ಬಾಗಿಲು ತೆರೆದ ಆಭರಣದ ಅಂಗಡಿಗಳು, ಗ್ರಾಹಕ ನಿಟ್ಟುಸಿರು
ಬೆಂಗಳೂರು, ಮಾರ್ಚ್, 21 : ಚಿನ್ನಾಭರಣ ವರ್ತಕರು ಕಳೆದ 18 ದಿನಗಳಿಂದ ದೇಶವ್ಯಾಪಿ ನಡೆಸುತ್ತಿದ್ದ ಮುಷ್ಕರ ಹಿಂದಕ್ಕೆ ಪಡೆದುಕೊಂಡಿದ್ದಾರೆ. ಸರ್ಕಾರ ಮತ್ತು ಮುಷ್ಕರ ನಿರತ ಚಿನ್ನಾಭರಣ ವರ್ತಕರ ಮಧ್ಯೆ ನಡೆದ ಸಂಧಾನ ಮಾತುಕತೆ ಫಲ ನೀಡಿದ್ದು ಎಂದಿನಂತೆ ವ್ಯಾಪಾರ ವಹಿವಾಟು ಆರಂಭವಾಗಿದೆ.
ಮುಷ್ಕರದಿಂದ ಉದ್ಯಮಕ್ಕೆ 70 ಸಾವಿರ ಕೋಟಿ ರು. ಗಳಷ್ಟು ನಷ್ಟವಾಗಿದೆ ಎಂದು ಹರಳು ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿ ಹೇಳಿದೆ. ಶನಿವಾರ ಸಂಜೆ ವರ್ತಕರ ನಿಯೋಗವು ಸಚಿವರಾದ ಅರುಣ್ ಜೇಟ್ಲಿ, ಪೀಯೂಷ್ ಗೋಯಲ್, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಹಾಗೂ ಇತರ ನಾಯಕರನ್ನು ಭೇಟಿ ಮಾಡಿ ಚರ್ಚಿಸಿ ಬೇಡಿಕೆಗಳನ್ನು ಮುಂದೆ ಇಟ್ಟಿತ್ತು.['ಚಿನ್ನ ಮಹಿಳೆಗೆ ಶೃಂಗಾರ, ಫ್ಯಾಷನ್ನಿಗೆ ಅದನ್ನವರು ಕೊಳ್ಳಲ್ಲ']

ಚಿನ್ನಾಭರಣ ವರ್ತಕರು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳ ಪರಿಶೀಲನೆಗೆ ಹಣಕಾಸು ಮತ್ತು ಕಂಪನಿ ವ್ಯವಹಾರಗಳ ಸಚಿವಾಲಯದ ಮಾಜಿ ಆರ್ಥಿಕ ಸಲಹೆಗಾರ ಅಶೋಕ್ ಲಹಿರಿ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿ ರಚಿಸುವುದಾಗಿ ಜೇಟ್ಲಿ ಭರವಸೆ ನೀಡಿದ್ದಾರೆ.
ಚಿನ್ನಾಭರಣಗಳ ಮೇಲೆ ವಿಧಿಸಿರುವ ಶೇ. 1ರಷ್ಟು ಅಬಕಾರಿ ಸುಂಕ ವಿಧಿಸುವ ನಿರ್ಧಾರವನ್ನು ಮರಳಿ ಪಡೆಯುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇನ್ನೊಂದೆಡೆ ಎರಡು ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತದ ವಹಿವಾಟಿಗೆ ಪ್ಯಾನ್ ಕಾರ್ಡ್ ಕಡ್ಡಾಯ ಮಾಡಿರುವ ಸರ್ಕಾರದ ನಿರ್ಧಾರದ ಬಗ್ಗೆ ಆಕ್ಷೇಪ ಎತ್ತಿದ ವರ್ತಕರ ನಿಯೋಗ ಸಮಸ್ಯೆಯ ಬಗೆಯನ್ನು ಮನದಟ್ಟು ಮಾಡಿಕೊಡಲು ಪ್ರಯತ್ನ ಮಾಡಿತು.[ಗೋಲ್ಡ್ ಮಾನಿಟೈಸೇಶನ್ ಯೋಜನೆ ಏಕೆ ಮತ್ತು ಏತಕ್ಕೆ?]
ನಿಮ್ಮ ನಗರದ ಇಂದಿನ ಚಿನ್ನದ ದರ ತಿಳಿದುಕೊಳ್ಳಿ
ಒಟ್ಟಿನಲ್ಲಿ ಸದ್ಯದ ಮಟ್ಟಿಗೆ ಗ್ರಾಹಕರ ತಲೆ ಬಿಸಿ ಕಡಿಮೆಯಾಗಿದೆ. ಸರ್ಕಾರ ನೀಡಿರುವ ಭರವಸೆಯನ್ನು ಆಧರಿಸಿ ಚಿನ್ನಾಭರಣ ವರ್ತಕರು ಮುಷ್ಕರ ಕೈ ಬಿಟ್ಟಿದ್ದು ಬಸವಳಿದಿದ್ದ ಗ್ರಾಹಕ ನಿಟ್ಟುಸಿರು ಬಿಡುವಂತೆ ಆಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications