ಆರ್ಥಿಕ ಪುನಶ್ಚೇತನಕ್ಕೆ ಹೆಚ್ಚುವರಿ ಹಣಕಾಸಿನ ನೆರವು ಕೋರಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.

ವಿಮಾನ ಸಂಸ್ಥೆಯು ಗುರುವಾರದಿಂದ ತನ್ನ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದೆ ಎಂದು ಹೇಳಲಾಗಿತ್ತು. ಅದರ ಬೆನ್ನಲ್ಲೇ ಅದರ ಷೇರುಗಳು ಶೇ 20ರಷ್ಟು ನೆಲಕಚ್ಚಿದ್ದವು. ಮಂಗಳವಾರ ಅಂತ್ಯದ ವೇಳೆಗೆ 242 ರೂ ಮೌಲ್ಯದಲ್ಲಿ ಶೇ 8ರಲ್ಲಿ ಅಂತ್ಯಗೊಂಡಿತ್ತು. ಬುಧವಾರ ಮಾರುಕಟ್ಟೆಗಳು ತೆರೆದಿರಲಿಲ್ಲ.
ಈ ಪ್ರಣಾಳಿಕೆಗಳಲ್ಲಿ ಯಾವುದು ನಿಮ್ಮ ಗಮನ ಸೆಳೆದಿದೆ?
ಸಂಸ್ಥೆಯ ವಿಮಾನಗಳು ಹಾರಾಟ ನಡೆಸದೆ ಇದ್ದರೆ ಅವುಗಳ ಪರವಾನಗಿ ಅಮಾನತು ಆಗುವ ಭೀತಿ ಎದುರಾಗಿದೆ. ಭಾರತೀಯ ವಿಮಾನಯಾನ ಪ್ರಾಧಿಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳುವ ಕುರಿತು ಸೂಚನೆ ನೀಡಿಲ್ಲ.
ಬುಧವಾರ ಬೆಳಿಗ್ಗೆ ಸಂಸ್ಥೆಯ ಆರು ವಿಮಾನಗಳು ಮಾತ್ರ ಹಾರಾಟ ನಡೆಸಿದ್ದವು. ಮಧ್ಯಾಹ್ನದ ಬಳಿಕ ಎಲ್ಲ ವಿಮಾನಗಳ ಹಾರಾಟ ನಿಲ್ಲಿಸಲು ನಿರ್ಧಾರ ಕೈಗೊಳ್ಳಲಾಯಿತು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications